Breaking News

ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು

ಗೋಕಾಕ (ಬೆಳಗಾವಿ ಜಿಲ್ಲೆ): ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, ಗೋಕಾಕ ನಗರದ ಕೆಲವು ರಸ್ತೆಗಳಿಗೆ ನೀರು ನುಗ್ಗಿದೆ. 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು ಸಂಗ್ರಹಗೊಂಡಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ.   ಎರಡು ದಿನಗಳಿಂದ ಘಟಪ್ರಭಾ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜಾ ಲಖಮಗೌಡ ಜಲಾಶಯ (ಹಿಡಕಲ್‌) ದಿಂದ ಘಟಪ್ರಭಾ ನದಿಗೆ 28 ಸಾವಿರ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಈ …

Read More »

2.70 ಕೋಟಿ ರೂ.ಲೂಟಿ ಮಾಡಿದ ಬ್ಯಾಂಕ್ ಸಹಾಯಕ ಮ್ಯಾನೇಜರ್ ನಾಪತ್ತೆ

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಯಲ್ಲಾಪುರದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿನ ಸಹಾಯಕ ಮ್ಯಾನೇಜರ್ ಅಕ್ರಮವಾಗಿ 2.70 ಕೋಟಿ ರೂ.ಗಳನ್ನು ಲಪಟಾಯಿಸಿ ತನ್ನ ಪತ್ನಿ ಖಾತೆಗೆ ಜಮಾ ಮಾಡಿದ್ದ ಹಗರಣ ಸಂಬಂಧ ಪ್ರಕರಣ ದಾಖಲಾಗಿದೆ. ಸುಮನ್ ಪನ್ನೇಕರ್ ಹೇಳಿದ್ದಾರೆ. ನಗರದ ಎಸ್‌ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ಬೋನಲ್ ಬ್ಯಾಂಕ್ ನ ಕ್ಲರ್ಕ್ ಮತ್ತು …

Read More »

ಸರ್ಕಾರಿ ಪ್ರೌಢಶಾಲೆಗಳಲ್ಲಿನ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.   ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 …

Read More »

ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ

ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹೌದು 29 ವರ್ಷದ ಮಂಜುನಾಥ ಗಂಗಾಧರ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೆಸ್ಕಾಂ ಗುತ್ತಿಗೆ ಕಾರ್ಮಿಕ. ಮೂಲತಃ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ನಿವಾಸಿಯಾಗಿದ್ದು. ಸಧ್ಯ ಅಥಣಿ ಹೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‍ಗೆ ಬೈಕ್ ಸಹಾಯದಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಥಣಿ ಪೆÇಲೀಸರು …

Read More »

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ   ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.  

Read More »

ಲೈಂಗಿಕ ದೌರ್ಜನ್ಯ ಸಾಬೀತಾದರೆ 20 ವರ್ಷ ಜೈಲು

ವಿಜಯಪುರ: ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೊ ಕಾಯ್ದೆ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ …

Read More »

2022: ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

UPSC Recruitment 2022: ಕೇಂದ್ರ ಲೋಕ ಸೇವಾ ಆಯೋಗದಿಂದ (union Public Service Commission) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಮತ್ತು ಇತರ ಸಚಿವಾಲಯಗಳಲ್ಲಿ ಜಾರಿ ನಿರ್ದೇಶಕ ಅಧಿಕಾರಿ ಸೈಂಟಿಸ್ಟ್​ ಬಿ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 54 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ …

Read More »

ಸೆ.26 ರಿಂದ ಅ.10ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸೂಚನೆ

ಸೆ.12: ನವರಾತ್ರಿ ಆಚರಣೆಯ ಸಲುವಾಗಿ ಸೆ. 26ರಿಂದ ಅ.10ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸಹಿತ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲೇ ನೀಡುವಂತೆ ಮನವಿ ಮಾಡಿದ್ದೆ. …

Read More »

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.

ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ. ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …

Read More »

ಬ್ಯಾಂಕ್‌ನ 2 ಕೋಟಿ ಹಣ ಹೆಂಡ್ತಿ ಅಕೌಂಟ್‌ಗೆ ಟ್ರಾನ್ಸ್‌ಫರ್! ವಂಚಕ ಅಸಿಸ್ಟೆಂಟ್ ಮ್ಯಾನೇಜರ್ ಎಸ್ಕೇಪ್

ಯಲ್ಲಾಪುರ, ಉತ್ತರ ಕನ್ನಡ: ಯಲ್ಲಾಪುರ (Yellapur) ತಾಲೂಕಿನ ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) ಭಾರೀ ಗೋಲ್ಮಾಲ್ (Golmall) ನಡೆದಿದೆ. ಇಲ್ಲಿನ ಶಾಖೆಯಲ್ಲಿ (Branch) 2.69 ಕೋಟಿ ರೂ. ಬ್ಯಾಂಕ್ ಅಧಿಕಾರಿಯೇ (bank Officers) ಲಪಟಾಯಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಇದ್ರಿಂದ ಗ್ರಾಹಕರು (Customer) ಬ್ಯಾಂಕ್ ಮೇಲಿನ ವಿಶ್ವಾಸ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಘಟನೆ ಸಂಬಂಧಿಸಿದಂತೆ ಪೊಲೀಸ್ ತನಿಖೆ (police enquiry) ಚುರುಕುಗೊಂಡಿದೆ. ಈ ನಡುವೆ ಹಣ …

Read More »