Breaking News

ತ್ರಿವರ್ಣ ಧ್ವಜ ವೈಭವ; ಕೆಂಪುಕೋಟೆಯಿಂದ ಸಂಸತ್‌ ಭವನಕ್ಕೆ ಸಂಸದರ ಬೈಕ್‌ ರ‍್ಯಾಲಿ

ನವದೆಹಲಿ: ಸ್ವಾತಂತ್ರ್ಯದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಲವು ಅಭಿಯಾನಗಳನ್ನು ಕೈಗೊಂಡಿರುವಂತೆಯೇ ಎಲ್ಲೆಲ್ಲೂ “ತ್ರಿವರ್ಣ ಧ್ವಜ’ಗಳು ಕಂಗೊಳಿಸತೊಡಗಿವೆ. ರಾಜಕೀಯ ನಾಯಕರಾದಿಯಾಗಿ ಎಲ್ಲರ ಪ್ರೊಫೈಲ್‌ ಪಿಕ್ಟರ್‌ಗಳಲ್ಲಿ ತಿರಂಗಾ ರಾರಾಜಿಸುತ್ತಿವೆ.   ಮಂಗಳವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು “ತಿರಂಗಾ ಉತ್ಸವ’ಕ್ಕೆ ಚಾಲನೆ ನೀಡಿದ್ದಾರೆ. ಸದ್ಯದಲ್ಲೇ ಮನೆ -ಮನೆಗಳಲ್ಲೂ ಧ್ವಜ ಹಾರಾಟ ನಡೆಯಲಿದೆ. ಇದರ ನಡುವೆಯೇ, ದೆಹಲಿಯಲ್ಲಿ ಬುಧವಾರ ಸಂಸದರು ತಿರಂಗಾ ಬೈಕ್‌ ರ‍್ಯಾಲಿ ನಡೆಸಿದ್ದಾರೆ. ಕೆಂಪುಕೋಟೆಯಿಂದ ಹೊರಟು ಸಂಸತ್‌ ಭವನದವರೆಗೆ …

Read More »

ಬಿಜೆಪಿಗೆ ಬಿಸಿ ತಂದ ಸಿದ್ದರಾಮೋತ್ಸವದ ಯಶಸ್ಸು

ಬೆಂಗಳೂರು: ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಾ ಹೈರಾಣಾಗಿದ್ದ ರಾಜ್ಯ ಸರಕಾರಕ್ಕೆ‌ ಸಿದ್ದರಾಮಯ್ಯ ಅಮೃತ ಮಹೋತ್ಸವದ ಯಶಸ್ಸು ಈಗ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಪಕ್ಷ ಹಾಗೂ‌ ಹೈಕಮಾಂಡ್ ನ ವಿಮರ್ಶೆಯ‌ ನಿಕಶಕ್ಕೆ ಒಳಗಾಗುವ ಸಾಧ್ಯತೆ ನಿಚ್ಚಳವಾಗಿದೆ.   ಬೊಮ್ಮಾಯಿ ಅವರ ಕಾರ್ಯಶೈಲಿ, ಕಡತ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಂಘ‌ಪರಿವಾರದ ಮುಖಂಡರು‌ ಇತ್ತೀಚೆಗೆ ತೀವ್ರ ಬೇಸರ‌ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆಯಿಂದ‌ ಸೃಷ್ಟಿಯಾದ ಸೈದ್ಧಾಂತಿಕ …

Read More »

ಭೂ ಹಗರಣ ಪ್ರಕರಣ: ಸಂಜಯ್ ರಾವತ್ ಇ.ಡಿ ಕಸ್ಟಡಿ ಆಗಸ್ಟ್ 8ರವರೆಗೆ ವಿಸ್ತರಣೆ

ಮುಂಬೈ: ಪಟ್ರಾ ಚಾವ್ಲ್ ಭೂ ಪುನರ್ ಅಭಿವೃದ್ಧಿ ಪ್ರಕರಣ ಮತ್ತು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಸೇನಾ ಹಿರಿಯ ಮುಖಂಡ ಸಂಜಯ್ ರಾವತ್ ಬಂಧನದ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದೆ.   ಇಂದು ರಾವತ್ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನಂತರ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ ಎಂದು ವರದಿ ತಿಳಿಸಿದೆ. ಭೂ ಹಗರಣಕ್ಕೆ …

Read More »

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ ಮಾಡುತ್ತ ಸಂಚರಿಸುತ್ತಿರುವುದು ಕಂಡುಬಂತು. ಹಳೇ ಪಿ.ಬಿ. ರಸ್ತೆ ಮೇಲ್ಸೇತುವೆ ಪಕ್ಕದ ಸರ್ವೀಸ್‌ ರಸ್ತೆ, ಹಿಂದವಾಡಿಯ ಕೆಲ ಅಪಾರ್ಟ್‌ಮೆಂಟ್‌ಗಳ ನೆಲ ಮಹಡಿಗೂ ಮಳೆ ನೀರು ‌ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಶಿವಬಸವ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ರಸ್ತೆಯಲ್ಲೂ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಮಳೆಯಿಂದಾಗಿ ಕೇಂದ್ರ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್‌, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾ ಯಿತು. ಜನರು ರಸ್ತೆಯ ಇಕ್ಕೆಲ ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ ವರೆಗೂ ಮಳೆ ಮುಂದುವರಿದಿತ್ತು. ಪೊಲೀಸ್‌ ಉಪಠಾಣೆ ಮುಳುಗಡೆ: ರಾಮದುರ್ಗ ತಾಲ್ಲೂಕಿನ ಸುರೇಬಾನ – ಮನಿಹಾಳ ಗ್ರಾಮದಲ್ಲಿನ ರಸ್ತೆ ಗಳು ಕೆರೆಯಂತಾದವು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಸುರೇಬಾನ ಪೊಲೀಸ್ ಉಪಠಾಣೆ ಮುಳುಗಡೆಯಾಗಿತ್ತು. ಗ್ರಾಮದ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾ ವಿದ್ಯಾಲಯದ ಆಟದ ಮೈದಾನ‌ವೂ ಜಲಾವೃತವಾಗಿತ್ತು. ರಸ್ತೆ ಮೇಲೆ ಅಪಾರ ಪ್ರಮಾಣ ನೀರು ಹರಿದಿದ್ದರಿಂದ ವಾಹನ ಸಂಚಾರರು ಪರದಾಡಿದರು. ವಿದ್ಯಾರ್ಥಿಗಳು ಸೈಕಲ್ ಮೇಲೆ ಸಾಗಿದರು.

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು.   ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ …

Read More »

ಭಕ್ತಿ ಭಾವದ ಪ್ರತೀಕ ಬೂದಿಹಾಳ ಅಡಿವೆಪ್ಪ ಮಹಾರಾಜರು

ಹೂವಿನಹಿಪ್ಪರಗಿ: ಭಕ್ತಿಯಿಂದ ನಡೆದು ಗುರುವಿನ ದಾಸನಾಗಿ ದುಡಿದು ಗುರು ಮಿರಿಸಿ ತನ್ನ ಭಕ್ತ ಬಳಗಕ್ಕೆ ಬೇಡಿದ ವರವನ್ನು ನೀಡಿ ಭಕ್ತಿ ಭಾವದ ಪ್ರತೀಕವಾಗಿ ಇಂದು ಸಾವಿರಾರು ಜನರಿಗೆ ದಾರಿ ದೀಪವಾಗಿರುವ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರು ಎಂದು ಸರೂರ ರೇವಣಸಿದ್ದೇಶ್ವರ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.   ಬಸವನಬಾಗೇವಾಡಿ ತಾಲೂಕಿನ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರ ಶ್ರಾವಣ ಮಾಸದ ಜಾತ್ರೆಯಲ್ಲಿ ಮಾತನಾಡಿದ ಅವರು, ಭಕ್ತರನ್ನು …

Read More »

ತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ

ಬೆಳಗಾವಿ/ಚ.ಕಿತ್ತೂರು: ಚನ್ನಮ್ಮನ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆಯನ್ನು ಬಚ್ಚನಕೇರಿಯಲ್ಲಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕಿತ್ತೂರಿನ ಜನತೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.   ಕಿತ್ತೂರಿನಲ್ಲಿ ಚನ್ನಮ್ಮ ಪ್ರತಿಮೆಗೆ ಗೌರವ ಸಲ್ಲಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಂಗಡಿ ಮುಂಗಟ್ಟು ಸೇರಿದಂತೆ ವ್ಯಾಪಾರ ವಹಿವಾಟು ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಿತ್ತೂರು ಬಂದ್‌ ಯಶಸ್ವಿಯಾಯಿತು. ನಂತರ ಬೆಳಗಾವಿ …

Read More »

: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದ ಅಶ್ವತ್ಥ ನಾರಾಯಣ .

ಬೆಳಗಾವಿ: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಆಗ್ರಹಿಸಿದರು. ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ರಾಜಕೀಯ ನಿವೃತ್ತಿ ಪಡೆಯಬೇಕು. ಔಟ್‌ಡೇಟೆಡ್‌ ಮಾಡಲ್‌ಗ‌ಳು ಎಲ್ಲ ಆಯ್ತು. ಐದು ವರ್ಷ ಜನ ಭಾರ ಹೊತ್ತುಕೊಂಡಿದ್ದರು. ಇನ್ನು ಯಾರು ಭಾರ ಹೊರುವವರು ಎಂದು ಟೀಕಿಸಿದರು. ಜತೆಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನೂ ತಿಳಿಸಿದರು. ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ …

Read More »

ಮತದಾರ ಪಟ್ಟಿಗೆ ಆಧಾರ್‌ ಜೋಡಣೆಗೆ ಚಾಲನೆ

ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್‌ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.   ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.   ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …

Read More »

ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ?

ನವದೆಹಲಿ: ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ? ರಾಜ್ಯಸಭೆಯಲ್ಲಿ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಆಡಿರುವ ಮಾತು ಇಂಥದ್ದೊಂದು ಸುಳಿವು ನೀಡಿದೆ. ನಾವು ಫಾಸ್ಟ್ಯಾಗ್ ಬದಲು ಜಿಪಿಎಸ್‌ ವ್ಯವಸ್ಥೆ ಪರಿಚಯಿಸುವ ಕುರಿತು ಚಿಂತನೆ ನಡೆಸಿದ್ದೇವೆ. ನಮ್ಮ ಮುಂದೆ 2 ಆಯ್ಕೆಗಳಿವೆ. ಒಂದನೆಯದು, ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆ. ಇಲ್ಲಿ ಕಾರಿನಲ್ಲೇ ಜಿಪಿಎಸ್‌ ಅಳವಡಿಸಲಾಗುತ್ತದೆ. ಕಾರು ಟೋಲ್‌ ಪ್ಲಾಜಾ ದಾಟಿದ ತಕ್ಷಣ ಬ್ಯಾಂಕ್‌ ಖಾತೆಯಿಂದ ಟೋಲ್‌ ಮೊತ್ತ ಕಡಿತಗೊಳ್ಳುತ್ತದೆ. ಇನ್ನೊಂದು, …

Read More »