Breaking News

ಗಡಿಭಾಗದಲ್ಲಿ ಪರಾರಿಯಾಗಲು ಸುಲಭ: ತಪಾಸಣೆ ಇಲ್ಲ, ಸಿಸಿ ಕೆಮರಾ ಇಲ್ಲ

ಉಳ್ಳಾಲ/ವಿಟ್ಲ/ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಕೇರಳದ ಗಡಿಗಳಲ್ಲಿ ಇರುವ ಚೆಕ್‌ ಪೋಸ್ಟ್‌ಗಳು ಸುಸಜ್ಜಿತವಾಗದಿರುವುದು ಕರ್ನಾಟಕದಲ್ಲಿ ದುಷ್ಕೃತ್ಯ ಎಸಗಿ ಕೇರಳಕ್ಕೆ ಪರಾರಿಯಾಗುವ ದುಷ್ಕರ್ಮಿಗಳಿಗೆ ಸುಲಭದ ದಾರಿಯಾಗಿದೆ.   ಮಂಗಳವಾರ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯ ಕಾರಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆಗೈದ ಕೊಲೆಗಡುಕರೂ ಕೇರಳದಿಂದಲೇ ಬಂದಿದ್ದರು ಎನ್ನಲಾಗಿದೆ. ದಕ್ಷಿಣ ಕನ್ನಡಕ್ಕೆ ಬಹುಮುಖ್ಯವಾಗಿ ಇರುವ ಕೇರಳದ ಗಡಿಗಳಲ್ಲಿ ಬಂದೋಬಸ್ತ್ ಲೆಕ್ಕಾಚಾರಕ್ಕಷ್ಟೇ. ವಿಟ್ಲದ ಗಡಿ, ಸುಳ್ಯದ …

Read More »

ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ

ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್​​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …

Read More »

ಹಲ್ಲಿ ಬಿದ್ದಿರುವ ಶಂಕೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎನ್ನಲಾಗ್ತಿದೆ. ಅದೇ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ‌ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆಹಾರ‌ ಸೇವಿಸಿದ ಸ್ವಲ್ವ ಸಮಯದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಆಗ ತಕ್ಷಣ ಅವರನ್ನು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …

Read More »

ಪ್ರವೀಣ್ ನೆಟ್ಟಾರು ಹತ್ಯೆ: 15ಕ್ಕೂ ಹೆಚ್ಚು ಜನರು ವಶಕ್ಕೆ, 6 ಪೊಲೀಸ್‌ ತಂಡಗಳಿಂದ ತನಿಖೆ

ಸುಳ್ಯ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ತನಿಖೆ ಪ್ರಗತಿಯಲ್ಲಿದೆ. ಮೇಲ್ನೋಟಕ್ಕೆ ಹತ್ಯೆಗೆ 2-3 ಕಾರಣಗಳು ಕಂಡುಬರುತ್ತಿದೆ. ಈಗಾಗಲೇ ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಮಂಗಳೂರು ಕಮಿಷನರ್, ಉಡುಪಿ ಪೊಲೀಸರ ಸಹಾಯ ಪಡೆದು ಈಗಾಗಲೇ ಆರು ತಂಡಗಳನ್ನು ರಚಿಸಿದ್ದೇವೆ. …

Read More »

ಬೆಳಗಾವಿ ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

ಬೆಳಗಾವಿ: ತಾಲೂಕಿನ ಹಿಂಡಲಗಾ-ಸುಳಗಾ ರೋಡ್​ನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಹಿಂಡಲಗಾ – ಸುಳಗಾ ರೋಡನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್​ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಹಿಳಾ ಪೊಲೀಸ್ …

Read More »

ಬಿಜೆಪಿ ಸಾಧನಾ ಸಮಾವೇಶ ರದ್ದು, ರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ: C.M.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯಾಗಿರುವ ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪಲಿಲ್ಲ. ಹಾಗಾಗಿ, ‘ಜನೋತ್ಸವ ಕಾರ್ಯಕ್ರಮ’ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರ ನಿವಾಸದಲ್ಲಿ ಸರಿರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಒಂದೆಡೆ ನಮ್ಮ ಯುವ ಕಾರ್ಯಕರ್ತನ ಕೊಲೆಯಾಗಿದೆ. ಇದೇ ವೇಳೆ ನಮ್ಮ ಸರ್ಕಾರಕ್ಕೆ …

Read More »

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ …

Read More »

ಮೊಬೈಲ್‌ ಕದ್ದು ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ದೋಚುತ್ತಿದ್ದ ಕದೀಮರು

ಕಲಬುರಗಿ: ಮೊಬೈಲ್‌ ಕಳ್ಳತನ ಮಾಡಿ ಫೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 22 ಮೊಬೈಲ್‌ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್‌ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್‌ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ …

Read More »

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ರಾಜ್ಯ ಶಿಕ್ಷಣ ಇಲಾಖೆಯು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ.   ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು-2012ರಂತೆ ಶೈಕ್ಷಣಿಕ ವರ್ಷದಲ್ಲಿ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ. 2016-17ನೇ ಶೈಕ್ಷಣಿಕ …

Read More »

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ. ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು. ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ. ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು …

Read More »