Breaking News

ಜೇಮ್ಸ್, ಲಕ್ಕಿಮ್ಯಾನ್ ವೀಕ್ಷಿಸದೇ ಇದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್‌ರಿಂದ ಕೊನೆಗೂ ಸಿನಿಮಾ ವೀಕ್ಷಣೆ

ಪುನೀತ್ ರಾಜ್‌ಕುಮಾರ್ ಅಗಲಿಕೆಯ ನಂತರದ ಕೆಲ ದಿನಗಳ ಕಾಲ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಚ್ಚಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ತಾ ಇರಲಿಲ್ಲ. ರಾಜ್ಯ ಸರ್ಕಾರ ಏರ್ಪಡಿಸಿದ್ದ ಅಪ್ಪು ನಮನ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ದುಃಖ ತಡೆಯಲಾರದೇ ಕಾರ್ಯಕ್ರಮದ ಮಧ್ಯದಲ್ಲಿಯೇ ಹೊರನಡೆದಿದ್ದದರು. ಹೀಗೆ ಅಪ್ಪು ಅಗಲಿಕೆಯ ನೋವಿನಲ್ಲಿದ್ದ ಅಶ್ವಿನಿ ಅವರಿಗೆ ಫೆಬ್ರವರಿ ತಿಂಗಳಿನಲ್ಲಿ ತಮ್ಮ ತಂದೆ ಭಾಗಮನೆ ರೇವನಾಥ್ ನಿಧನ ಮತ್ತಷ್ಟು ನೋವನ್ನು ಉಂಟು ಮಾಡಿತ್ತು. ಪುನೀತ್ …

Read More »

ಹೃದಯ ವೈಫಲ್ಯ ಪತ್ತೆಗೆ ಹೊಸ ತಂತ್ರಜ್ಞಾನ: 8 ನಿಮಿಷ ಸಾಕು !

ಲಂಡನ್ : ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ವಿನೂತನ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮಾನವನ ಹೃದಯ ವೈಫಲ್ಯವನ್ನು ತ್ವರಿತವಾಗಿ ಪತ್ತೆ ಮಾಡುತ್ತದೆ. ಸಾಂಪ್ರದಾಯಿಕ ಎಂಆರ್‌ಐ ಮೂಲಕ ಹೃದ್ರೋಗವನ್ನು ಪತ್ತೆಹಚ್ಚಲು 20 ನಿಮಿಷಗಳನ್ನು ತೆಗೆದುಕೊಂಡರೆ, ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಇತ್ತೀಚಿನ ತಂತ್ರಜ್ಞಾವು ಈ ಪ್ರಕ್ರಿಯೆಯನ್ನು ಕೇವಲ 8 ನಿಮಿಷಗಳಲ್ಲಿ ಪೂರ್ಣಗೊಳಿಸುತ್ತದೆ ಎಂದು ಸಂಶೋಧಕ ಹೊಸಮಾದಿನ್ ಅಸಾದಿ ಬಹಿರಂಗಪಡಿಸಿದ್ದಾರೆ. ಎಂಆರ್​ಐ ತಂತ್ರಜ್ಞಾನವನ್ನು ಬಳಸಿಕೊಂಡು ನಾವು ಹೃದಯ ರಕ್ತದ ಹರಿವಿನ 4-ಆಯಾಮದ (4-D) ಚಿತ್ರಗಳನ್ನು ಅಭಿವೃದ್ಧಿಪಡಿಸಿದ್ದೇವೆ. ‘ಫೋರ್ಡಿ …

Read More »

ಟ್ರಿಪ್​ ಹೋದಾಗ ನದಿಗಿಳಿದು ಕೊಚ್ಚಿಹೋದ ಮೂವರು ವಿದ್ಯಾರ್ಥಿನಿಯರು

ಆಂಧ್ರಪ್ರದೇಶ: ಖುಷಿಯ ಕ್ಷಣಗಳನ್ನು ಕಳೆಯಲಿ ಎಂದು ಶಿಕ್ಷಕರು ಮಕ್ಕಳನ್ನು ವಿಹಾರಕ್ಕೆ ಕರೆದುಕೊಂಡು ಹೋದರೆ ಅದು ದುರಂತದಲ್ಲಿ ಕೊನೆಯಾಗಿದೆ. ವಿಹಾರಕ್ಕೆ ಹೋಗಿದ್ದ ವೇಳೆ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿನಿಯರು ನೀರು ಪಾಲಾದ ದುರ್ಘಟನೆ ಇಂದು ನಡೆದಿದೆ. ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ವೇಟಪಾಲೆಂನ ಖಾಸಗಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಸಕಿಲೇರು ನದಿಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಮಕ್ಕಳು ನೀರಿನಲ್ಲಿ ಆಟವಾಡಿದ್ದಾರೆ. ಅದರಲ್ಲಿ ಮೂವರು ವಿದ್ಯಾರ್ಥಿನಿಯರು ನೀರಿನ ರಭಸಕ್ಕೆ ಕೊಚ್ಚಿ …

Read More »

ಕಾರಲ್ಲಿ ಅತ್ಯಾಚಾರ, ವಿಷ ಕುಡಿದು ಆತ್ಮಹತ್ಯೆ ಯತ್ನ.. ಇದು ಲವ್​, ಸೆಕ್ಸ್​, ದೋಖಾ ಸ್ಟೋರಿ

ಠಾಣೆ (ಮಹಾರಾಷ್ಟ್ರ): ಇಲ್ಲಿನ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿಯ ಜೀವನದಲ್ಲಿ ಲವ್ ಸೆಕ್ಸ್ ದೋಖಾ ಹಿಂದಿ ಚಲನಚಿತ್ರದ ರೀತಿಯಲ್ಲಿ ಘಟನೆಗಳು ಘಟಿಸಿದ್ದು ಅಚ್ಚರಿಯಾದರೂ ನಿಜ. ಈ ಯುವತಿಯು ಒಬ್ಬಾತನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಪ್ರೀತಿಯ ನಾಟಕವಾಡುತ್ತಲೇ ಆತ ಅನೇಕ ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಆದರೆ, ಇದೆಲ್ಲ ಸಾಕು ನಾವಿನ್ನು ಲಗ್ನವಾಗೋಣ ಎಂದಾಗ ಮಾತ್ರ ಆತ ತನ್ನ ಅಸಲಿ ಬಣ್ಣ ತೋರಿಸಲಾರಂಭಿಸಿದ್ದ. ಹೀಗಾಗಿ ಯುವತಿಯು ಬೇರೆ ದಾರಿ ಕಾಣದೇ ಆನ್ಲೈನ್ ಮೂಲಕ ವಿಷ …

Read More »

ಪೇ ಸಿಎಂ ಮಾದರಿ ಪೇ ಮೇಯರ್ ಸದ್ದು: ವಾಣಿಜ್ಯ ನಗರಿಯ ಗೋಡೆಗಳ ಮೇಲೆ ರಾರಾಜಿಸುತ್ತಿವೆ ಪೋಸ್ಟರ್

ಹುಬ್ಬಳ್ಳಿ: ದೇಶಾದ್ಯಂತ ಪೇ ಸಿಎಂ ಪೋಸ್ಟರ್​ಗಳು ಸಾಕಷ್ಟು ಸುದ್ದಿ ಮಾಡಿದ್ದವು‌. ಅದೇ ಮಾದರಿಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈಗ ಪೇ ಮೇಯರ್ ಪೋಸ್ಟರ್ ಅಭಿಯಾನ ಜೋರಾಗಿದೆ. ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು‌. ಆದರೆ ಈಗ ಅಭಿಯಾನ ಪೋಸ್ಟರ್ ರೂಪ ಪಡೆದುಕೊಂಡಿದ್ದು, ನಗರದ ಪ್ರಮುಖ ಬೀದಿಗಳು ಹಾಗೂ ಗೋಡೆಗಳ ಮೇಲೆ ಪೋಸ್ಟರ್ ಹಚ್ಚುವ ಮೂಲಕ ಅಭಿಯಾನ ನಡೆಸುತ್ತಿದ್ದಾರೆ. ರಾಷ್ಟ್ರಪತಿಗಳ …

Read More »

ತವಗ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ

ಗೋಕಾಕ: ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ತವಗ ಗ್ರಾಮ ಪಂಚಾಯಿತಿ ಭಾಜನವಾಗಿದೆ. ಸಂಪೂರ್ಣ ಸ್ವಚ್ಛತೆ, ಹೆಚ್ಚು ಶೌಚಾಲಯ ನಿರ್ಮಿಸಿದ್ದನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ 5 ಲಕ್ಷ ನಗದು, ಅಭಿನಂದನಾ ಪತ್ರವನ್ನೊಳಗೊಂಡಿದೆ. ಕನಸಗೇರಿ, ಕೈತನಾಳ, ಕೈ- ಹೊಸೂರ ಗ್ರಾಮಗಳನ್ನು ಒಳಗೊಂಡ ತವಗ ಗ್ರಾಮ ಪಂಚಾಯಿತಿ ಒಟ್ಟು 23 ಸದಸ್ಯರನ್ನು ಹೊಂದಿದೆ. ಒಟ್ಟು 11,500 ಕ್ಕಿಂತ ಹೆಚ್ಚಿನ ಜನಸಂಖ್ಯೆ ಈ ಪಂಚಾಯಿತಿ ವ್ಯಾಪ್ತಿಯಲ್ಲಿದೆ. …

Read More »

ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಕುಸ್ತಿಪಟು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಧಾರವಾಡ(ಹುಬ್ಬಳ್ಳಿ): ಹೃದಯಾಘಾತದಿಂದ ಯುವ ಕುಸ್ತಿಪಟು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ವಾಕಿಂಗ್ ಮಾಡಿ ಮನೆಗೆ ವಾಪಸ್ ತೆರಳುತ್ತಿದ್ದಾಗ ಹೃದಯಾಘಾತವಾಗಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಪೈಲ್ವಾನ್ ಸಂಗಪ್ಪ ಬಳಿಗೇರ್ (28) ಮೃತ ಕುಸ್ತಿಪಟು. ಮೂಲತಃ ಬೆಳಗಾವಿ ಜಿಲ್ಲೆಯವರಾದರೂ ಧಾರವಾಡದಲ್ಲಿ ನೆಲೆಸಿದ್ದರು. ಇಂದು ಬೆಳಗಿನ ಜಾವ ಧಾರವಾಡದ ಮದಿಹಾಳದ ಬಳಿ ಸ್ನೇಹಿತನ ಜೊತೆಗೆ ವಾಕಿಂಗ್​ಗೆ ತೆರಳಿ ಮನೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಹೃದಯಾಘಾತವಾಗುತ್ತಿದ್ದಂತೆ ನೆಲಕ್ಕೆ …

Read More »

ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್​

ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‌. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …

Read More »

ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ. ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ …

Read More »

ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್‌ಗೆ ಇಂದೆಥಾ ಸಂಕಷ್ಟ..?

ನಟ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಬಾಲಿವುಡ್‌ನ ಕ್ಯೂಟ್‌ ಕಪಲ್‌. 2022 ಏಪ್ರಿಲ್‌ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ.   ರಣಬೀರ್‌ ಕಪೂರ್‌ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್‌ ಬಿಸಿ …

Read More »