Breaking News

500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.

500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …

Read More »

ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …

Read More »

ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಸಜ್ಜು

ಬೆಳಗಾವಿ: ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಬುಧವಾರ ಜನರು ಅದ್ದೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. 1905ರಿಂದ ಇಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಕಳೆದ ಎರಡು ವರ್ಷ ‘ಚೌತಿ’ ಮೇಲೆ ಕೋವಿಡ್‌-19 ಬರೆ ಎಳೆದಿತ್ತು. ಈ ಬಾರಿ ಕೊರೊನಾ ಉಪಟಳ ಇಲ್ಲದೇ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಸರ್ವಭಾಷಿಕರು ಮತ್ತು ಸರ್ವಧರ್ಮೀಯರು ಸಡಗರದಿಂದ ಗಣೇಶ ಚತುರ್ಥಿ ಆಚರಣೆಗೆ ತಯಾರಿ ನಡೆಸಿದ್ದಾರೆ. 378 ಕಡೆ ಸಾರ್ವಜನಿಕ ಗಣೇಶ: …

Read More »

ಬೆಳಗಾವಿ ಗಣೇಶೋತ್ಸವ: ಮಹಾಪುರುಷರ ಪೋಸ್ಟರ್‌ಗೆ ಅನುಮತಿ ಕಡ್ಡಾಯ -ಅಲೋಕ್‌ಕುಮಾರ್‌

ಬೆಳಗಾವಿ: ‘ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ಯಾವುದೇ ಮಹಾಪುರುಷರು, ವ್ಯಕ್ತಿಗಳ ಪೋಸ್ಟರ್‌ ಹಾಕಲು ಆಯಾ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಡಿಜಿಪಿ ಅಲೋಕ್‌ಕುಮಾರ್‌ ತಿಳಿಸಿದರು. ಈ ಬಾರಿ ನಗರದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆದ ಹಿನ್ನೆಲೆಯಲ್ಲಿ, ಮಂಗಳವಾರ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಮಧ್ಯಮಗಳೊಂದಿಗೆ ಮಾತನಾಡಿದರು.   ‘ಮಂಟಪಗಳಲ್ಲಿ ವೀರ ಸಾವರ್ಕರ್‌ ಭಾವಚಿತ್ರ ಹಾಕುವಂತೆ ಕೆಲವರು ಅಭಿಯಾನ ನಡೆಸಿದ್ದಾರೆ. ಸಾವರ್ಕರ್‌, ನೆಹರೂ, ಬಾಲಗಂಗಾಧರ ತಿಲಕ್‌, ಭಗತ್‌ ಸಿಂಗ್‌ …

Read More »

ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ಬಂಧನ

ಅಂಕೋಲಾ : ತಾಲೂಕಿನ ಬಸ್ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ ರಾಜ್ಯ ವ್ಯಕ್ತಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿ ಕಳ್ಳತನ ಮಾಡಿದ 7 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಗುಜರಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಕೇರಳ ಕಾಸರಗೋಡು ನಿವಾಸಿ ಟೋನಿ ಜಾನ್ ಜೇಮ್ಸ್ (34) ಮತ್ತು ಹುಬ್ಬಳ್ಳಿಯ ಗದಗ ರಸ್ತೆ ನಿವಾಸಿ ಮಹಮ್ಮದ್ ಅಲಿ ಮೆಹಬೂಬ್ ಸಾಬ ಕುಂದಗೋಳ(38) ಬಂಧಿತ ಆರೋಪಿಗಳು.   ಅಂಕೋಲಾ ಪಿ.ಎಸ್. ಐ …

Read More »

ಮಂಗಳವಾರ ಏಳು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಗಣೇಶ ಹಬ್ಬದ ಹಿಂದಿನ ದಿನವಾದ ಮಂಗಳವಾರ ಏಳು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ. ಡಾ.ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್‌.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. …

Read More »

ವಿಘ್ನನಾಶಕನ ಹಬ್ಬ ಆರೋಗ್ಯಪೂರ್ಣವಾಗಿರಲಿ:

ಕೊರೊನಾದಂಥ ಮಹಾವಿಘ್ನದಿಂದಾಗಿ ಎರಡು ವರ್ಷಗಳಲ್ಲಿ ಗಣಪನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶ ಆಗಲೇ ಇಲ್ಲ. ಈಗ ಸಾರ್ವಜನಿಕವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಲು ಕೊನೆಯ ಹಂತದ ಸಿದ್ಧತೆಗಳು ನಡೆದಿವೆ. ಈ ಸಂಭ್ರಮದ ಕ್ಷಣದಲ್ಲೇ ನಾವು ಮೈ ಮರೆಯುವ ಹಾಗಿಲ್ಲ. ಈ ವರ್ಷವೂ ನಾವೆಲ್ಲರೂ ಎಚ್ಚರಿಕೆಯಿಂದ ಹಬ್ಬವನ್ನು ಆಚರಿಸ ಬೇಕಾಗಿದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ಹಾವಳಿ ನಿಧಾನವಾಗಿ ಇಳಿಕೆಯಾಗುತ್ತಿದೆ ಮತ್ತು ಸೋಂಕಿನ ಪ್ರಭಾವದಿಂದ ಉಂಟಾಗಿರುವ ಆರ್ಥಿಕ …

Read More »

ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆ

ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಮುಂದುವರಿದಿದ್ದು, ಸಂತ್ರಸ್ತ ಬಾಲಕಿಯರನ್ನು ಮಂಗಳವಾರ ನಗರದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು.   ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್‌ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಜಮಾಯಿಸಿದ ಜನ, ಪ್ರತಿಭಟನೆ …

Read More »

ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ-ನಿರ್ಮಲಕುಮಾರ್ ಸುರಾನಾ ಕರೆ

ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, …

Read More »

ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧಿಸಿ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು

ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಜಮೀನಿನಲ್ಲಿ ಆರೋಪಿಯೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಜಮೀನಿನಲ್ಲಿ ಬೆಳೆದಿದ್ದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. …

Read More »