ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ …
Read More »ಸಂತೋಷ್ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ
ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ …
Read More »ರಾಜೀನಾಮೆ ಸ್ವೀಕಾರ ಮಾಡಿಲ್ಲ, ನನ್ನನ್ನು ಸಿಲುಕಿಸುವ ಸಂಚು ಇರಬಹುದು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್
ಬಾಗಲಕೋಟೆ, ಆ. 23: ‘ಒಂದು ವರ್ಷವಾದರೂ ನನ್ನ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಹೀಗಾಗಿ, ನನ್ನನ್ನು ಸಿಲುಕಿಸುವ ಸಂಚು ಇರಬಹುದು’ ಎಂದು ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರಿದರೆ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಹೀಗಾಗಿ, ಇನ್ನೂ ರಾಜೀನಾಮೆ ಸ್ವೀಕಾರ ಮಾಡಿಲ್ಲ. ಅಲ್ಲದೆ, ನನ್ನನ್ನು ಯಾವುದರಲ್ಲಾದರೂ ಸಿಕ್ಕಿಸಬಹುದು’ ಎಂದು ಅವರು …
Read More »35 ಸಾವಿರಕ್ಕೂ ಅಧಿಕ ಉರಗಗಳ ರಕ್ಷಣೆ ಮಾಡಿದ್ದ ‘ಸ್ನೇಕ್ ಲೋಕೇಶ್’ ಇನ್ನಿಲ್ಲ: ಹಾವಿನಿಂದಲೇ ದಾರುಣ ಅಂತ್ಯ
ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್ ಲೋಕೇಶ್ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್ ಲೋಕೇಶ್ ಮೃತಪಟ್ಟಿದ್ದಾರೆ. ಹಾವು ಕಡಿತದಿಂದಲೇ ಅವರು ದಾರುಣ ಅಂತ್ಯ ಕಂಡಿದ್ದಾರೆ! ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ …
Read More »NDTV ಖರೀದಿಸಿದ ಗೌತಮ್ ಅದಾನಿ
ನವದೆಹಲಿ, ಆಗಸ್ಟ್ 23: ನ್ಯೂ ಡೆಲ್ಲಿ ಟೆಲಿವಿಷನ್(NDTV) ಮಾಧ್ಯಮ ಸಂಸ್ಥೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಉದ್ಯಮಿ ಗೌತಮ್ ಅದಾನಿ ಎಂಟ್ರಿ ಕೊಟ್ಟಿದ್ದಾರೆ. ಸರಿ ಸುಮಾರು 29.18 ರಷ್ಟು ಪಾಲನ್ನು ಅದಾನಿ ಎಂಟರ್ ಪ್ರೈಸಸ್ ಖರೀದಿಸಿದ್ದು, ಈ ಮೂಲಕ NDTV ಅದಾನಿ ಸಂಸ್ಥೆ ಪಾಲಾಗಿದೆ ಎನ್ನಬಹುದು. ಅದಾನಿ ಎಂಟರ್ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್ನಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಖರೀದಿಸಲಿದೆ ಮತ್ತು …
Read More »ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …
Read More »ಚಿರತೆ ಶೋಧ ಕಾರ್ಯಕ್ಕೆ ಅತ್ಯಾಧುನಿಕ ೩ ಇನ್ಫ್ರಾರೆಡ್ ಡ್ರೋನ್ಗಳ ಬಳಕೆ, ೧೨೦ ಅರಣ್ಯ ಸಿಬ್ಬಂದಿ, ೮೦ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ
ಬೆಳಗಾವಿಯಲ್ಲಿ ತಲೆ ಮರೆಸಿಕೊಂಡಿರುವ ಚಿರತೆ ಶೋಧ ಕುರಿತಂತೆ ಕೈಗೊಂಡ ಕ್ರಮಗಳನ್ನು ಕುರಿತಂತೆ ಇಂದು ಶಾಸಕ ಅನೀಲ್ ಬೆನಕೆ ನೇತೃತ್ವದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಪರಿಣಿತರೊಂದಿಗೆ ಚರ್ಚೆಯನ್ನು ನಡೆಸಿದರು. ಚಿರತೆ ಸೆರೆಗೆ ಕೂಗೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಚರ್ಚಿಸಿದರು. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆೆ ಪ್ರತ್ಯಕ್ಷವಾಗುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಹರಸಾಹಸವನ್ನು ಮಾಡುತ್ತಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಬೆನಕೆ …
Read More »4ಲಕ್ಷ ರೂಪಾಯಿಯನ್ನು ದೋಚಿ ಅವರನ್ನು ಅಪಹರಿಸಿ ಮತ್ತೆ 20 ಲಕ್ಷ ಬೇಡಿಕೆಯಿಟ್ಟಿದ್ದ ಐವರನ್ನು ಬೆಳಗಾವಿ ಹಿರೇಬಾಗೇವಾಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ನಿವೃತ್ತ ಸರ್ಕಾರಿ ನೌಕರರೋರ್ವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಿ ಅವರನ್ನು ಅಪಹರಿಸಿ ಮತ್ತೆ ೨೦ ಲಕ್ಷ ಬೇಡಿಕೆಯಿಟ್ಟಿದ್ದ ಐವರನ್ನು ಬೆಳಗಾವಿ ಹಿರೇಬಾಗೇವಾಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದೇ ಆಗಸ್ಟ್ ೨೧ ರಂದು ಬೆಳಗಾವಿಯ ಮುತ್ನಾಳ ಗ್ರಾಮದ ರಾಷ್ಟಿçÃಯ ಹೆದ್ದಾರಿ ೦೪ ರಲ್ಲಿ ಸಂಚರಿಸುತ್ತಿದ್ದ ಅರಣ್ಯ ಇಲಾಖೆಯ ನಿವೃತ್ತ ಅಧೀಕ್ಷಕಯೋರ್ವರನ್ನು ಅಡ್ಡಗಟ್ಟಿ ಅವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಲಾಗಿತ್ತು. ಅಲ್ಲದೇ ಅವರನ್ನು ಅಪಹರಿಸಿ ಇನ್ನು ೨೦ ಲಕ್ಷ ರೂಪಾಯಿಯ …
Read More »ಬಿಎಸ್ವೈ ಬೆಂಗಾವಲು ವಾಹನಗಳ ಹಿಂದೆ ಬರ್ತಿದ್ದ ಕಾರುಗಳ ಮಧ್ಯೆ ಭೀಕರ ಅಪಘಾತ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನಗಳ ಹಿಂದೆ ಬರುತ್ತಿದ್ದ ಕಾರುಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ. ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಿಎಸ್ವೈ ಹಿಂದೆ ಸಾಗುವ ಬರದಲ್ಲಿ KSIIDC ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಸಂದೇಶ್ ಇರುವ ಕಾರುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಿಜೆಪಿ ಮುಂಖಂಡ ಹಾಗೂ KSIIDC ನಿರ್ದೇಶಕ ಮಹದೇವಸ್ವಾಮಿ ಮಧ್ಯೆ ವಾಗ್ವಾದ ನಡೆದಿದೆ.
Read More »ಸಿದ್ದರಾಮಯ್ಯ ಮೇಲೆ ವಿನಾಕಾರಣ ಆರೋಪ; ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ: ಮುತಾಲಿಕ್
ಹುಬ್ಬಳ್ಳಿ: ‘ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪಿಲ್ಲ, ಅವರು ತಪ್ಪು ಮಾಡಿಲ್ಲ. ಅವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ’ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದೆ ಎನ್ನುವುದು ಚರ್ಚೆ ವಿಷಯವೇ ಅಲ್ಲ. ನಮ್ಮಲ್ಲಿ ಮಾಂಸ ಸೇವಿಸುವ ಮತ್ತು ಸೇವನೆ ಮಾಡದಿರುವ ಭಕ್ತರು ಸಾಕಷ್ಟು ಇದ್ದಾರೆ’ ಎಂದರು. ಮಾಂಸ …
Read More »