ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …
Read More »ಗಾಂಧಿ ಜಯಂತಿಯಂದು 2 ಟನ್ ಗೋಮಾಂಸ ಸಾಗಣೆ: ಐವರು ಆರೋಪಿಗಳ ಬಂಧನ
ಕಾರವಾರ(ಉತ್ತರ ಕನ್ನಡ): ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮೂರು ವಾಹನಗಳ ಸಮೇತ ಬಂಧಿಸಿರುವ ಘಟನೆ ಜೊಯಿಡಾದ ಅನಮೋಡ ಅಬಕಾರಿ ಚೆಕ್ಪೋಸ್ಟ್ನಲ್ಲಿ ಭಾನುವಾರ ನಡೆದಿದೆ. ಹುಬ್ಬಳ್ಳಿಯಿಂದ ಗೋವಾ ಕಡೆಗೆ ಹಸುಗಳನ್ನು ವಧೆ ಮಾಡಿ ಮಾಂಸವನ್ನು ಎರಡು ಮಹೀಂದ್ರ ಬುಲೆರೋ ಪಿಕಪ್ ಹಾಗೂ ಒಂದು ಟಾಟಾ 407 ವಾಹನದಲ್ಲಿ ಗೋವಾಕ್ಕೆ ಸಾಗಿಸುತ್ತಿದ್ದ ಬಗ್ಗೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನಾ ಪನ್ನೇಕರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು. …
Read More »ಗದಗ _ಬೆಟಗೇರಿ ಅವಳಿ ನಗರದಲ್ಲಿ ಹದಗೆಟ್ಟ ರಸ್ತೆ ರಿಪೇರಿ ಮಾಡಿಸಿ.. ಶಾಸಕ ಹೆಚ್ ಕೆ ಪಾಟೀಲ್
ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗದಗ ಮತಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್ ಮನವಿ ಮಾಡಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ಸಂಚರಿಸುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ …
Read More »ಭ್ರಷ್ಟಾಚಾರ ಮೊಟ್ಟೆಗೆ ಕಾವು ಕೊಟ್ಟಿದ್ದೇ ಕಾಂಗ್ರೆಸ್: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಮೊಟ್ಟೆಯಿಟ್ಟು, ಅದಕ್ಕೆ ದಿನವೂ ಕಾವು ಕೊಟ್ಟು, ನೂರಾರು ಮರಿ ಹುಟ್ಟು ಹಾಕಿ ರಕ್ತಬೀಜಾಸುರರಂತೆ ಬೆಳೆಸಿದೆ. ಅದನ್ನು ಎಷ್ಟೇ ತೊಡೆದು ಹಾಕಲು ಪ್ರಯತ್ನಿಸಿದರೂ ಕಾಂಗ್ರೆಸ್ ಕಸ(ಹುಲ್ಲು)ದಂತೆ ಬೆಳೆಯುತ್ತಿದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಈಗ ನಕಲಿ ಗಾಂಧಿ ಪರಿವಾರ ಈ ಬಗ್ಗೆ ಮಾತನಾಡುತ್ತಿರುವುದೇ ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯತೆ …
Read More »ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್’
ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್’ ತಲುಪಿಲ್ಲ. ಟ್ಯಾಬ್ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ …
Read More »ಬಿಸಿಯೂಟ ವೆಚ್ಚ ಶೇ.9.6 ಹೆಚ್ಚಳ; 2 ವರ್ಷಗಳ ಬಳಿಕ ಕೇಂದ್ರದ ಕ್ರಮ
ನವದೆಹಲಿ: ಎರಡು ವರ್ಷಗಳ ನಂತರ ಕೇಂದ್ರ ಸರ್ಕಾರ ಮಧ್ಯಾಹ್ನದ ಬಿಸಿಯೂಟ ವೆಚ್ಚವನ್ನು ಪ್ರತಿ ಮಗುವಿಗೆ ಶೇ. 9.6ರಷ್ಟು ಹೆಚ್ಚಳ ಮಾಡಿದೆ. ಬಿಸಿಯೂಟಕ್ಕೆ ಸಂಬಂಧಿಸಿದ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಹಣಕಾಸು ಇಲಾಖೆ ಇದಕ್ಕೆ ಅನುಮೋದನೆ ನೀಡಿದೆ. ಈ ವೆಚ್ಚ ಹೆಚ್ಚಳವೂ ಹಾಲಿ ತಿಂಗಳಿನಿಂದಲೇ ಜಾರಿಗೆ ಬರಲಿದೆ. ತರಕಾರಿ, ಬೇಳೆಕಾಳುಗಳು ಸೇರಿದಂತೆ ಅಡುಗೆ ಅನಿಲ ದರ ಹೆಚ್ಚಳದ ಹಿನ್ನೆಲೆಯಲ್ಲಿ ಬಿಸಿಯೂಟದ ವೆಚ್ಚವನ್ನು ಹೆಚ್ಚಿಸಬೇಕೆಂದು ಶಾಲಾ ಅಭಿವೃದ್ಧಿ ಸಮಿತಿ ಮತ್ತು ಸಾಮಾಜಿಕ ಕಾರ್ಯಕರ್ತರು ಮನವಿ …
Read More »ಗಾಂಧಿ ಜಯಂತಿ ನಿಮಿತ್ತ ಶಾಂತಾಯಿ ವೃದ್ಧಾಶ್ರಮದ ಹಿರಿಜಿವಗಳಿಗೆ ಉಪಹಾರ ವ್ಯವಸ್ಥೆ ಮಾಡಿದ ಬಸವರಾಜ್ ಯಳ್ಳೂರು ಕರ
ಬೆಳಗಾವಿ : ಗಾಂಧಿ ಜಯಂತಿ ನಾಡಿನ ಪಿತಾಮಹ ಗಾಂಧಿ ಇಂದು ಇಡೀ ನಮ್ಮ ರಾಷ್ಟ್ರವೇ ಈ ಒಂದು ದಿನವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತೆ . ಇಂದು ಸುಮಾರು ಜನ ಸುಮಾರು ಕೆಲಸ ಗಳನ್ನಾ ಮಾಡುತ್ತಾರೆ ಆದ್ರೆ ಇಂದು ಸುಮಾರು ಸಮಾಜ ಸೇವೆಗಳನ್ನು ಮಾಡಿದರು ತೆರೆ ಮೇಲೆ ಬರದ ಒಬ್ಬ ವ್ಯಕ್ತಿಯ ಪರಿಚಯ ವನ್ನಾ ಮಾಡಿ ಕೊಡ್ತೇವೆ ಇಂದು ಕಣಬರಗಿ ಮೂಲದ ಬಸವರಾಜ ಯಳ್ಳೂರು ಕರ ಅವರು ಶಂತಾಯಿ …
Read More »ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಬೆನಕೆ
ಬೆಳಗಾವಿ: ಇಲ್ಲಿನ ಮಾರುತಿ ನಗರದಿಂದ ಶಿಂಧೊಳ್ಳಿ ಕ್ರಾಸ್ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹21.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಾಯಚೂರು-ಬಾಚಿ ರಾಜ್ಯ ಹೆದ್ದಾರಿಯಲ್ಲಿನ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಅವರು ಮಾತನಾಡಿ, ‘ಇದು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಮುಖ್ಯರಸ್ತೆಯಾಗಿದೆ. ಜನರಿಗೆ ಅನುಕೂಲವಾಗಲೆಂದು ಇದನ್ನು ಅಭಿವೃದ್ಧಿಪಡಿಸುತ್ತಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ನಿಗದಿತ ಕಾಲಮಿತಿಯಲ್ಲಿ …
Read More »7 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಕ್ರಮ: C.M. ಬೊಮ್ಮಾಯಿ
ಬೆಂಗಳೂರು: ‘ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಬಾಕಿಯಿದ್ದು ಶೀಘ್ರವೇ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ನಗರದಲ್ಲಿ ಭಾನುವಾರ ಗಾಂಧಿ ಸ್ಮಾರಕ ನಿಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ’23 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಜಾಗದ ಸಮಸ್ಯೆಯ ಕಾರಣಕ್ಕೆ ಕೆಲವು ಜಿಲ್ಲೆಗಳಲ್ಲಿ …
Read More »194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …
Read More »
Laxmi News 24×7