Breaking News

ಕೆಪಿಟಿಸಿಎಲ್‌ ಅಕ್ರಮ ಪರೀಕ್ಷೆ: ಬಂಧಿತರ‌ ಸಂಖ್ಯೆ ಅರ್ಧ ಶತಕ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ.   ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್‌ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …

Read More »

ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್‌ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …

Read More »

ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಮಂಗಳೂರು: ಮಂಗಳೂರಿನ ಮೆಡಿಕಲ್‌ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್‌ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ.   ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ …

Read More »

ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ ಪಂಚಮಸಾಲಿ ಸಮಾಜ

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2A ಬದಲಾಗಿ 2D ಮಿಸಲಾತಿ ನೀಡಿರುವ ಹಿನ್ನಲೆ ನಾಳೆ(ಜ.13) ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಶಿಗ್ಗಾಂವಿಯ ರಾಣಿ ಚೆನ್ನಮ್ಮ ಸರ್ಕಲ್​ನಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಯಲಿದೆ.   ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮಿ …

Read More »

ಸ್ವಾಮಿ ವಿವೇಕಾನಂದರ ಸ್ಫೂರ್ತಿಯಿಂದ ದೇಶ ಮುಂದಕ್ಕೆ ಕೊಂಡೊಯ್ಯಬೇಕು: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರಿಂದ ಸ್ಫೂರ್ತಿ ಪಡೆದು ತಮ್ಮ ಪ್ರಯತ್ನ ಮತ್ತು ಜವಾಬ್ದಾರಿಗಳ ಮೂಲಕ ಅಮೃತ ಕಾಲದ ಸಮಯದಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವುದು ಭಾರತೀಯ ಯುವಕರ ಮಂತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.   26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ ನಡೆಸಿ ಮಾತನಾಡಿ, 2023 ರ ರಾಷ್ಟ್ರೀಯ ಯುವ ದಿನದ ಈ ದಿನ ಬಹಳ ವಿಶೇಷವಾಗಿದೆ. ಒಂದೆಡೆ ಈ ಶಕ್ತಿ ಹಬ್ಬ ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಏಳಿ …

Read More »

ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್‌ ಚಾನೆಲ್‌ಗ‌ಳಿಗೆ ನಿಷೇಧ

ನವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್‌ ಚಾನೆಲ್‌ಗ‌ಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್‌ ಇನ್ಫೋರ್ಮೇಷನ್‌ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್‌ ಚಾನೆಲ್‌ಗ‌ಳು 51 ಕೋಟಿ ವೀಕ್ಷಕರನ್ನು ಹೊಂದಿವೆ. ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ …

Read More »

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಹಿತಿ ಇಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುದರು.   ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು …

Read More »

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿಯೂ ಧರ್ಮ ದಂಗಲ್‌ ಶುರು

ಬೆಳಗಾವಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿಯೂ ಧರ್ಮ ದಂಗಲ್‌ ಶುರುವಾಗಿದ್ದು, ಇಲ್ಲಿಯ ಸಾರಥಿ ನಗರದಲ್ಲಿ ವಸತಿ ನಿವೇಶನಕ್ಕೆ ಅನುಮತಿ ಪಡೆದು ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಅನ ಧಿಕೃತ ಮಸೀದಿ ತೆರವಿಗೆ ಪಟ್ಟು ಹಿಡಿದಿವೆ. ಬೆಳಗಾವಿ ಗ್ರಾಮಿಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸಾರಥಿ ನಗರದಲ್ಲಿ ಕರ್ನಾಟಕ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ ಖಾಸಗಿ ಲೇಔಟ್‌ ನಿರ್ಮಿಸಲಾಗಿದೆ. ನಿವೇಶನ ಸಂಖ್ಯೆ …

Read More »

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ಬೆಂಗಳೂರು: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (ಜ. 26) ಪೆರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ. ಕರ್ನಾಟಕ ಮಂಡಿಸಿದ್ದ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈಬಿಟ್ಟಿತ್ತು. ಇದು ಭಾರೀ ಟೀಕೆಗೆ ಕಾರಣವಾಗಿತ್ತು. ದೇಶದ ಇತರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರವನ್ನು ಪರಿಗಣಿಸಿಲ್ಲ ಎಂದು ಹೇಳಲಾಗಿತ್ತು. ರಕ್ಷಣಾ ಸಚಿವಾಲಯ ಸೆ.1ರಂದು ದೇಶದ ಎಲ್ಲ ರಾಜ್ಯ ಮತ್ತು …

Read More »

ಮದ್ಯ ಖರೀದಿ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ

ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ತರಲಾಗುತ್ತಿದೆ.   ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್‌ 10 (1) (ಇ) ಅಡಿಯಲ್ಲಿ …

Read More »