ದೇವನೊಬ್ಬ ನಾಮ ಹಲವು ಎಂದು ಸಾರುತ್ತ ಮುಸ್ಲಿಂ ಕುಟುಂಬವೊಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ಮನೆಯ ಮಗುವಿಗೆ ಶ್ರೀಕೃಷ್ಣನ ವೇಶವನ್ನು ಹಾಕಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶವನ್ನು ಸಾರಿದ ಅರ್ಥಪೂರ್ಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಭಾರತದಂಥ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶದಲ್ಲಿ ಕಂಡುಬಂದ ಅದ್ಭು ದೃಶ್ಯವಿದು. ದೇವನೊಬ್ಬ ನಾಮ ಹಲವು ಎಂದು ಸಾರುತ್ತ ಮುಸ್ಲಿಂ ಕುಟುಂಬವೊಂದು ತಮ್ಮ ಮನೆಯ ಚಿಕ್ಕ ಮಗುವಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ …
Read More »ಬೆಳಗಾವಿಯ ಐಟಿಬಿಪಿ ಶಿಬಿರದಲ್ಲಿ 2 ಎಕೆ-47 ರೈಫಲ್ಗಳು ನಾಪತ್ತೆ:
ಚೀನಾ ಗಡಿ ಕಾವಲು ಜವಾಬ್ದಾರಿ ಹೊತ್ತಿರುವ ಐಟಿಬಿಪಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್ಗಳು ಕಳುವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬಟಾಲಿಯನ್ ಯೋಧರಾದ ರಾಜೇಶ್ಕುಮಾರ್, ಸಂದೀಪ್ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್ಗಳು ಕಳುವಾಗಿವೆ. ಆಗಸ್ಟ್ 17ರಂದು ರಾತ್ರಿ ಮಲಗುವಾಗ ರೈಫಲ್ಗಳನ್ನು ವಾಡಿಕೆಯಂತೆ ಭದ್ರತೆಯಲ್ಲಿಯೇ ಇರಿಸಲಾಗಿತ್ತು. …
Read More »ಗೋಡ್ಸೆ ಹಾಗೂ ಸಾವರ್ಕರ್ರ ವಿಚಾರಗಳನ್ನು ಮುಂದಿಟ್ಟುಕೊಂಡು B.J.P.ಅವರು ತಮ್ಮ ಅಜೆಂಡಾವನ್ನು ಮಾಡುತ್ತಿದ್ದಾರೆ.
ಮಡಿಕೇರಿಯಲ್ಲಿ ಸಿದ್ದರಾಮಯ್ಯನವರ ಮೇಲಿನ ಮೊಟ್ಟೆ ಎಸೆದ ಘಟನೆ ಪೂರ್ವನಿಯೋಜಿತ. ಇದರಲ್ಲಿ ಸ್ಥಳೀಯ ಪ್ರಭಾವೀ ನಾಯಕರು ಇದ್ದಾರೆ. ಈ ಕುರಿತಂತೆ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಇದರ ಹಿಂದೆ ಜಿಲ್ಲೆಯ ಬಿಜೆಪಿ ನಾಯಕರ ಪ್ರಚೋದನೆ ಇದ್ದೇ ಇರುತ್ತದೆ. ಪ್ರಭಾವೀ ನಾಯಕರು ಹಾಗೂ …
Read More »ಬೆಳಗಾವಿಯಲ್ಲಿ ಚಿರತೆಗಾಗಿ ಅರಣ್ಯ-ಪೊಲೀಸ್ ಇಲಾಖೆ ಬೃಹತ್ ಕಾರ್ಯಾಚರಣೆ
ಕಳೆದ 15 ದಿನಗಳಿಂದ ಬೆಳಗಾವಿ ನಗರದಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆಯ ಮತ್ತಷ್ಟು ಚುರುಕುಗೊಂಡಿದ್ದು. ದೊಡ್ಡ ಮಟ್ಟದ ಕಾರ್ಯಾಚರಣೆ ಕೈಗೊಂಡಿದೆ. ಹೌದು ಆಗಸ್ಟ್ 5ರಂದು ಬೆಳಗಾವಿಯ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಫೋರ್ಸ ಸಿಬ್ಬಂದಿಗಳಿಗೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಭರಮಣಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಯ …
Read More »ನವದೆಹಲಿ: ಬಿಹಾರದಲ್ಲಿ ಪಕ್ಷದ ರಾಜ್ಯವ್ಯಾಪಿ ವಿಸ್ತರಣೆಗೆ ಕಾರ್ಯತಂತ್ರ ಸಿದ್ಧಪಡಿಸಿದ ಬಿಜೆಪಿ – 1
ನವದೆಹಲಿ: ಮಹಾಘಟಬಂಧನ್ ಸರ್ಕಾರ ರಚನೆಗೆ ಕಾರಣವಾದ ಬಿಹಾರ ರಾಜಕೀಯದಲ್ಲಿನ ಇತ್ತೀಚಿನ ಘಟನೆಯಿಂದ ಪಾಠ ಕಲಿತಿರುವ ಬಿಜೆಪಿ ಈಗ ಇಡೀ ರಾಜ್ಯದಲ್ಲಿ ಸಂಘಟನೆಯನ್ನು ವಿಸ್ತರಿಸಲು ವಿಸ್ತೃತ ಕಾರ್ಯತಂತ್ರವನ್ನು ಸಿದ್ಧಪಡಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 35 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಕಾರ್ಯತಂತ್ರವನ್ನು ಸಿದ್ಧಪಡಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, …
Read More »ಶಿಮ್ಲಾ: ಹಿಮಾಚಲದಲ್ಲೂ ಜನಪರ, ಫಲಿತಾಂಶ ಆಧಾರಿತ ಸರ್ಕಾರವನ್ನು ಆಯ್ಕೆ ಮಾಡಿ ಎಂದ ಪಂಜಾಬ್ ಸಿಎಂ
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬದಲಾವಣೆಯ ಸಮಯ ಬಂದಿದೆ ಎಂದು ಪ್ರತಿಪಾದಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ನ ಮಾದರಿಯನ್ನು ಅನುಸರಿಸಲು ಮತ್ತು ಜನಪರ ಮತ್ತು ಫಲಿತಾಂಶ ಆಧಾರಿತ ಸರ್ಕಾರವನ್ನು ಆಯ್ಕೆ ಮಾಡುವಂತೆ ಗುಡ್ಡಗಾಡು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಭಗವಂತ್ ಮಾನ್, ದೇಶವನ್ನು ಹಾಳು ಮಾಡಿದ ಸಾಂಪ್ರದಾಯಿಕ ಪಕ್ಷಗಳ ದಣಿವರಿಯದೆ ಕೆಲಸ ಮಾಡುತ್ತಿರುವ …
Read More »ಚುನಾವಣೆ ಮುಂದೂಡಲು”ಸುಗ್ರೀವಾಜ್ಞೆ’ ನೆಪ? : ಹೆಚ್ಚಾಗಲಿದೆ ತಾ.ಪಂ,ಜಿ.ಪಂ. ಕ್ಷೇತ್ರಗಳ ಸಂಖ್ಯೆ
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಹಾದಿ ಸುಗಮವಾಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಏಕೆಂದರೆ, ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ “ಸುಗ್ರೀವಾಜ್ಞೆ’ ತರಲು ಸರ್ಕಾರ ನಿರ್ಧರಿಸಿದೆ. ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ತಿದ್ದುಪಡಿ) ವಿಧೇಯಕ-2022ನ್ನು ಕಳೆದ ಮಾರ್ಚ್ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ …
Read More »ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ
ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ. ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ. ಆಗಾಗ ಪತಿ ಪತ್ನಿ …
Read More »2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ
ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಲಾಗಿದ್ದು, 30 ಮಂದಿ ಜಾನಪದ ಕಲಾವಿದರು ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರು ಜಾನಪದ ತಜ್ಞರು ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆಗೊಳಿಸಿದರು. 2022ನೇ ಸಾಲಿನಲ್ಲಿ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರಿಗೆ ಡಾ. ಜೀ.ಶಂ.ಪ …
Read More »ಮತ್ತಮ್ಮೆ ಶಕ್ತಿ ಕೇಂದ್ರವಾದ B.S.Y. ನಿವಾಸ
ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೇನು ಎನ್ನುವ ಪ್ರಶ್ನೆಯೊಂದಿಗೆ, ಮೂಲೆಗುಂಪಾಗಿಬಿಡುತ್ತಾರಾ ಯಡಿಯೂರಪ್ಪ ಎನ್ನುವ ಅನುಮಾನಕ್ಕೆ ಉತ್ತರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ ನಂತರದ ಸ್ಥಾನದಲ್ಲಿ ಯಡಿಯೂರಪ್ಪ ಅವರು ಸೇರಿಸಲ್ಪಟ್ಟಿದ್ದಾರೆ. 2023ರ ವಿಧಾನ ಸಭೆ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗೆ …
Read More »