Breaking News

10 ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಕೊಂದು ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್​ ಬಳಿ ಇರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ …

Read More »

ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ..

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಭಾನುವಾರ ದಂದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಗ್ರಂಥ ದಿಂಡಿಗೆ ಚಾಲನೆ ನೀಡುವ ಮೂಲಕ ಸಾಹಿತ್ಯ ಸಮ್ಮೇಳೆಕ್ಕೆ ಅಧಿಕೃತವಾಗಿ ಉದ್ಘಾಟಿಸಿದರು.ನಂತರ ಗ್ರಂಥದಿಂಡಿಯು ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು.ಚಿಕ್ಕಮಕ್ಕಳು ಆಕರ್ಷಕ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಮೆರುಗು ತಂದರು. ನಂತರ ವೇದಿಕೆ ಕಾರ್ಯಕ್ರಮ ನೆರವೇರಿತು.ರಾಮಚಂದ್ರ …

Read More »

ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ನಾಗೇಶ ಮನ್ನೋಳಕರ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಂಗಳೂರು ದೆಹಲಿವರೆಗೆ ಓಡಾಡಿ ಇದಿಗ ನಾಗಪೂರಕ್ಕೂ ಪ್ರಯಾಣ ಬೆಳೆಸಿ ಬಿಜೆಪಿ ಮುಖಂಡರನ್ನ ಭೇಟಿ ಆಗಿದ್ದಾರೆ. ರಮೇಶ ಜಾರಕಿಹೊಳಿ …

Read More »

JDS ಪಂಚರತ್ನ ರಥಯಾತ್ರೆ ಮಳೆಯ ಕಾರಣ ನಾಲ್ಕು ದಿನ ಮುಂದಕ್ಕೆ

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭಾನುವಾರದಿಂದ (ಡಿ.11) ಮತ್ತೆ ಆರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯ ಕಾರಣ ನಾಲ್ಕು ದಿನಗಳು ಮುಂದೂಡಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆ ಸುರಿಯುತ್ತಿದೆ. ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆ ಚಿಕ್ಕನಾಯಕನಹಳ್ಳಿಯಿಂದ ಆರಂಭವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ಸಾಗಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ರಥಯಾತ್ರೆ ಮಾರ್ಗ, ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ. 16ರಂದು …

Read More »

ಜಾತ್ರೆ: ವಸ್ತುಪ್ರದರ್ಶನಕ್ಕೆ ಚಾಲನೆ

ರಾಮದುರ್ಗ: ‘ಜಾತ್ರೆಗಳಲ್ಲಿ ಆಯೋಜಿಸುವ ವಸ್ತುಪ್ರದರ್ಶನ ರೈತರಿಗೆ ಮತ್ತು ಯಾತ್ರಿಕರಿಗೆ ಉಪಯುಕ್ತವಾಗುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಕಾಟಾಚಾರದ ವಸ್ತುಪ್ರದರ್ಶನ ಮಾಡಬಾರದು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.   ತಾಲ್ಲೂಕಿನ ಗೊಡಚಿ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಗುರುವಾರ ಗ್ರಾಮ ಪಂಚಾಯ್ತಿ ಏರ್ಪಡಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿ, ‘ಕೃಷಿಗೆ ಉತ್ತೇಜನ ನೀಡುವಂಥ ಮಳಿಗೆಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕೃಷಿ , ತೋಟಗಾರಿಕೆ, ಅರಣ್ಯ ಇಲಾಖೆಗಳು ರೈತರಿಗೆ ನೂತನ ತಾಂತ್ರಿಕತೆಯ ಪರಿಚಯ ಮಾಡಿಕೊಡಬೇಕು’ ಎಂದರು. ತಹಶೀಲ್ದಾರ್‌ …

Read More »

ಗುರ್ಲಾಪುರ: ಯೋಧನ ಅಂತ್ಯಕ್ರಿಯೆ

ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.   ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್‌ …

Read More »

ಶಿಕ್ಷಣಕ್ಕೆ ಮಠಗಳ ಕೊಡುಗೆ ಅಪಾರ: ಡಾ.ಎಸ್‌.ವಿದ್ಯಾಶಂಕರ

ಬೆಳಗಾವಿ: ‘ಶಿಕ್ಷಣ ರಂಗದಲ್ಲಿ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಮಠ-ಮಾನ್ಯಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಿವೆ. ಗ್ರಾಮೀಣ ಭಾಗದ ಬಡ ಮಕ್ಕಳ ಬದುಕು ರೂಪಿಸಿವೆ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್‌.ವಿದ್ಯಾಶಂಕರ ಶ್ಲಾಘಿಸಿದರು.   ಇಲ್ಲಿನ ಆರ್‌.ಎನ್‌.ಶೆಟ್ಟಿ ಪಾಲಿಟೆಕ್ನಿಕ್‌ ನಲ್ಲಿ ಲಿಂ. ಡಾ.ಶಿವಬಸವ ಸ್ವಾಮೀಜಿ 133ನೇ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಡಾ.ಶಿವಬಸವ ಸ್ವಾಮೀಜಿ ಅವರ ವಸ್ತು ಸಂಗ್ರಹಾಲಯ ಉದ್ಘಾಟನೆ ಮತ್ತು ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ …

Read More »

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ನಿಲುವು ತಿಳಿಸಲಿ: ಠಾಕ್ರೆ

(ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.   ಜಲ್ನಾ ಜಿಲ್ಲೆಯ ಸಂತ ರಾಮದಾಸ್ ಕಾಲೇಜಿನಲ್ಲಿ ನಡೆದ 42ನೇ ಮರಾಠವಾಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಭಾನುವಾರ ನಾಗ್ಪುರ- ಮುಂಬೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಬರುತ್ತಿದ್ದಾರೆ. ಅವರನ್ನು …

Read More »

ರಾಜ್ಯಕ್ಕೆ ಬಿಜೆಪಿ ವರಿಷ್ಠರ ದಂಡು: ಡಿಸೆಂಬರ್‌, ಜನವರಿ ಪೂರ್ಣ ಕಾರ್ಯಕ್ರಮಗಳು

ಬೆಂಗಳೂರು: ಗುಜರಾತ್‌ ಗೆಲುವಿನ ಬಳಿಕ ಬಿಜೆಪಿಯ ದಿಲ್ಲಿ ವರಿಷ್ಠರು ಕರುನಾಡಿನತ್ತ ದಂಡಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದೇ ತಿಂಗಳಿನಿಂದ ಸರಣಿ ಸಮಾವೇಶ, ಯೋಜನೆಗಳ ಉದ್ಘಾಟನೆಗಳ ಮೂಲಕ ರಾಜ್ಯ ಮತದಾರರ ಮನಸೆಳೆಯಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ, ಪಕ್ಷದ ಘಟಾನುಘಟಿ ನಾಯಕರನ್ನು ಆಹ್ವಾನಿಸಿದೆ. ಮುಂದಿನ ಎಪ್ರಿಲ್‌, ಮೇ ವೇಳೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಎಲ್ಲ ಸಾಧ್ಯತೆಗಳಿವೆ. ಜನವರಿಯಲ್ಲಿ ಮೋದಿ ಜನವರಿ ಮೊದಲ ವಾರದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ. ಆರೋಗ್ಯ ಇಲಾಖೆಯ ಆಯುಷ್ಮಾನ್‌ …

Read More »

ಗಡಿ ವಿವಾದ ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ

ಬೆಂಗಳೂರು: ಬೆಳಗಾವಿ ಗಡಿ ವಿವಾದ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ವಿವರಣೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.   ಸೋಮವಾರ ರಾಜ್ಯದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದೆ. ಅಮಿತ್‌ ಶಾ ಕೂಡ ತಾವು ಹೇಳಿದಾಗ ಬರಬೇಕಾಗುತ್ತದೆ ಎಂದು ನನಗೆ ತಿಳಿಸಿದ್ದಾರೆ. ಕರ್ನಾಟಕದ ವಿಚಾರ, …

Read More »