Breaking News

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ

ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ …

Read More »

ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!

ನೆಲಮಂಗಲ: ಇಲ್ಲೊಂದು ಕೊಲೆ ನಡೆದ 50 ದಿನಗಳ ಬಳಿಕ ಕೊಲೆಗೀಡಾದವನ ಅಸ್ಥಿಪಂಜರ ಪತ್ತೆಯಾಗಿದ್ದು, ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯೇ ಕೊಲೆಗಾತಿ ಎಂಬುದು ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.   ರಾಯಚೂರು ಮೂಲದ ದೊಡ್ಡಲಿಂಗಪ್ಪ (45) ಕೊಲೆಯಾದ ವ್ಯಕ್ತಿ. ಲಕ್ಷ್ಮೀ (35) ಮತ್ತು ವೆಂಕಟೇಶ್​ (40) ಕೊಲೆ ಆರೋಪಿಗಳು. ಲಕ್ಷ್ಮೀಗೆ ವೆಂಕಟೇಶ್ ಜತೆಗಷ್ಟೇ ಅಲ್ಲದೆ, ದೊಡ್ಡಲಿಂಗಪ್ಪ ಜತೆಗೂ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಜು. …

Read More »

ಬಿಪಿಎಲ್ ಕಾರ್ಡ್ ರದ್ದಾದರೆ ಸರ್ಕಾರಿ ಸೌಲಭ್ಯಗಳೂ ಕಟ್; ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು :ಅನರ್ಹರ ಬಳಿಯಿದ್ದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿದೆ. ಈ ಮೂಲಕ ಕಾರ್ಡ್​ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್​ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಸುಳ್ಳು ದಾಖಲೆ ಸಲ್ಲಿಸಿ ಸರ್ಕಾರಿ ಸೌಲಭ್ಯ ಪಡೆಯುತ್ತಿದ್ದವರಿಗೆ ಕ್ರಿಮಿನಲ್ ಕೇಸ್ ಭೀತಿಯೂ ಶುರುವಾಗಿದೆ. ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3,30,024 ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 …

Read More »

ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ..? ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ಮಾಂಸಾಹಾರ ಸೇವಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೇವಸ್ಥಾನಕ್ಕೆ ತೆರಳಿದ್ದ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಬರಬೇಡಿ ಎಂದು ದೇವರು ಹೇಳಿದ್ದಾರಾ? ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.   ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ ಅವರು ಸಹ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಹುದು ಎಂದು ಹೇಳಿದರೆ ಬಂದು …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

  ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು

Read More »

ಹಿಂಡಲಗಾ ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ

ಬೆಳಗಾವಿ: ಹಿಂಡಲಗಾ ಡಬಲ್ ರಸ್ತೆಯ ಮಧ್ಯೆ ಇಂದು ಬೆಳಿಗ್ಗೆ ಚಿರತೆ ಮತ್ತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಿಣ ಭಾಗದ 22 ಶಾಲೆಗಳಿಗೆ ಇಂದು (ಸೋಮವಾರ 22/8/2022) ಮತ್ತೆ ರಜೆ ನೀಡಲಾಗಿದೆ. ಕಳೆದ ವಾರವೂ ಈ ಭಾಗದ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ತೀವ್ರ ಶೋಧ ಕಾರ್ಯಾಚರಣೆಗಳ ನಂತರವೂ ಚಿರತೆ ಕಾಣಿಸದೆ ಇದ್ದಾಗ ಮತ್ತೆ ಶಾಲೆಗಳನ್ನು ಆರಂಭಿಸಲಾಗಿತ್ತು.     ಬಸ್ ಚಾಲಕರೊಬ್ಬರು ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯವನ್ನು ಮೊಬೈಲ್ …

Read More »

ಎಸ್​ಟಿ ಮೀಸಲಾತಿ ಹೆಚ್ಚಳಕ್ಕಾಗಿ ಕಳೆದ 6 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ ಮಾಡಿ, ಕಾನೂನಾತ್ಮಕ ನೆರವು ನೀಡುವುದಾಗಿ ಭರವಸೆ

ಬೆಂಗಳೂರು: ಪರಿಶಿಷ್ಟ ಪಂಗಡ(ಎಸ್​ಟಿ) ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಸ್ವಾಮೀಜಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಶೇ.3 ರಿಂದ ಶೇ.7.5 ರಷ್ಟು ಎಸ್.ಟಿ ಸಮುದಾಯದ ಮೀಸಲಾತಿ …

Read More »

ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು …

Read More »

ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಶಶಿಧರಕುರೇರ ನೇಮಕ

ಬೆಳಗಾವಿ – ಐಎಎಸ್ ಅಧಿಕಾರಿಯಾಗಿ ಈಚೆಗಷ್ಟೆ ಭಡ್ತಿ ಪಡೆದಿರುವ ಬೆಳಗಾವಿಯ ಮಲಪ್ರಭಾ, ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(ಕಾಡಾ) ಆಡಳಿತಾಧಿಕಾರಿ ಶಶಿಧರ ಕುರೇರ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಕುರೇರ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಹಾಲಿ ಸಿಇಒ ಚಂದ್ರಶೇಖರ ನಾಯಕ ಅವರ ಸ್ಥಾನದಲ್ಲಿ ಕುರೇರ ಅವರು ನೇಮಕವಾಗಿದ್ದು, ಇದು ಐಎಎಸ್ ಅಧಿಕಾರಿಯಾಗಿ ಅವರ ಮೊದಲ ಹುದ್ದೆಯಾಗಿದೆ. ಕುರೇರ ಅವರು …

Read More »

ಜಿಲ್ಲೆಯ ಎರಡು ಕಡೆಗಳಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯವರು ಜಂಟಿ ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ಕಿ ಅಕ್ರಮ ಬಯಲು

ಬೆಳಗಾವಿ: ಜಿಲ್ಲೆಯ ಎರಡು ಕಡೆಗಳಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯವರು ಜಂಟಿ ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ಕಿ ಅಕ್ರಮ ಬಯಲು ಮಾಡಿದ್ದಾರೆ. ಹಾರೂಗೇರಿ ಪೊಲೀಸರು ಹಿಡಕಲ್ ಬಳಿ ದಾಳಿ ನಡೆಸಿ ಕ್ಯಾಂಟರ್ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ 11.520 ಟನ್ ಅಕ್ರಮ ಅಕ್ಕಿ ವಶಪಡಿಸಿಕೊಂಡಿದ್ದಾರೆ. 384 ಚೀಲಗಳಲ್ಲಿ ಸಾಗಿಸಲಾಗುತ್ತಿದ್ದ ಈ ಅಕ್ಕಿ ಮೌಲ್ಯ 2,53, 440 ರೂ. ಆಗಿದೆ. ಈ ಸಂಬಂಧ ಲಾರಿ ಮಾಲೀಕ ಹಾಗೂ ಚಾಲಕ, ಮೂಡಲಗಿಯ ಸಂಗನಕೇರಿ …

Read More »