Breaking News

ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ: ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …

Read More »

ಎಲ್ಲಾ ಸಮಾಜದ ಸಾಧು, ಸಂತರು, ಸನ್ಯಾಸಿ ಹಾಗೂ ಮಠಾಧೀಶರ ಹಿತರಕ್ಷಣೆಗೆ ಬಿಜೆಪಿ ಬದ್ದ: ಸಂಜಯ ಪಾಟೀಲ

ಎಲ್ಲಾ ಸಮಾಜದ ಸಾಧು, ಸಂತರು, ಸನ್ಯಾಸಿ ಹಾಗೂ ಮಠಾಧೀಶರ ಹಿತರಕ್ಷಣೆಗೆ ಬಿಜೆಪಿ ಬದ್ದವಾಗಿದ್ದು, ಸಮಾಜದಲ್ಲಿ ಘಾತಕ ಶಕ್ತಿಗಳ ಮಟ್ಟಾಹಾಕಲು ಬಿಜೆಪಿ ಸಿದ್ದ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ದಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈ ನಾಡಿನಲ್ಲಿ ಸಾಧು ಸಂತರ ಹಾಗೂ ಸನ್ಯಾಸಿಗಳ ತ್ಯಾಗದಿಂದ ಇಂದು ಪ್ರತಿಯೊಂದು ಸಮಾಜದ ಜನರು ಅವರ ಮಾರ್ಗದರ್ಶನದಲ್ಲಿ ಸಂಸ್ಕಾರಯುತವಾಗಿ ಸಾಮರಸ್ಯದ …

Read More »

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ `ಜನಸ್ಪಂದನ’ ಸಮಾವೇಶ : 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.   ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ …

Read More »

ಉಮೇಶ್ ಕತ್ತಿ ಮಗನಾದರೂ ಸಿಎಂ ಆಗಲಿ: ಶ್ರದ್ಧಾಂಜಲಿ ಸಭೆಯಲ್ಲಿ ಈಶ್ವರಪ್ಪ ಆಶಯ

ಶಿವಮೊಗ್ಗ: ಮುಖ್ಯಮಂತ್ರಿಯಾಗಬೇಕೆಂಬ ಕನಸು ಮಾಜಿ ಸಚಿವ ಉಮೇಶ್ ಕತ್ತಿ ಅವರಲ್ಲಿತ್ತು. ನಾನಲ್ಲದಿದ್ದರೆ ನನ್ನ ಮಗನಾದರೂ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದರು. ಸಿಎಂ ಆಗುವ ಅವರ ಕನಸು ಈಡೇರುವ ಮುನ್ನವೇ ನಮ್ಮನ್ನು ಅಗಲಿದ್ದಾರೆ. ಅವರ ಮಗನಾದರೂ ಭವಿಷ್ಯದಲ್ಲಿ ಸಿಎಂ ಆಗಲಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಶಿಸಿದರು. ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಉಮೇಶ್ ಕತ್ತಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಪದೇಪದೆ ಉಮೇಶ್ ಕತ್ತಿ ಹೇಳುತ್ತಿದ್ದರು. ಅದನ್ನು …

Read More »

ಕೃಷಿ ಸಚಿವರು ಮಿಸ್ಸಿಂಗ್‌ ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದಪ್ಪ ಮೀಸೆ : ʼಕೈʼ ಪ್ರಕಟಣೆ

ಬೆಂಗಳೂರು: ಬಿಜೆಪಿ ಸಚಿವರ ವಿರುದ್ಧ ʼಮಿಸಿಂಗ್‌ ಮಿನಿಸ್ಟರ್‌ʼ ಅಭಿಯಾನವನ್ನು ಕಾಂಗ್ರೆಸ್‌ ಪಡೆ ಮುಂದುವರೆಸಿದೆ. ಇಂದು ಕೃಷಿ ಸಚಿವರು ಕಾಣೆಯಾಗಿದ್ದಾರೆ. ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು ಎಂದು ಬಿ.ಸಿ.ಪಾಟೀಲ್‌ ಅವರ ಕಾಲೆಳೆದಿದ್ದಾರೆ.   ಕೃಷಿ ಸಚಿವರು ಕಾಣೆಯಾಗಿದ್ದಾರೆ. ಹೆಸರು:ಬಿ.ಸಿ.ಪಾಟೀಲ್‌, ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದುಂಡುಮುಖ, ದಪ್ಪ ಮೀಸೆ. ವಯಸ್ಸು : 65. ಸಿನೆಮಾ ಪ್ರದರ್ಶನದಲ್ಲಿ ಕಾಣಿಸಿಕೊಂಡವರು ನಂತರ ಪತ್ತೆಯಾಗಿಲ್ಲ. ಹಲವು ತಿಂಗಳಿಂದ ಅತಿವೃಷ್ಟಿಯ ಸಂಕಷ್ಟದಲ್ಲಿರುವ ರಾಜ್ಯದ ರೈತರು ಸಚಿವರನ್ನು ಕಾಣದೆ ಆತಂಕಗೊಂಡಿದ್ದಾರೆ. ದಯಮಾಡಿ ಹುಡುಕಿಕೊಡಿ …

Read More »

ಕರ್ನಾಟಕದ ನೀಟ್ ಸಾಧನೆ: ಟಾಪ್ 50 ಪಟ್ಟಿಯಲ್ಲಿ 9 ರ‌್ಯಾಂಕ್; 72000 ವಿದ್ಯಾರ್ಥಿಗಳಿಗೆ ಅರ್ಹತೆ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ರಾಜ್ಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ಅಖಿಲ ಭಾರತ ಮಟ್ಟದ ಟಾಪ್ 20ರಲ್ಲಿ 6 ಹಾಗೂ 50ರ ಪಟ್ಟಿಯಲ್ಲಿ ಒಟ್ಟು 9 ಅಭ್ಯರ್ಥಿಗಳು ಸ್ಥಾನ ಪಡೆೆದಿದ್ದಾರೆ. ಇದಲ್ಲದೆ, ವಿವಿಧ ವಿಭಾಗಗಳಲ್ಲಿನ ಟಾಪರ್​ಗಳನ್ನು ಸೇರಿಸಿದಲ್ಲಿ ಸಂಖ್ಯೆ 14ಕ್ಕೆ ಏರಿಕೆಯಾಗುತ್ತದೆ. ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿದಂತಾಗಿದೆ. ಅರ್ಹತೆಯಲ್ಲೂ ರೆಕಾರ್ಡ್: ಈ ಬಾರಿ ರಾಜ್ಯದ 1,22,423 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಟ್ಟಾರೆ 72,262 ಜನರು …

Read More »

ಅತ್ತ ಸಚಿವರ ಅಂತ್ಯಕ್ರಿಯೆ, ಇತ್ತ ಉತ್ಸವದಲ್ಲಿ ಶಾಸಕರು!

ಕಲಬುರಗಿ: ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನದ ಪ್ರಯುಕ್ತ ಬುಧವಾರ ರಾಜ್ಯದಾದ್ಯಂತ ಸರ್ಕಾರ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮಾಡದಂತೆ ಸೂಚನೆ ನೀಡಿತ್ತು. ಆದರೂ, ಶಹಾಬಾದ್‌ನಲ್ಲಿ ಆಯೋಜಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ವೇದಿಕೆ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.    

Read More »

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ರಾಣಿ ಎಲಿಝಬೆತ್ ನಿಧನ

ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ || ಗುರುವಾರ ನಿಧರಾಗಿದ್ದಾರೆ. 96 ವರ್ಷದ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ವೈದ್ಯರ ನಿಗಾದಲ್ಲಿ ಅವರನ್ನು ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳದಿದ್ದಾರೆ ಎಂದು ಬಂಕಿಂಗ್‌ಹ್ಯಾಮ್‌ ಅರಮನೆ ಹೇಳಿಕೆ ಬಿಡುಗಡೆ ಮಾಡಿದೆ.   “ಇಂದು ಬೆಳಗ್ಗೆ ಹೆಚ್ಚಿನ ಪರೀಕ್ಷೆಯ ಬಳಿಕ, ರಾಣಿಯ ವೈದ್ಯರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಅವರು ವೈದ್ಯಕೀಯ ನಿಗಾದಲ್ಲಿ ಉಳಿಯಲು ಶಿಫಾರಸು ಮಾಡಿದ್ದರು. ನಂತರ …

Read More »

ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು.   ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ …

Read More »