ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ವೀರ ಸಾವರ್ಕರ್ …
Read More »ಪುಟ್ಟ ರಾಜ್ಯದ ರಕ್ಷಣೆಗೆ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತವರು ರಾಣಿ ಕಿತ್ತೂರು ಚೆನ್ನಮ್ಮ
ಬೆಳಗಾವಿ: ನಿಮಗೆ ಏಕೆ ಕೊಡಬೇಕು ಕಪ್ಪ ಎಂದು ಗಟ್ಟಿ ಧ್ವನಿಯಲ್ಲಿ ಹೇಳುತ್ತ, ಬ್ರಿಟಿಷರೇ ದೇಶ ಬಿಟ್ಟು ತೊಲಗಿ ಎಂದು ಗುಡುಗು ಹಾಕಿದ ಕನ್ನಡನಾಡಿನ ಸಾಹಸಿ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿದವರು, ಸ್ವಾತಂತ್ರ್ಯ ಸ್ವಾಭಿಮಾನದ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಅವರ ಹೆಂಡತಿ ರಾಣಿ ಚೆನ್ನಮ್ಮ. ತಮ್ಮ ಪುಟ್ಟ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿದ ಧೈರ್ಯ, ಸಾಹಸ …
Read More »ರೈತರಿಂದ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡಿತ್ತು.
ಬಳ್ಳಾರಿ: ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರೈತರ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿತ್ತು. ಕೆಐಎಡಿಬಿ ಮೂಲಕ ವಶಪಡಿಸಿಕೊಂಡ ಭೂಮಿಯಲ್ಲಿ ಇದುವರೆಗೆ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಹೀಗಾಗಿ ಇತ್ತ ಉದ್ಯೋಗವಿಲ್ಲದೇ ಅತ್ತ ಭೂಮಿಯೂ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಕುಡುತಿನಿ, ವೇಣಿವೀರಾಪುರ, ಕೊಳಗಲ್ಲು ಗ್ರಾಮಗಳಲ್ಲಿ ಬ್ರಹ್ಮಿಣಿ ಸ್ಟಿಲ್ ಹಾಗೂ ಮಿತ್ತಲ್ ಕಂಪನಿಗಾಗಿ ರೈತರಿಂದ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿತ್ತು. ಇತ್ತ ರೈತರು ತಮ್ಮ …
Read More »ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು
ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ನಡೆದಿದೆ. 44 ವರ್ಷದ ಸುರೇಶ ಮಾಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.ಅಲ್ಲದೇ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮಾಹಿತಿ ತಿಳಿಸಿದೆ.
Read More »ದಯವಿಟ್ಟು ನಮಗೆ ಮನೆ ಕಟ್ಟಿ ಕೊಡಿ: ಸರ್ಕಾರಕ್ಕೆ ಕಡೋಲಿ ಸಂತ್ರಸ್ತ ಮಹಿಳೆಯರ ಮನವಿ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಭಾರಿ ಮಳೆಗೆ ಹಾನಿಗೆ ಒಳಗಾಗಿರುವ ಈ ಎರಡೂ ಮನೆಗಳು ಯಾವಾಗ ಬೇಕಾದ್ರೂ ಬೀಳಬಹುದು. ಜೀವ ಭಯದಲ್ಲಿಯೇ ಕುಟುಂಬಸ್ಥರು ಜೀವನ ಸಾಗಿಸುತ್ತಿದ್ದಾರೆ. ದಯವಿಟ್ಟು ನಮಗೆ ಮನೆ ಕಟ್ಟಿಸಿ ಕೊಡಿ ಎಂದು ಈ ನೊಂದ ಸಂತ್ರಸ್ತ ಮಹಿಳೆಯರು ಅಂಗಲಾಚುತ್ತಿದ್ದಾರೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಬದುಕುವುದೇ ದುಸ್ಥರವಾಗಿ ಬಿಟ್ಟಿದೆ. ಮಳೆ ನೀರು ಮನೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನೀರಿನಿಂದ ನೆನೆದಿರುವ ಈ ಮನೆಯ ಗೋಡೆಗಳು ಯಾವ …
Read More »ಬೆಳಗಾವಿಯಲ್ಲಿ ಚಿರತೆಗಾಗಿ ಇನ್ನು 1 ವಾರ ಕಾರ್ಯಾಚರಣೆ:ಡಿಎಫ್ಓ ಡಾ.ಅಂಟೋನಿ
ನಮ್ಮ ಅಂದಾಜಿನ ಪ್ರಕಾರ ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಪತ್ತೆಯಾಗಿದ್ದ ಚಿರತೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಆದರೆ ಅದು ಮರಳಿ ಬರಬಹುದು ಅಥವಾ ಮತ್ತೆ ಕಾಣಿಸಿಕೊಳ್ಳಬಹುದು ಎಂಬ ಹಿನ್ನೆಲೆ ನಾವು ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಡಿಎಫ್ಓ ಡಾ.ಅಂಟೋನಿ ಮರಿಯಂ ಸ್ಪಷ್ಟಪಡಿಸಿದ್ದಾರೆ. ಹೌದು ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಚಿರತೆ ಪತ್ತೆಯಾಗಿರುವ ಹಿನ್ನೆಲೆ ಕುಂದಾನಗರಿ ಜನ ತೀವ್ರ ಭಯಭೀತರಾಗಿದ್ದರು. ಇನ್ನು ಅರಣ್ಯ ಇಲಾಖೆ ಕೂಡ ಸತತ ಕಾರ್ಯಾಚರಣೆ ನಡೆಸಿದರೂ ಚಿರತೆ ಮಾತ್ರ ಸೆರೆಯಾಗಿರಲಿಲ್ಲ. …
Read More »ದಿವಂಗತ ಸುರೇಶ್ ಅಂಗಡಿ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಬೆಳಗಾವಿ-ಧಾರವಾಡ ರೈಲು ಮಾರ್ಗ ಯೋಜನೆ ಒಂದು ಹಂತಕ್ಕೆ: ಗೋವಿಂದ ಕಾರಜೋಳ್
ದಿವಂಗತ ಸುರೇಶ್ ಅಂಗಡಿ ರವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಬೆಳಗಾವಿ-ಧಾರವಾಡ ರೈಲು ಮಾರ್ಗ ಯೋಜನೆ ಈಗ ಒಂದು ಹಂತಕ್ಕೆ ಬಂದು ತಲುಪಿದ್ದು 444 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, ಒಂದು ವಾರದಲ್ಲಿ ಇದಕ್ಕೆ ಗೆಜೆಟ್ ನೋಟಿಫಿಕೇಶನ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋಚಿಂದ ಕಾರಜೋಳ್ ಹೇಳಿದ್ದಾರೆ. ಹೌದು ಇಂದು ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿಯಲ್ಲಿ ಆಗಬೇಕಾದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕುರಿತಂತೆ ಚರ್ಚೆಯನ್ನು ನಡೆಸಲು ಸಭೆಯನ್ನು ಆಯೋಜಿಸಲಾಗಿತ್ತು. …
Read More »ಸರ್ಕಾರದ ಸೌಲಭ್ಯಗಳು ಸಮರ್ಪಕ ಬಳಕೆ ಆಗಲಿ: ಕಡಾಡಿ
ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ಜಾರಿಗೆ ತರುವ ಸಾಲಸೌಲಭ್ಯಗಳನ್ನು ಕಲ್ಪಿಸಲು ಬ್ಯಾಂಕುಗಳು ಸಹಕರಿಸಬೇಕು. ವಿನಾಕಾರಣ ನೆಪವೊಡ್ಡಿ ಸೌಲಭ್ಯ ನಿರಾಕರಿಸಬಾರದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಆ.16) ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮಗಳಡಿ ಜಿಲ್ಲೆಗೆ ಒಟ್ಟಾರೆ 408 ಕೋಟಿ ರೂಪಾಯಿ ಅನುದಾನ ಹಾಗೂ ಸಾಲ-ಸೌಲಭ್ಯಗಳನ್ನು …
Read More »ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಇವರೇ. ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೋಟೋ ಹಾಕಿದ್ದಾರೆ. ಫೋಟೋ ಹಾಕಲಿ ಬೇಡ ಎನ್ನುವುದಿಲ್ಲ. ಆದರೆ, ಸಾವರ್ಕರ್ ಫೋಟೋ ಹಾಕಿ ಟಿಪ್ಪು ಪೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೆ ಎಂದು ಪ್ರಶ್ನಿಸಿದರು. ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಲೇ …
Read More »ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಕಾರಣ ಬಹಿರಂಗ
ಶಿವಮೊಗ್ಗ: ಭದ್ರಾವತಿಯಲ್ಲಿ ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಹಲ್ಲೆ ನಡೆಸಿದ್ದಾನೆ. ಸೋಮವಾರ ಸಂಜೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಂತರ ಮುಬಾರಕ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸುನೀಲ್ ದೂರು ನೀಡಿದ್ದಾನೆ. ಈ ಹಲ್ಲೆಗೆ ಕಾರಣ ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಗುಡಿ-ಗುಡಿ ಆಡುತ್ತಿದ್ದಾಗ ಮುಬಾರಕ್ ಅದರ ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಮಾಡಿದ್ದಕ್ಕೆ ಮುಬಾರಕ್ ಅನ್ನು ಸುನೀಲ್ ಪ್ರಶ್ನಿಸಿದ್ದು, ಇಬ್ಬರ ನಡುವೆ ಜಗಳ …
Read More »