Breaking News

ಸಾವರ್ಕರ್ ಮೆರವಣಿಗೆ ಮಾಡಿದರೆ ನಾವು ಕಿತ್ತೂರು ಚೆನ್ನಮ್ಮ ಯಾತ್ರೆ ಮಾಡ್ತೇವೆ :ಎಂ.ಬಿ.ಪಾಟೀಲ

ವಿಜಯಪುರ : ಬಿಜೆಪಿ ನಾಯಕರು ವಿವಾದಿತ ಸಾವರ್ಕರ್ ಮೆರವಣಿಗೆ, ಗಣೇಶ ಉತ್ಸವದಲ್ಲಿ ಭಾವಚಿತ್ರ ವಿತರಿಸಿದರೆ, ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕನ್ನಡ ನಾಡಿನ ಪ್ರಾಮಾಣಿಕ ಹೋರಾಟಗಾರರಾದ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸುರಪುರದ ವೆಂಕಟಪ್ಪ ನಾಯಕರಂತ ದೇಶಪ್ರೇಮಿ ವೀರ ಹೋರಾಟಗಾರರ ರಥಯಾತ್ರೆ ನಡೆಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿರುಗೇಟು ನೀಡಲು ಮುಂದಾಗಿದ್ದಾರೆ.   ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅವರು ವಿವಾದಿತ ಸಾವರ್ಕರ್ ಯಾತ್ರೆಗೆ …

Read More »

ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ..

ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಪರಿಹಾರ ಘೋಷಣೆ: ‘ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ …

Read More »

ತಾಯಿಯೊಬ್ಬಳು ಪ್ಲಾಸ್ಟಿಕ್‌ ಕವರ್​ನಲ್ಲಿ ಗಂಡು ಮಗುವನ್ನಿಟ್ಟು ಮರಕ್ಕೆ ನೇತು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ …

Read More »

ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆ

ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೌದು ಗೋಕಾಕ್‍ನಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಗ್ರಾಮದ ಎಲ್ಲಾ ದೇವಾಲಯಗಳಿಗೆ ಹೋಗಿ ನಮಸ್ಕರಿಸಿ, ನಂತರ ಸಮವಸ್ತ್ರಳನ್ನು ನೀಡಿದ ಅನ್ನಪೂರ್ಣಾ ಅನಿಲ ನಿರ್ವಾಣಿ ಅವರ ಮನೆಗೆ ಯುವಕರು ತೆರಳಿ ಅವರ ಆಶೀರ್ವಾದ ಪಡೆದುಕೊಂಡರು.

Read More »

ಮಹಾನಿಂಗ ನಂದಗಾವಿ ಬೆಳಗಾವಿ ಹೆಚ್ಚುವರಿ S.P. ಆಗಿ ಮುಂದುವರಿಕೆ

ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.

Read More »

ಬೆಳಗಾವಿಯ 12 ಪೌರಕಾರ್ಮಿಕರಿಗೆ ಮನೆ ವಿತರಿಸಿದ್ದೇವೆ: ಎಂ.ಶಿವಣ್ಣ ಕೋಟೆ

ಖಾಯಂ ಪೌರಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆದರೆ ನೇರಪಾವತಿ ಅವರಿಗೆ ಜಾಗ, ಮನೆಗಳು ಸಿಗುತ್ತಿಲ್ಲ. ಹೀಗಾಗಿ ಅವರಿಗೂ ಎಲ್ಲೆಲ್ಲಿ ಅವಕಾಶ ಇದೆ, ಅಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸುವರ್ಣವಿಧಾನಸೌಧಲ್ಲಿ ಬೆಳಗಾವಿ ಜಿಲ್ಲೆಯಲ್ಲಿ …

Read More »

ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯ

ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಿಸಿಕೊಳ್ಳುವ ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯಿಸಿದೆ. ಗುರುವಾರದಂದು ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಬಾರ್ ಅಸೋಸಿಯೇಷನ್‍ನ ಸದಸ್ಯರು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮನವಿವನ್ನು ಸಲ್ಲಿಸಿದರು.ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು …

Read More »

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.   ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.   ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …

Read More »

ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತುಮಕೂರು: ತುಮಕೂರು ಜಿಲ್ಲೆ‌ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ.   ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …

Read More »

ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ

ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್‌ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …

Read More »