Breaking News

ಎಸಿಬಿ ವಿಚಾರಣೆಗೆ ಹಾಜರಾದ ಜಮೀರ್ ಅಹಮದ್

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆ ನೋಟಿಸ್ ನೀಡಿದ್ದ, ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಬಿ ಡಿವೈಎಸ್​ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ‌. ಕಳೆದ ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್​ಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಅಕ್ರಮ ಆಸ್ತಿ …

Read More »

600 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಿಂದ ರಸ್ತೆ, ಒಳಚರಂಡಿ ನಿರ್ಮಾಣ ಮಾಡಿದರೂ ಅದು ಸರಿಯಾಗಿಲ್ಲ:A.A.P.

ಬೆಳಗಾವಿ ಸ್ಮಾರ್ಟ್ ಸಿಟಿಯು ಮಹತ್ವದ ವಿಶ್ವಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಅಫೆಸ್ 9 ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುವುದು ಯಾವ ಮಾನದಂಡದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತಂಡವನ್ನು ಬೆಳಗಾವಿಗೆ ಕಳುಹಿಸಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಪರಿಶೀಲನೆ ನಡೆಸಬೇಕು ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಆಗ್ರಹಿಸಿದ್ದಾರೆ. ಶನಿವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್‍ಕುಮಾರ್ ಟೋಪಣ್ಣವರ್ ರವರು, …

Read More »

ಲೋಡ್ ತುಂಬಿದ ಲಾರಿಯಿಂದ ಕುಸಿದ ನಾಲಾ ಬ್ರಿಡ್ಜ್

ಲೋಡ್ ಲಾರಿಯೊಂದು ನಾಲಾ ಬ್ರಿಡ್ಜ್ ಬಳಿ ಸಾಗುತ್ತಿದ್ದ ಸಂದರ್ಭದಲ್ಲಿ ನಾಲಾ ಕುಸಿದುಗೊಂಡ ಘಟನೆ ಹುಬ್ಬಳ್ಳಿಯ ತುಮಕೂರು ಓಣಿ ನಾಲಾ ಬ್ರಿಡ್ಜ್ ಬಳಿ ನಡೆದಿದೆ. ಹುಬ್ಬಳ್ಳಿಯ ವಾರ್ಡ್ ನಂ. 65 ರಲ್ಲಿ ಬರುವ ತುಮಕೂರ ಓಣಿಯಲ್ಲಿ ಲೋಡ್ ಲಾರಿಯಿಂದ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಲಾರಿಯ ಭಾರವನ್ನು ತಾಳಲಾರದೆ ಕುಸಿದು ಸಿಕ್ಕಾಕಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು …

Read More »

ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕರಿಗೆ ತಿಳುವಳಿಕೆ ನೀಡುವುದು ಅತ್ಯವಶ್ಯ- ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಳೇಶ್ವರ್..!!

ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಕುರಿತು ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಯಮಾಡುತ್ತಿದೆ ಎಂದು ಬ್ಯಾಂಕ್‍ನ ಎಂಡಿ ಮಹಾಬಳೇಶ್ವರ್ ರವರು ತಿಳಿಸಿದ್ದಾರೆ. : ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. …

Read More »

ಮಗ ನಾಪತ್ತೆ ಎಂದು ದೂರು: ತನಿಖೆ ವೇಳೆ ಮಲತಾಯಿಯ ಅನೈತಿಕ ಸಂಬಂಧ, ಭಯಾನಕ ಸಂಚು ಬಯಲು

ಬಾಗಲಕೋಟೆ: ಮಗ ನಾಪತ್ತೆ ಎಂದು ತಾಯಿ ದೂರು ನೀಡಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ತಾಯಿಯೇ ಖಳನಾಯಕಿ ಎಂಬುದು ಪೊಲೀಸ್​ ತನಿಖೆಯಲ್ಲಿ ಬಯಲಾಗಿದ್ದು, ಅನೈತಿಕ ಸಂಬಂಧ ಮತ್ತು ಆಸ್ತಿ ವಿಚಾರಕ್ಕೆ ಕೊಲೆಯಾಗಿರುವ ಸಂಗತಿ ಬಯಲಾಗಿದೆ.   ವಸಂತ ಮಾಲಿಂಗಪ್ಪ ಕುರಬಳ್ಳಿ(24) ಕೊಲೆಯಾದವ. ಈತ ಆರೋಪಿ ಕಮಲವ್ವಳ ದತ್ತು ಮಗ. ಗೋಣಿ ಚೀಲದಲ್ಲಿ ಶವ ಪತ್ತೆಯಾದ ಪ್ರಕರಣವನ್ನು ಬೆನ್ನತ್ತಿ ಹೋದಾಗ ಕಮಲವ್ವ ಕರಾಳ ಮುಖದ ಅನಾವರಣ ಆಗಿದೆ. ತನ್ನ ಅನೈತಿಕ …

Read More »

ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.   ಇದರ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.   ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ …

Read More »

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು (Corona virus)ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Read More »

ಮನೆ, ವಾಹನ, ಇತರೆ ಸಾಲಗಾರರಿಗೆ ಬಿಗ್ ಶಾಕ್: ಬಡ್ಡಿ ದರ 3 ತಿಂಗಳಲ್ಲಿ ಶೇ. 1.4 ರಷ್ಟು ಏರಿಕೆ: EMI ಹೆಚ್ಚಳ

ಮುಂಬೈ: ಹಣದುಬ್ಬರ ಹಾಗೂ ರೂಪಾಯಿ ಅಪಮೌಲ್ಯ ತಡೆಯುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳು ತನ್ನಿಂದ ಪಡೆಯುವ ಸಾಲದ ಮೇಲಿನ ಬಡ್ಡಿ ದರವನ್ನು(ರೆಪೊ) 0.50 ರಷ್ಟು ಹೆಚ್ಚಳ ಮಾಡಿದೆ. ಮೂರು ತಿಂಗಳಲ್ಲಿ ರೆಪೊ ದರ ಶೇಕಡ 1.4 ರಷ್ಟು ಏರಿಕೆಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಂದ ವೈಯಕ್ತಿಕ, ಗೃಹ, ವಾಹನ ಇನ್ನಿತರೆ ಸಾಲ ಪಡೆದ ಗ್ರಾಹಕರು ಹೆಚ್ಚಿನ ಬಡ್ಡಿ ಪಾವತಿಸುವುದು ಅನಿವಾರ್ಯವಾಗಿದೆ. ಶೇಕಡ 7ರ ಬಡ್ಡಿ ದರದಲ್ಲಿ ಗೃಹ ಸಾಲ ಪಡೆದವರು ಶೇಕಡ …

Read More »

ಸಿದ್ದು ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಯತ್ನಿಸಿ, ಹೆಚ್ಚಿನ ಹಣ ಖರ್ಚು ಮಾಡಿ ಜನ ಸೇರಿಸಿದ್ದಾರೆ.: ಶೆಟ್ಟರ್‌

ಹುಬ್ಬಳ್ಳಿ: ಸಿದ್ದರಾಮಯ್ಯ “ಅಮೃತಮಹೋತ್ಸವ’ದಿಂದ ಹಾನಿಯಾಗುವುದು ಕಾಂಗ್ರೆಸ್‌ಗೇ ಹೊರತು ಬಿಜೆಪಿಗಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾದ ಜನ್ಮದಿನ ಆಚರಣೆಯಿಂದ ಬಿಜೆಪಿ ಬೆಳವಣಿಗೆ, ಸಂಘಟನೆ, ವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗುವುದಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕೃತಕವಾಗಿ ಅಪ್ಪಿಕೊಂಡಿದ್ದಾರೆ ವಿನಃ ಮನಪೂರ್ವಕವಾಗಿ ಅಲ್ಲ. ತೋರಿಕೆಗಾಗಿ ನಾವೆಲ್ಲ ಒಂದಾಗಿದ್ದೇವೆ …

Read More »

ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ

ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ ನಡೆಸಿದ ಓರ್ವ ವ್ಯಕ್ತಿಯನ್ನು ರೈಲ್ವೆ ಪೆÇಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಖಾನಾಪುರದ ಲೋಂಡಾ ರೈಲು ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ನಾಸೀರ ಇಸ್ಮಾಯಿಲ್ ಪಠಾಣ (32) ಎಂಬುವರ ಮೇಲೆ ಬುಧವಾರ ರಾತ್ರಿ ಲೋಂಡಾ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ನಂ 1 ಹಾಗೂ 2 ರ ನಡುವಿನ ಓವರ್ ಬ್ರಿಡ್ಜ್ ಮೇಲೆ ನಡೆದಿದೆ. …

Read More »