Breaking News

ಮಾತನಾಡಲು ಅವಕಾಶವಿಲ್ಲ, ಪಾದಯಾತ್ರೆ ಬಿಟ್ಟು ನಮಗೆ ಬೇರೆ ದಾರಿಯಿಲ್ಲ; ರಾಹುಲ್ ಗಾಂಧಿ

ಚಾಮರಾಜನಗರ: ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ. ಸಂಸತ್ತಿನಲ್ಲಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ, ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶವಿಲ್ಲ. ಆದ್ದರಿಂದ ಪಾದಯಾತ್ರೆ ಬಿಟ್ಟು ಬೇರೆ ದಾರಿ ನಮಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.   ಗುಂಡ್ಲುಪೇಟೆಯ ಮೂಲಕ ಶುಕ್ರವಾರ ರಾಜ್ಯ ಪ್ರವೇಶಿಸಿದ ‘ಭಾರತ್ ಜೋಡೋ ಯಾತ್ರೆ’ಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು …

Read More »

ದಸರಾ ಹಿನ್ನೆಲೆ KSRTCಯಿಂದ 2000 ಹೆಚ್ಚುವರಿ ಬಸ್ ಸೇವೆ

ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ …

Read More »

ಬಂಡೀಪುರ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿಎಂಟ್ರಿ

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್​​ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ತೆರಳಿ ಸ್ವಾಗತಿಸಿದ್ದಾರೆ‌‌. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ‌. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ‌.ಜೆ. ಜಾರ್ಜ್ ಸೇರಿದಂತೆ ಹತ್ತು ಹಲವು ನಾಯಕರುಗಳು ಭಾಗಿಯಾಗಿದ್ದಾರೆ. ಗುಂಡ್ಲುಪೇಟೆಯ ಹಂಗಳ ಗ್ರಾಮದ …

Read More »

ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ: ಗುಂಡ್ಲುಪೇಟೆ ಶಾಸಕ

ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ ಆಗಿದೆ. ಇದೊಂದು ಹುಚ್ಚನ ಮದುವೆ ಇದ್ದಂತೆ ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಲೇವಡಿ ಮಾಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಈಗ ಫೇಸ್ ವ್ಯಾಲ್ಯೂ ಇಲ್ಲ. ಜನರಿಗೆ ಈಗಾಗಲೇ ಅವರ ಕ್ಷಮತೆ ಬಗ್ಗೆ ಅರ್ಥವಾಗಿದೆ. ಇವರ ಕೈಯಲ್ಲಿ ದೇಶ ನಡೆಸಲು ಆಗ್ತಾ ಇಲ್ಲ ಎಂಬುದು ಗೊತ್ತಾಗಿದೆ. ಅವರ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಷ್ಟ ಇಲ್ಲ …

Read More »

ಬೆಳಗಾವಿಯ VTUಗೆ ನೂತನ ಕುಲಪತಿ: VC ಆಗಿ ವಿದ್ಯಾಶಂಕರ ನೇಮಕ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ನೂತನ ಕುಲಪತಿ ಆಗಿ ಡಾ. ವಿದ್ಯಾಶಂಕರ ಎಸ್ ನೇಮಕಗೊಂಡಿದ್ದಾರೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆದೇಶದ ಮೇರೆಗೆ ಡಾ. ವಿದ್ಯಾಶಂಕರ ಅವರು ಮೂರು ವರ್ಷಗಳ ಅವಧಿಗೆ ವಿಟಿಯು ಕುಲಪತಿ ಆಗಿ ನೇಮಕಗೊಂಡಿದ್ದಾರೆ.

Read More »

ಕೋಣೆಯಲ್ಲಿ ಕೂಡಿ ಹಾಕಿ ಬಾಲಕಿ ಮೇಲೆ ಗ್ಯಾಂಗ್​ರೇಪ್​: ಮೂವರು ಆರೋಪಿಗಳು ಅಂದರ್

ಸಿಮ್ಡೆಗಾ (ಜಾರ್ಖಂಡ್): ಜೂನ್ 5 ರಂದು 14 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ಕೊಲೆಬಿರಾ ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಹೊಟ್ಟೆನೋವು ಎಂದು ಸದರ್ ಆಸ್ಪತ್ರೆಗೆ ಕರೆದೊಯ್ದ ನಂತರ ಅತ್ಯಾಚಾರ ಎಸೆಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 5 ರಂದು ಆಕಾಶ್ ಟೆಟೆ, ಅಮನ್ ಡುಂಗ್‌ಡಂಗ್ ಮತ್ತು ಬನ್ಸ್ ಬಹಲ್ ಎಂಬುವರು ಸ್ನೇಹಿತರೊಂದಿಗೆ ಕೋಣೆಗೆ ಬೀಗ ಹಾಕಿ …

Read More »

ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್

ಬೆಳಗಾವಿ: ಕ್ಯಾಂಪ್ ನಲ್ಲಿ ನಡೆದ ಸುಧೀರ ಕಾಂಬಳೆ ಕೊಲೆ ಆರೋಪಿಗಳು ಅರೆಸ್ಟ್; ಹೆಂಡತಿ, ಮಗಳೇ ಹಂತಕರು  ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಸುಧೀರ ಕಾಂಬಳೆ ಎಂಬುವವರನ್ನು ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಮೃತ ಸುಧೀರ್ ಪತ್ನಿ ರೋಹಿಣಿ ಸುಧೀರ ಕಾಂಬಳೆ, ಪುತ್ರಿ ಸ್ನೇಹಾ ಹಾಗೂ ರೋಹಿಣಿಯ ಸ್ನೇಹಿತ ಅಕ್ಷಯ ಮಹಾದೇವ ವಿಠಕರ ಬಂಧಿತರು.  ಸೆಪ್ಟಂಬರ್ 16 ಹಾಗೂ 17ರ ನಡುವಿನ ಅವಧಿಯಲ್ಲಿ ಕ್ಯಾಂಪ್ ನ ಮದ್ರಾಸ್ …

Read More »

P.F.I. ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಆರೋಪವನ್ನು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.   “ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್‌ಐ …

Read More »

ಇಲ್ಲಿದೆ ನೋಡಿ ಕೆರೆಗಳನ್ನು ನುಂಗಿ ನೀರುಕುಡಿದು ನಿವೇಶನ ಪಡೆದ ರಾಜಕಾರಣಿಗಳ ಪಟ್ಟಿ

ಕೆರೆ ಮುಚ್ಚಿ ಬಡಾವಣೆ ನಿರ್ಮಿಸಿದ ಬಿಡಿಎನಲ್ಲಿ ನಿವೇಶನ ಪಡೆದಿರುವ, ಬಂಗಲೆ ಕಟ್ಟಿರುವವರ ಪಟ್ಟಿ ನಗರದಲ್ಲಿದ್ದ 23ಕ್ಕೂ ಹೆಚ್ಚು ಕೆರೆಗಳನ್ನು ನುಂಗಿ ನೀರು ಕುಡಿದು ಬಿಡಿಎ ನಿರ್ಮಿಸಿರುವ ಬಡಾವಣೆಗಳಲ್ಲಿ ಜಿ ಕೆಟಗರಿ ಕೋಟಾದಲ್ಲಿ ನಿವೇಶನ ಪಡೆದು ಬಂಗಲೆ ನಿರ್ಮಿಸಿಕೊಂಡು ವಾಸಿಸುತ್ತಿರುವ ರಾಜಕಾರಣಿಗಳ ಪಟ್ಟಿ ಈ ಸಂಜೆಗೆ ಲಭ್ಯವಾಗಿದೆ.   ಲಭ್ಯವಿರುವ ಮಾಹಿತಿಗಳ ಪ್ರಕಾರ ಪ್ರಮುಖ ಮೂರು ಪಕ್ಷಗಳ ಪ್ರಭಾವಿ ರಾಜಕಾರಣಿಗಳಿರುವುದು ವಿಶೇಷವಾಗಿದೆ. ಅದರಲ್ಲೂ ಕೆರೆ ಒತ್ತುವರಿ ತೆರವುಗೊಳಿಸಿ ಎಂದು ಬೊಬ್ಬೆ ಹೊಡೆಯುತ್ತಿರುವ …

Read More »

ಮತ್ತೆ ಪಿಎಸ್‌ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ

ಕಲಬುರಗಿ: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್ ವಾರ್ಡನ್ ರಾವುತಪ್ಪ‌ ಬಸವಂತ್ರಾಯ ವಾಲೀಕಾರ (35) ಎಂಬಾತನನ್ನು ಗುರುವಾರ ಬಂಧಿಸಿದೆ.   ನಗರದ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯ ಪಿಎಸ್‌ಐ ‌ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಅಭ್ಯರ್ಥಿಗಳು ಪಾಸ್ ಆಗಲು ಸಹಕರಿಸಿದ್ದ. ಜೊತೆಗೆ ಆರ್.ಡಿ. ಪಾಟೀಲಗೆ ಗಿರಾಕಿಗಳನ್ನು ಹುಡುಕಿ …

Read More »