ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …
Read More »ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ ಬೆಳಗಾವಿ ಸಂಚಾರಿ ಜಾಗೃತ ದಳದ ಸಿಬ್ಬಂದಿ
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿ ಅರಣ್ಯ ಸಂಚಾರಿ ಜಾಗೃತ ದಳದ ತಂಡ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಜ್ಜರಿ, ದೇವರಗುಡ್ಡ, ರಾಣೆಬೆನ್ನೂರಿನ ಮೂವರು ವ್ಯಕ್ತಿಗಳು ಹಾಗೂ ಬ್ಯಾಡಗಿ ತಾಲೂಕಿನ ಬಡಪ್ಪನಹಳ್ಳಿ ಗ್ರಾಮದ ಓರ್ವ ವ್ಯಕ್ತಿ, ಹಾವೇರಿ ತಾಲೂಕಿನ ಬರಡಿ ಗ್ರಾಮದ ಓರ್ವ ವ್ಯಕ್ತಿಯನ್ನು ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಬಂಧಿಸುವಲ್ಲಿ ಬೆಳಗಾವಿಯ ಅರಣ್ಯ …
Read More »ಹರ ಘರ್ ತಿರಂಗಾ ಪೊಸ್ಟರ್ ತ್ರೀ ಚಕ್ರ ವಿತರಣೆ ಬಿಡುಗಡೆಗೊಳಿಸಿದ ಸಚಿವ ಕತ್ತಿ
ವಿಜಯಪುರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ವಿಕಲಚೇತನ ಇಲಾಖೆಯಿಂದ 10 ಜನ ಅಂಗವಿಕಲರಿಗೆ ತ್ರೀ ಚಕ್ರ ಸೈಕಲ್ ವಿತರಣೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಹಾಗೂ ಚೆಕ್ ವಿತರಿಸಲಾಯಿತು. ಹರ್ ಘರ್ ತಿರಂಗಾ ಪ್ರಚಾರದ ಪೋಸ್ಟರ್ …
Read More »ರಾಜಕುಮಾರ ಟಾಕಳೆಗೆ ಶಿಕ್ಷೆಯಾಗುವಂತೆ ಮಾಡುತ್ತೇನೆ-: ನವ್ಯಶ್ರೀ
ನವ್ಯಶ್ರೀ ರಾವ್ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬoಧಿಸಿದoತೆ ನವ್ಯಶ್ರೀ ರಾವ್ ವಿರುದ್ಧ ರಾಜ್ಕುಮಾರ್ ಟಾಕಳೆ ದೂರನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀ ರಾವ್ ಇಂದು ವಿಚಾರಣೆಗೆ ಎಪಿಎಂಸಿ ಠಾಣೆಗೆ ಹಾಜರಾಗಿದ್ದಾರೆ. ಕೆಲ ದಿನಗಳ ಹಿಂದೆ ಕೈ ನಾಯಕಿ ನವ್ಯಶ್ರೀ ರಾವ್ರವರ ಅಶ್ಲೀಲ ವೀಡಿಯೋ ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಇದ್ದ ಫೊಟೊ ವೈರಲ್ ಆಗಿದ್ದವು. ಈ ಕುರಿತಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನವ್ಯಶ್ರೀ ವಿರುದ್ಧ ಜುಲೈ …
Read More »ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ …
Read More »ಆಲಮಟ್ಟಿ ಜಲಾಶಯದಲ್ಲಿ ಅವನಲ್ಲ, ಅವಳು. ಬುರ್ಖಾಧಾರಿಯ ಅಸಲಿಯತ್ತೇನು? ಪೊಲೀಸರು ಹೇಳಿದ್ದೇನು?
ವಿಜಯಪುರ: ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಬುರ್ಖಾಧಾರಿ ವ್ಯಕ್ತಿಯೊಬ್ಬ ಸಂಚರಿಸಿ ಭಾರಿ ಆತಂಕ ಸೃಷ್ಟಿಯಾಗಿತ್ತು. ಆಲಮಟ್ಟಿ ಜಲಾಶಯದ ಸುತ್ತಮುತ್ತ ಅನುಮಾನಾಸ್ಪದವಾಗಿ ತಿರುಗಾಡುತ್ತಾ ಇದ್ದ ಈ ವ್ಯಕ್ತಿ ಬುರ್ಖಾ ಧರಿಸಿದ್ದ ಕಾರಣ ಮೊದಲು ಮಹಿಳೆ ಎಂದು ಅಂದುಕೊಳ್ಳಲಾಗಿತ್ತು. ಕೆಲ ಸಮಯದ ಬಳಿಕ ಆ ಬುರ್ಖಾಧಾರಿ, ಪಕ್ಕದಲ್ಲಿರುವ ಮುಳ್ಳು ಕಂಟಿಗಳ ಕಡೆಗೆ ಹೋಗಿ ವಾಪಸ್ ಬರುವಾಗ ಬುರ್ಖಾ ತೆಗೆದು ಆಚೆ ಬಂದಿದ್ದನ್ನು ಗಮನಿಸಿದ ಪೊಲೀಸರು ಬುರ್ಖಾ ಧರಿಸಿದ್ದು ಮಹಿಳೆ ಅಲ್ಲ. ಪುರುಷ ಎಂಬುದು …
Read More »ಚೈನ ಸ್ನ್ಯಾಚರ ಹಾಗೂ ಬೈಕ ಕಡಿಯುತ್ತಿದ್ದ ಕಳ್ಳರನ್ನು ಹೆಡೆ ಮೂರಿ ಕಟ್ಟಿದ ಗೋಕಾಕ ಪೊಲೀಸರು
ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚೈನ್ ಸ್ಟ್ಯಾಚಿಂಗ ಹಾಗೂ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು ಅವುಗಳ ಪತ್ತೆಗಾಗಿ ಮಾನ್ಯ ಶ್ರೀ ಸಂಜೀವ ಪಾಟೀಲ ಆರಕ್ಷಕ ಅಧೀಕ್ಷಕರು ಬೆಳಗಾವಿ, ಹಾಗೂ ಮಾನ್ಯ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ, ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ …
Read More »ಜುಲೈ 30ರಂದು ಸಿಇಟಿ ಫಲಿತಾಂಶ
ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಜುಲೈ 30ರಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆಯೊಳಗೆ ಅಂಕಗಳನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವಂತೆ ಸೂಚಿಸಿದ್ದಾರೆ. ಜೂನ್ ತಿಂಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸಂಬಂಧಿಸಿ ಪರೀಕ್ಷೆ ನಡೆದಿತ್ತು. ಈ ಬಾರಿ ೧೨ನೇ ತರಗತಿ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು.
Read More »ಮೋದಿ-ಯೋಗಿಗೆ ಕುಟುಂಬವಿಲ್ಲ, ನಮಗಿದೆ: ಕುಟುಂಬ ರಾಜಕಾರಣಕ್ಕೆ ಸಚಿವ ಉಮೇಶ್ ಕತ್ತಿ ಸಮರ್ಥನೆ
ವಿಜಯಪುರ: ಪ್ರಧಾನಿ ಮೋದಿ ಹಾಗೂ ಯೋಗಿಗೆ ಕುಟುಂಬ ಇಲ್ಲ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಕುಟುಂಬ ರಾಜಕಾರಣ ಎನ್ನುವುದು ಇದೆ ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದರು. ಮೋದಿ, ಯೋಗಿ ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದ ಬಂದವರು. ನನ್ನ ತಂದೆ ರಾಜಕಾರಣದಲ್ಲಿ ಇದ್ದರು, ಈಗ ನಾನೂ ಇದ್ದೇನೆ. ಯಡಿಯೂರಪ್ಪ ರಾಜಕಾರಣದಲ್ಲಿದ್ದರು, ಈಗ ಅವರ ಪುತ್ರ …
Read More »HEALTH TIP ಹಲ್ಲಿನ ಸಮಸ್ಯೆಗಳಿಗೆ ಸರಳ ಪರಿಹಾರ ನೀಡುತ್ತೆ ಈ ವಸ್ತುಗಳು
ಹಲ್ಲಿನ ಸಮಸ್ಯೆಗಳಿಗೆ ಮನೆಮದ್ದು: ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಗಳಲ್ಲಿ ಹಲ್ಲುಗಳ ಸಮಸ್ಯೆಯೂ ಒಂದು. ಸಾಮಾನ್ಯವಾಗಿ ಅತಿಯಾದ ಸಿಹಿ ಪದಾರ್ಥಗಳ ಸೇವನೆ, ಚಾಕೊಲೇಟ್ ಸೇವನೆಯಿಂದ ಹಲ್ಲುಗಳಲ್ಲಿ ಹುಳುಕು ಕಂಡು ಬರುತ್ತದೆ ಎಂದು ಹೇಳಲಾಗುತ್ತದೆ. ಕಾರಣ ಏನೇ ಇರಲಿ ಹಲ್ಲಿನ ಸಮಸ್ಯೆಗಳಿಗೆ ಮನೆಯಲ್ಲಿ ಲಭ್ಯವಿರುವ ಕೆಲವು ವಸ್ತುಗಳನ್ನು ಬಳಸಿ ಪರಿಹಾರ ಪಡೆಯಬಹುದು. ಇಂದು ಅಂತಹ ಕೆಲವು ಸಲಹೆಗಳನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಹಲ್ಲಿನ ಸಮಸ್ಯೆಗಳಿಗೆ ಸರಳ ಪರಿಹಾರ ನೀಡುತ್ತೆ …
Read More »