ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ಯ ನಿಪ್ಪಾಣಿಯ ಅಶೋಕ ನಗರದ ಎಸ್ಬಿಐ ಬ್ಯಾಂಕ್ ಬಳಿ, ಅಥಣಿ ಪಟ್ಟಣ, ಗೋಕಾಕ್ ಪಟ್ಟಣ ಸೇರಿ ಇನ್ನಿತರ ಕಡೆಗಳಲ್ಲಿ ಆಯಾ ಠಾಣೆಗಳ ಪೊಲೀಸರು ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು.ಈ ನಿಯಮಗಳನ್ನು ಪಾಲನೆ …
Read More »ವಿಜಯಪುರ ನಗರದಲ್ಲಿ ಮಳೆಯಿಂದ ಆವಾಂತರ: ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಚವ್ಹಾಣ ಭೇಟಿ
ಕಳೆದ ಎರಡು ದಿನಗಳಿಂದ ವಿಜಯಪುರ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವು ಆವಾಂತರವನ್ನೇ ಸೃಷ್ಟಿ ಮಾಡಿದೆ, ಹಲವು ಮನೆಗಳಿಗೆ ನೀರು ನುಗ್ಗಿ ರಾತ್ರೀ ಇಡೀ ಜಾಗರಣೆ ಮಾಡುವಂತಹ ಪರಿಸ್ಥಿತಿ ಕೂಡ ಕೆಲವೆಡೆ ನಿರ್ಮಾಣವಾದರೆ ಹಲವು ಮನೆಗಳು ನೆಲಕ್ಕುರುಳಿವೆ. ಹೌದು ಕಳೆದಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಿಜಯಪುರ ನಗರದಲ್ಲಿ ಹಲವು ಆವಾಂತರಕ್ಕೆ ಕಾರಣಾವಾಗಿದೆ. ನಿನ್ಮೆ ಅಂಜೆ ಸುರಿದ ಮಳೆಯಿಂದಾಗಿ ನಗರದ ಕೆ ಸಿ ಮಾರುಕಟ್ಟೆಯಲ್ಲಿ ತಳ್ಳು ಗಾಡಿ ವ್ಯಾಪಾರಸ್ಥರು ಹಾಗೂ …
Read More »ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ
ಬೆಳಗಾವಿ ನಗರದ ರೈಲು ನಿಲ್ದಾಣದಲ್ಲಿ ಆಗುತ್ತಿರುವ ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು ಬೆಳಗಾವಿಯ ರೈಲು ನಿಲ್ದಾಣ ಕಾಮಗಾರಿಯು ನಡೆದಿರುವ ಸ್ಥಳಕ್ಕೆ ಇಂದು ಮಂಗಳವಾರ ಭೇಟಿ ನೀಡಿದ ಸಂಸದೆ ಮಂಗಳಾ ಅಂಗಡಿರವರು ಇಂದು ಮಂಗಳವಾರ ರೈಲು ನಿಲ್ದಾಣದಲ್ಲಿ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರು. ಮುಖ್ಯ ಪ್ರವೇಶ ದ್ವಾರದ ಮೂಲಕ …
Read More »ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಗೋಕಾಕ್ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. …
Read More »ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿವೆ ಎನ್ನಲಾಗಿದ್ದು, ಇವುಗಳಲ್ಲಿ ಬಹಳಷ್ಟು ಕಟ್ಟಡಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಹೀಗಾಗಿ ಜನಸಾಮಾನ್ಯರಿಗೆ ಮಾತ್ರ ಈ ತೆರವು ಕಾರ್ಯಾಚರಣೆ ಅನ್ವಯ ಎಂಬ ಆರೋಪ ಕೇಳಿ ಬರುತ್ತಿದ್ದರ ಮಧ್ಯೆ ಸಚಿವ ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ …
Read More »ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು
ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …
Read More »ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೆ ವಾರ್ಡ್ ಮೀಸಲಾತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್
ಬೆಂಗಳೂರು: ಬಿಬಿಎಂಪಿಯ 243 ವಾರ್ಡ್ಗಳಿಗೆ ನಿಗದಿ ಪಡಿಸಿರುವ ಮೀಸಲಾತಿ ಮರು ಪರಿಶೀಲನೆ ನಡೆಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಕೇಳಿದೆ. ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ವಿಧಾನಸಭಾ ಕ್ಷೇತ್ರದ ವಾರ್ಡ್ಗಳಲ್ಲಿ ಮಹಿಳೆಯರಿಗೆ ಮಾತ್ರ ಮೀಸಲಿರಿಸಲಾಗಿದೆ. ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೇ ಮೀಸಲಿರಿಸಲಾಗಿದೆ. ಆ …
Read More »ಎಲ್ಲ ವಿ.ವಿ.ಗಳಲ್ಲಿ ಏಕರೂಪದ ಪಠ್ಯಕ್ರಮ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ
ಬೆಳಗಾವಿ : ‘ರಾಜ್ಯದಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈಗ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯಕ್ರಮವಿದೆ’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು 2019ರಲ್ಲಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಠ್ಯಕ್ರಮ ಪರಿಷ್ಕರಿಸಿದ್ದೆ. ಆಗ ಮೂರು ವರ್ಷಗಳಿಗೊಮ್ಮೆ ಸ್ನಾತಕೋತ್ತರ ಕೋರ್ಸ್ಗಳ ಪಠ್ಯಕ್ರಮ ಹಾಗೂ ಐದು ವರ್ಷಗಳಿಗೊಮ್ಮೆ ಸ್ನಾತಕ ಕೋರ್ಸ್ಗಳ ಪಠ್ಯಕ್ರಮ ಪರಿಷ್ಕರಣೆಗೆ ಅವಕಾಶವಿತ್ತು. ಎನ್ಇಪಿ …
Read More »ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ
ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ …
Read More »ಚಿತ್ತಾಪುರದ ಯುವಕ ಧಾರವಾಡದಲ್ಲಿ ನಿಗೂಢ ಕಣ್ಮರೆ: 40 ದಿನ ಕಳೆದರೂ ಸುಳಿವಿಲ್ಲ
ವಾಡಿ (ಚಿತ್ತಾಪುರ): ಪೊಲೀಸ್ ಹುದ್ದೆಗೇರುವ ಕನಸು ಕಟ್ಟಿಕೊಂಡು ಧಾರವಾಡ ನಗರದ ಕೋಚಿಂಗ್ ಸೆಂಟರ್ ಸೇರಿಕೊಂಡಿದ್ದ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ಯುವಕನೋರ್ವ ನಿಗೂಢ ನಾಪತ್ತೆಯಾಗಿದ್ದು, ಕಳೆದ 40 ದಿನಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರೂ ಆತನ ಸುಳಿವು ಪತ್ತೆಯಾಗಿಲ್ಲ. ಕಾಗಿಣಾ ನದಿ ತೀರದ ಇಂಗಳಗಿ ಗ್ರಾಮದ ನಿವಾಸಿ ಸಾಬಣ್ಣ ಭಜಂತ್ರಿ (25) ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ನಾಲ್ಕು ತಿಂಗಳ ಹಿಂದೆ ಧಾರವಾಡ ನಗರದ ಗುರುದೇವ ಕೋಚಿಂಗ್ ಕೇಂದ್ರ ಸೇರಿಕೊಂಡಿದ್ದ ಎನ್ನಲಾಗಿದ್ದು, …
Read More »
Laxmi News 24×7