Breaking News

ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ …

Read More »

ಹೈ ಪ್ರೊಫೈಲ್ ಸೆಕ್ಸ್ ರಾಕೆಟ್: ಬೆಂಗಳೂರಿನ ಯುವತಿಯರು ಸಹಿತ 11 ಮಂದಿ ಅರೆಸ್ಟ್

ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ.   ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್​ಪಿನ್​ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಇವರ ಸ್ಮಾರ್ಟ್​ಫೋನ್​ಗಳನ್ನು ತನಿಖೆಗೆ ಒಳಪಡಿಸಿದಾಗ …

Read More »

ಪಂಪಸೆಟ್ ಕೇಬಲ್ ಕಳ್ಳರನ್ನು ಹಿಡಿದ ರೈತರು

ಜಮೀನಿನ ಪಂಪ್ ಸೆಟ್‍ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ರೈತರು ಧರ್ಮದೇಟು ನೀಡಿರುವ ಘಟನೆ ಗೋಕಾಕ್‍ನ ಭಗೀರಥ ಕಾಲೋನಿಯಲ್ಲಿ ನಡೆದಿದೆ. ಜಮೀನಿನ ಪಂಪ್ ಸೆಟ್‍ನಲ್ಲಿ ಇರೋ ಕೇಬಲ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ತಾಮ್ರದ ತಂತಿಯನ್ನು ಹೆಚ್ಚಿನ ಹಣಕ್ಕೆ ಈ ಖದೀಮರು ಮಾರಾಟ ಮಾಡುತ್ತಿದ್ದರು. ಕಳೆದ ಅನೇಕ ದಿನಗಳಿಂದ ಈ ರೀತಿ ಕೇಬಲ್ ಕಳ್ಳತನ ನಡೆದಿತ್ತು. ಇದರಿಂದ ಕಂಗೆಟ್ಟಿದ್ದ ರೈತರು ಇಂದು ಇಬ್ಬರು ಕಳ್ಳರನ್ನು …

Read More »

ಮೂರು ತಲೆಮಾರಿನಿಂದ ಈ ಕುಟುಂಬ ದೇಶ ಸೇವೆಗೆ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ.

ಕಾರ್ಗಿಲ್‌ ಯುದ್ಧ ಎನ್ನುತ್ತಲೇ ಎಂಥವರ ಮನದಲ್ಲೂ ರೋಮಾಂಚನ ಮೂಡುತ್ತದೆ. ಎದುರಾಳಿಗಳೊಂದಿಗೆ ನಮ್ಮ ಸೈನಿಕರು ಧೈರ್ಯದಿಂದ ಸೆಣಸುವ, ಎದುರಾಳಿಗಳನ್ನು ಸದೆಬಡಿಯುವ ದೃಶ್ಯಗಳು ಕಣ್ಣೆದುರು ಬಂದುನಿಲ್ಲುತ್ತದೆ. ತಮ್ಮ ಕುಟುಂಬದ ಹಿತ ಬದಿಗೊತ್ತಿ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡು ದೇಶಕ್ಕಾಗಿ ಪ್ರಾಣವನ್ನೇ ತೆತ್ತ ಸೈನಿಕರು ನಮ್ಮ ನಾಡಿನಲ್ಲಿದ್ದಾರೆ. ಅಂತಹವರಲ್ಲಿ ಬೆಳಗಾವಿಯ ಕುಟುಂಬವೂ ಒಂದಿದೆ.ಸುಮಾರು ಮೂರು ತಲೆಮಾರಿನವರೆಗೆ ದೇಶ ಸೇವೆ ಮಾಡುತ್ತಿದೆ. ಇತ್ತ ಕಾಗ್ರಿಲ್ ಯುದ್ಧದಲ್ಲಿ ಮಗನನ್ನು ಕಳೆದುಕೊಂಡ ತಾಯಿ ಹೇಳೊದಾದರೂ ಏನು  ಭಾರತೀಯ ಸೇನೆಯಲ್ಲಿ ಸುಧೀರ್ಘವಾಗಿ …

Read More »

ನೂರಾರು ಮಂದಿ ದೇವಿಯ ಮಂದಿರದ ಮೇಲೆ ಕೋಳಿ ಮರಿಗಳನ್ನು ಎಸೆದು ಹರಕೆ ತೀರಿಸಿದ್ದು ವಿಶೇಷವಾಗಿತ್ತು. ಪ್ರತಿ ವರ್ಷವೂ ಆμÁಢ ಮಾಸದಲ್ಲಿ ಹುಣ್ಣಿಮೆಯ ನಂತರ ಬರುವ ಮಂಗಳವಾರದಂದೇ ಈ ಜಾತ್ರೆ ನಡೆಯುತ್ತದೆ. ವಡಗಾವಿಯ ವಿಷ್ಣು ಗಲ್ಲಿ, ಪಾಟೀಲ ಗಲ್ಲಿ ಮೊದಲಾದ ಕಡೆಗಳಲ್ಲಿ ಮಾರಾಟಕ್ಕಿಟ್ಟಿದ್ದ ಕೋಳಿ ಮರಿಗಳನ್ನು ಖರೀದಿಸಿದ ಭಕ್ತರು, ಅವುಗಳನ್ನು ಮಂದಿರದ ಮೇಲೆ ಎಸೆದು, ಹಾರಿಸಿ ತಮ್ಮ ಭಕ್ತಿ ಸಮರ್ಪಿಸಿದರು. ಚಿಕ್ಕ ಮಕ್ಕಳು ಕೂಡ ಸಣ್ಣ ಕೋಳಿ ಮರಿಗಳನ್ನು ಹಾರಿಸಿದ್ದು ವಿಶೇಷವಾಗಿತ್ತು. ಹರಕೆ ಈಡೇರಿದ ಖುಷಿಯಲ್ಲಿ ಈ ಆಚರಣೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಕೆಲವು ಭಕ್ತರು ಕುರಿ ಬಲಿ ನೀಡುವುದಾಗಿಯೂ ಹರಕೆ ಹೊತ್ತುಕೊಳ್ಳುವುದು ಸಂಪ್ರದಾಯವಾಗಿದೆ.ಇನ್ನು ಬೆಳಿಗ್ಗೆ 10 ಗಂಟೆಗೆ ಮಂಗಾಯಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ 12 ಗಂಟೆಗೆ ದೇವಿಗೆ ಎರಡನೇ ಆರತಿ ಬೆಳಗಿದರು. ಕ್ಷಣ ಕ್ಷಣಕ್ಕೂ ಜಾತ್ರೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆ ಮಾತನಾಡಿದ ಭಕ್ತರು ನಾವು ಬಹಳ ವರ್ಷದಿಂದ ಜಾತ್ರೆ ಬರುತ್ತಿದ್ದೇವೆ. ಕಳೆದ ಮೂರು ವರ್ಷಗಳಿಂದ ಕೊರೊನಾದಿಂದ ಜಾತ್ರೆ ಆಗಿರಲಿಲ್ಲ. ಈ ಬಾರಿ ಬಾಳ ಜೋರ ಜಾತ್ರೆ ನಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬೆಳಗಾವಿಯ ವಡಗಾವಿಯ ಆರಾಧ್ಯದೇವತೆ ಶ್ರೀ ಮಂಗಾಯಿದೇವಿ ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಅದ್ಧೂರಿಯಾಗಿ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನೆರವೇರಲಿದೆ.ಹೌದು ವಡಗಾವಿಯ ಮಂಗಾಯಿದೇವಿ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮೀಣ ಸೊಗಡಿನ ಈ ಜಾತ್ರೆ ಸಾವಿರಾರು ಭಕ್ತರು ತನ್ನ ಆಕರ್ಷಿಸುತ್ತದೆ. ವಡಗಾವಿಯ ಮಂಗಾಯಿ ದೇವಸ್ಥಾನ ಆವರಣ ಭಕ್ತರಿಂದ ಕಿಕ್ಕಿರಿದು ತುಂಬಿ ಹೋಗಿತ್ತು. ಸ್ಥಳೀಯರು, ಗೋವಾ, ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು. ನೂರಾರು …

Read More »

ಹಿರೇಬಾಗೇವಾಡಿ ಆರೋಗ್ಯ ಇಲಾಖೆ ವಸತಿ ಗೃಹಗಳು, ಆತಂಕದ ನಡುವೆ ವಾಸ

ಹಿರೇಬಾಗೇವಾಡಿ: ಜನರ ಆರೋಗ್ಯ ರಕ್ಷಣೆಗೆ ದಿನರಾತ್ರಿ ಶ್ರಮಿಸುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.   ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಗೆ 45 ಗ್ರಾಮಗಳು ಇದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸುಮಾರು 12 ವರ್ಷಗಳ ಹಿಂದೆ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. …

Read More »

ಗಣೇಶೋತ್ಸವದಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಡಿ.ಜೆ ಬಳಕೆ ನಿಷೇಧ

ಬೆಳಗಾವಿ: ‘ಆಗಸ್ಟ್ 31ರಿಂದ ಸೆಪ್ಟೆಂಬರ್ 9 ರವರೆಗೆ ನಗರ ಹಾಗೂ ಜಿಲ್ಲೆಯಲ್ಲಿ ನಡೆಯುವ ಗಣೇಶೋತ್ಸವ ಸಂದರ್ಭದಲ್ಲಿ ಡಿ.ಜೆ ಬಳಕೆ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಾಕೀತು ಮಾಡಿದರು. ಗಣೇಶೋತ್ಸವ ಅಂಗವಾಗಿ ನಗರದಲ್ಲಿ ಸೋಮವಾರ ನಡೆದ ಗಣೇಶೋತ್ಸವ ಮಂಡಳಿಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್‌ ನಿರ್ದೇಶನ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರವೇ ಉತ್ಸವಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದರು.   ‘ಉತ್ಸವದಲ್ಲಿ ಹಿಂದೆ ದೊಡ್ಡ ಶಬ್ದದ …

Read More »

ನಾಪತ್ತೆಯಾಗಿದ್ದ ರಾಯಚೂರು ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆ

ರಾಯಚೂರು: ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಶನಿವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಪಾಲಕರು ಭಾನುವಾರ ಮಹಿಳಾ ಪೊಲೀಸ್‌ ಠಾಣೆಗೆ ನೀಡಿದ್ದ ದೂರು, ಕೊನೆಗೂ ಸೋಮವಾರ ಸುಖಾಂತ್ಯ ಕಂಡಿದೆ. ಹುಬ್ಬಳ್ಳಿಯಲ್ಲಿ ನಾಲ್ವರು ವಿದ್ಯಾರ್ಥಿನಿಯರು ಗೆಳೆಯರೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದ್ದು, ಪೊಲೀಸರು ವಾಪಸ್‌ ಕರೆತರುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದ ವಿದ್ಯಾರ್ಥಿಗಳನ್ನು ರೈಲ್ವೆ ಭದ್ರತಾ ಸಿಬ್ಬಂದಿ ವಿಚಾರಿಸಿ, ಹುಬ್ಬಳ್ಳಿ ಶಹರ ಠಾಣೆಗೆ ಒಪ್ಪಿಸಿದ್ದರು. ಇದೀಗ ಅಲ್ಲಿಂದ ರಾಯಚೂರಿಗೆ …

Read More »

20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ.   ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ …

Read More »

‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು …

Read More »