Breaking News

“ಕಾಶ್ಮೀರ್ ಫೈಲ್ಸ್‌’ನ ಗಳಿಕೆ ದಾಖಲೆ ಮುರಿದ “ಕಾಂತಾರ’

ಮುಂಬೈ: ಬಾಕ್ಸ್‌ ಆಫಿಸ್‌ನಲ್ಲಿ ಹಿಂದಿ ಅವತರಿಣಿಕೆಯ “ಕಾಂತಾರ’ ಸಿನಿಮಾದ ಅಬ್ಬರ ಮುಂದುವರಿದಿದೆ. ಬಾಕ್ಸ್‌ ಆಫಿಸ್‌ ಗಳಿಕೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾದ “ಕಾಶ್ಮೀರ್ ಫೈಲ್ಸ್‌’ನ ಎಲ್ಲಾ ದಾಖಲೆಗಳನ್ನು ಕಾಂತಾರಾ ಸಿನಿಮಾ ಮುರಿದಿದೆ. ಗಳಿಕೆಯಲ್ಲಿ ಶೇ. 1,000 ಪಟ್ಟು ಲಾಭ ಗಳಿಸುವ ನಿಟ್ಟಿನಲ್ಲಿ ದಾಪುಗಾಲು ಹಾಕುತ್ತಿದೆ. ರಿಷಭ್‌ ಶೆಟ್ಟಿ ನಿರ್ದೇಶನ ಮತ್ತು ನಟ ನೆಯ ಕಾಂತಾರ ಸಿನಿಮಾದ ಹಿಂದಿ ಅವ ತರಿಣಿಕೆಯು ಸೆ.30ರಂದು ಬಿಡುಗಡೆಯಾ ಯಿತು. ಈಗಾಗಲೇ ಕೆಜಿಎಫ್-2 ಸಿನಿಮಾದ ದಾಖಲೆಗಳನ್ನು ಕಾಂತಾರ …

Read More »

ರೈತರ ಆಕ್ರೋಶಕ್ಕೆ ಕಾರಣವಾಗಿದೆ ಲೈಲಾ ಶುಗರ್ಸ ಕಾರ್ಖಾನೆ

ಖಾನಾಪುರದ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಸಕ್ಕರೆ ಪಡೆಯಲು ಪರದಾಡಿದ ಘಟನೆ ನಡೆದಿದೆ. ಹೌದು ಮಹಾಲಕ್ಷ್ಮೀ ಗ್ರುಪ್ ಸಂಚಾಲಿತ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಳೆದ ದಿನಾಂಕ 14ರಿಂದ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಟನ್ 25 ರೂಪಾಯಿ ದರದಲ್ಲಿ ಸಕ್ಕರೆ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಡಲಾಗಿತ್ತು. ಆದರೆ ತಾಲೂಕಿನ ಗಡಿಭಾಗ ಸೇರಿದಂತೆ ತಾಲೂಕಿನ ಬೇರೆ ಕಡೆಯಿಂದ ಬಂದು ತಮ್ಮ ಸ್ಲೀಪ್ ತೋರಿಸಿ ಆಧಾರ್ ಕಾರ್ಡ್ …

Read More »

ಅಂತರರಾಷ್ಟ್ರೀಯ ವ್ಹೀಲ್‍ಚೇರ್ ಬಾಸ್ಕೇಟ್‍ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲೆಯ ಆಟಗಾರರು ಪದಕ ಬೇಟೆಯಾಡಿದ್ದಾರೆ.

ನೋಯ್ಡಾದಲ್ಲಿ ಜರುಗಿದ ಮೊದಲನೇ ಭಾರತೀಯ ಅಂತರರಾಷ್ಟ್ರೀಯ ವ್ಹೀಲ್‍ಚೇರ್ ಬಾಸ್ಕೇಟ್‍ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲೆಯ ಆಟಗಾರರು ಪದಕ ಬೇಟೆಯಾಡಿದ್ದಾರೆ. ಇದೇ ನ.6ರಿಂದ 11ರವರೆಗೆ ನೋಯ್ಡಾದಲ್ಲಿ ನಡೆದ ಅಂತರರಾಷ್ಟ್ರೀಯ ವ್ಹೀಲ್‍ಚೇರ್ ಬಾಸ್ಕೇಟ್‍ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿಯ ಆಟಗಾರರಾದ ಬಸವರಾಜ್ ಸುಣಧೋಳಿ, ಲಲಿತಾ ಗವಸ, ಮಾಯಾ ಸಣ್ಣಲಿಂಗನ್ನವರ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಕ್ರೀಡಾಪಟುಗಳ ಸಾಧನೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಓಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ …

Read More »

ಫೇಸ್‌ಬುಕ್‌ನಲ್ಲಿ ಬಂದ ಯುವತಿಯ ‘ಫ್ರೆಂಡ್ ರಿಕ್ವೆಸ್ಟ್’ಗೆ ಮರುಳಾಗಿ ಲಕ್ಷ ಲಕ್ಷ ರೂಪಾಯಿ ಕಳೆದುಕೊಂಡ ಉದ್ಯೋಗಿ

ಎಲ್ಲಿಯವರೆಗೆ ಮೋಸ ಹೋಗುವರು ಇರತ್ತಾರೋ ಅಲ್ಲಿಯವರೆಗೆ ಮೋಸ ಮಾಡುವರು ಇದ್ದೇ ಇರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಆಧುನಿಕ ಕಾಲದಲ್ಲಿ ಇಂತಹ ಮೋಸ ಸರ್ವೆ ಸಾಮಾನ್ಯ ಅನ್ನೋ ಹಾಗಿದೆ. ಹೀಗೆಯೇ ಫೇಸ್‌ಬುಕ್‌ನಲ್ಲಿ ಬಂದ ಯುವತಿಯ ‘ಫ್ರೆಂಡ್ ರಿಕ್ವೆಸ್ಟ್’ಗೆ ಮರುಳಾಗಿ ಲಕ್ಷ ಲಕ್ಷ ರೂಪಾಯಿ ಕಳೆದುಕೊಂಡ ಉದ್ಯೋಗಿಯೋರ್ವ ಇದೀಗ ತಪ್ಪಿನ ಅರಿವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.ಹೌದು, ಇಂತಹ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರ …

Read More »

ರಮೇಶ್ ಸಾಹುಕಾರ ಜೆಡಿಎಸ್ ಸೇರ್ಪಡೆ ಬಗ್ಗೆ ವಿಶ್ವಾಸ ವ್ಯಕ್ತಡಿಸಿದ್ರ H.D K.?

ಜೆಡಿಎಸ್ ಬಿಟ್ಟು ಕಾಂಗ್ರೆಸ್, ಬಿಜೆಪಿಗೆ ಹೋಗಿರುವ ಬಹಳಷ್ಟು ನಾಯಕರು ಮನಪರಿವರ್ತನೆಯಾಗಿ ವಾಪಸ್ ಜೆಡಿಎಸ್‍ಗೆ ಬರಬಹುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈ ಸಮಯದಲ್ಲಿ ಏನಾದ್ರೂ ರಾಜಕೀಯ ದ್ರುವೀಕರಣ ಆಗಿ ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಸೇರ್ಪಡೆಯಾಗುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಮುಂದೆ ಈಗ ಅದ್ಯಾವುದೂ ಪ್ರಶ್ನೆ ಇಲ್ಲ. ಈಗ ನನ್ನ ಮುಂದೆ …

Read More »

ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾಧಾರಿಗಳಿಗೆ ಅಚ್ಚುಕಟ್ಟಿನ ವ್ಯವಸ್ಥೆ: ಶಶಿಕಲಾ ಜೊಲ್ಲೆ

ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್‌ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು.   ಇಂದು ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ …

Read More »

ಮುಧೋಳದಲ್ಲಿ 3 ದಿನ ನಿಷೇಧಾಜ್ಞೆ; ತೀವ್ರತೆ ಪಡೆದ ಕಬ್ಬು ಬೆಳೆಗಾರರ ಹೋರಾಟ

ಬಾಗಲಕೋಟೆ: ಕಳೆದ 45 ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಧೋಳದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದರ ಮಧ್ಯೆಯೇ ನಿಷೇಧಾಜ್ಞೆ ಜಾರಿ ಬೆನ್ನಲ್ಲೇ ಮತ್ತಷ್ಟು ಆಕ್ರೋಶಗೊಂಡ ರೈತರು, ಹಳ್ಳಿ-ಹಳ್ಳಿಯಿಂದ ಮುಧೋಳಕ್ಕೆ ಆಗಮಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದ್ದಾರೆ. ಮುಧೋಳದಿಂದ ವಿವಿಧ ಹಳ್ಳಿಗಳಿಗೆ ತೆರಳುವ ಪ್ರಮುಖ ರಸ್ತೆ-ಹೆದ್ದಾರಿಗಳನ್ನು ಬಂದ್‌ ಮಾಡಿ, ರಸ್ತೆಯಲ್ಲೇ ಒಲೆ ಹೂಡಿ ಅಡುಗೆ ಮಾಡಿ ಮಧ್ಯಾಹ್ನದ ಊಟ ಮಾಡಿದ್ದಾರೆ. ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ವರ್ಷ …

Read More »

ಲೋಕಾಯುಕ್ತ: 3 ತಿಂಗಳಲ್ಲೇ 60 ಎಫ್‌ಐಆರ್‌! ಹರಿದು ಬರುತ್ತಿವೆ ದೂರುಗಳು

ಬೆಂಗಳೂರು: ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಅಧಿಕಾರ ಸಿಕ್ಕಿದ ಮೂರು ತಿಂಗಳಲ್ಲೇ ಬರೋಬ್ಬರಿ 60 ಎಫ್‌ಐಆರ್‌ ದಾಖಲಾಗಿದೆ. ವಿಶೇಷ ವೆಂದರೆ, ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ಮರಳಿಸಲು ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಸರಕಾರದ ಆದೇಶ ಹೊರಬಿದ್ದ ಬಳಿಕ ಲೋಕಾಯುಕ್ತಕ್ಕೆ ಹೆಚ್ಚಿನ ದೂರುಗಳು ಬರುತ್ತಿದೆ.   ರಾಜ್ಯಾದ್ಯಂತ 31 ಜಿಲ್ಲೆಗಳಲ್ಲೂ ಲೋಕಾಯುಕ್ತ ಪೊಲೀಸ್‌ ವಿಭಾಗವಿದ್ದು, ಬೆಂಗಳೂರಿನಲ್ಲಿ 12 ಪ್ರಕರಣ ದಾಖಲಾದರೆ, ತುಮಕೂರು, ರಾಮನಗರ, ಬೆಳಗಾವಿ, ಮಡಿಕೇರಿ, ಚಿತ್ರದುರ್ಗದಲ್ಲಿ ಮೂರು ಎಫ್‌ಐಆರ್‌ ದಾಖಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಂದೆರಡು …

Read More »

ಶ್ರದ್ದಾ ಪ್ರಕರಣ.ಎಲ್ಲಾ ಪುರಾವೆ ನಾಶಗೊಳಿಸಿದ್ದ ಅಫ್ತಾಬ್? ನೀರಿನ ಶುಲ್ಕ ಬಾಕಿ ಇಟ್ಟಿದ್ದೇಕೆ

ನವದೆಹಲಿ: ಶ್ರದ್ದಾ ವಾಲ್ಕರ್ ಳನ್ನು ಕ್ರೂರವಾಗಿ ಕೊಂದು ಹಾಕಿರುವ ಹಂತಕ ಅಫ್ತಾಬ್ ಅಮಿನ್ ಪೂನಾವಾಲನನ್ನು ನ್ಯಾಯಾಲಯ ಗಲ್ಲಿಗೇರಿಸುವವರೆಗೆ ವಿರಮಿಸುವುದಿಲ್ಲ ಎಂದು ಶ್ರದ್ದಾ ತಂದೆ ವಿಕಾಸ್ ವಾಲ್ಕರ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ವಿಕಾಸ್ ವಾಲ್ಕರ್, ಕೊಲೆಗಡುಕ ಅಫ್ತಾಬ್ ತುಂಬಾ ಚಾಣಾಕ್ಷ್ಯನಾಗಿದ್ದು, ಆತ ತನ್ನ ವಿರುದ್ಧದ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದ್ದಾನೆ. ಕಳೆದ ಐದಾರು ತಿಂಗಳಿನಿಂದ ಆತ ಎಲ್ಲಾ ಪುರಾವೆ ನಾಶ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಸಾಕ್ಷ್ಯ ನಾಶಗೊಳಿಸಿದ್ದರಿಂದ ಸತ್ಯವನ್ನು ಹೊರತರುವುದು ಪೊಲೀಸರಿಗೆ …

Read More »

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎಲ್ಲೂ ಸ್ಪರ್ಧೆ ಮಾಡುವುದೇ ಬೇಡ: ಸಂತೋಷ ಲಾಡ್

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಡಿ.ಕೆ. ಶಿವಕುಮಾರ ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಅವರು ರಾಜ್ಯಾದ್ಯಂತ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪಕ್ಷ ಬಲಪಡಿಸುವ ಕೆಲಸ ಮಾಡಲಿ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಅಲ್ಲಿಗೆ ಸೀಮಿತವಾಗುವುದು ಬೇಡ. ಇಡೀ ರಾಜ್ಯ ಸುತ್ತಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು. ಇದು ನನ್ನ ವೈಯಕ್ತಿಕ ಅಭಿಪ್ರಾಯ, …

Read More »