ಫೈನಾನ್ಸ ಬ್ಯಾಂಕನ ಕೀ ಮುರಿದು ಹಣ ದೋಚಿದ ಆರೋಪಿಗಳ ಹೆಡೆಮುರಿ ಕಟ್ಟಿ ನಾಲ್ವರು ಆರೋಪಿಗಳನ್ನು ಚಿಕ್ಕೋಡಿ ಪೋಲಿಸರು ಬಂಧಿಸಿದ್ದಾರೆ. ಚಿಕ್ಕೋಡಿ ಪಟ್ಟಣದ ಫೀನ್ ಕೇರ್ ಸ್ಮಾಲ್ ಫೈನಾನ್ಸ ಬ್ಯಾಂಕಿನ ಕೀಲಿ ಮುರಿದು 6.47,096 ರೂಗಳನ್ನು ದರೋಡೆ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.ಬಂಧಿತರನ್ನು ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ರಮೇಶ ಕುಟ್ನಪ್ಪಾ ನಾಯಿಕ(29),ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮದ ಬಸವರಾಜ ಉಮೇಶ ಕುಂಚನೂರೆ(28),ರಬಕವಿ ತಾಲೂಕಿನ …
Read More »ರಮೇಶ ಜಾರಕಿಹೊಳಿ ಅವರಿಗೆ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ನೀಡಲಾಗಿದೆ ಎಂಬ ಸಂಕೇತವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ನೀಡಿದ್ದಾರೆ.
ರಾಜ್ಯದ ಜನರು ಬಿಜೆಪಿ ಕಡೆ ಒಲವು ತೋರಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ನೀಡಲಾಗಿದೆ ಎಂಬ ಸಂಕೇತವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ನೀಡಿದ್ದಾರೆ. ಭಾನುವಾರದಂದು ಬೆಳಗಾವಿಯ ಸರ್ಕೀಟ್ ಹೌಸ್ನಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಕರ್ನಾಟಕ ಬಿಜೆಪಿಯ ಅತುಲನೀಯ ಶಕ್ತಿಯಾಗಿದ್ದಾರೆ. ಮುಂಬರುವ ಚುನಾವಣೆ ಹಿನ್ನೆಲೆ ಪಕ್ಷದ ಶಕ್ತಿಸಂವರ್ಧನೆಗೆ …
Read More »ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಗೆ ಸ್ವಾಗತಿಸಲಾಯಿತು.: ಅನಿಲ್ ಬೆನಕೆ
ಬೆಳಗಾವಿ, ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ವಿಶೇಷ ಸಂಗತಿಯಾಗಿದೆ ಎಂದರು. ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಬ್ರಿಟೀಷರ ವಿರುದ್ಧ …
Read More »ಬೆಳಗಾವಿಯ ಅಭಿವೃದ್ಧಿಗೆ ಗವಿಮಠಗಲಿ ಧ್ವನಿ- ಸರಜೂ ಕಾಟ್ಕರ್
ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಎಚ್ಬಿ ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಸರಜೂ ಕಾಟ್ಕರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಬಸವರಾಜ್ ಜಗಜಂಪಿ ಅವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸರಜೂ ಕಾಟ್ಕರ್ …
Read More »ಪ್ರತಿ ಟನ್ ಕಬ್ಬಿಗೆ 3500ರೂ ನಿಗದಿ ಮಾಡಿಲ್ಲ ಅಂದ್ರೆ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ
ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡುವ ನಿರ್ಣಯವನ್ನು ಸರಕಾರ ಅ.19 ರಂದು ನಿರ್ಣಯ ತೆಗೆದುಕೊಳ್ಳದಿದ್ದರೇ 21 ರಂದು ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜಾರಿ ಹೇಳಿದರು. ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಕ್ಕರೆ ಆಯುಕ್ತ, ಸಕ್ಕರೆ ಸಚಿವರ ಸಭೆಯಲ್ಲಿ ಸಾಕಷ್ಟು …
Read More »ಧಾರವಾಡ ಜಿಲ್ಲಾ ಆಸ್ಪತ್ರೆ ಬಳಿ ಮಹಿಳೆಯ ಕೊಲೆ.
ಧಾರವಾಡ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾಸ್ಪತ್ರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆ ಬಳಿಯ ಸ್ಪರ್ಶ ಆಸ್ಪತ್ರೆ ಹತ್ತಿರ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಎರಡು ತಲೆ ಹಾವು ಮಾರಾಟ ಯತ್ನ: ಹುಬ್ಬಳ್ಳಿಯಲ್ಲಿ ಮೂವರ ಬಂಧನ
ಹುಬ್ಬಳ್ಳಿ: ಅಕ್ರಮವಾಗಿ ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿ ಅವರಿಂದ ಕಾರು ವಶಪಡಿಸಿಕೊಳ್ಳುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ರಾಯಚೂರು ಮೂಲದವರು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅರಣ್ಯ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ಎರಡು ತಲೆಯ ಹಾವನ್ನು ಮಾರಾಟ ಮಾಡಲು ಆರೋಪಿಗಳು ಆಗಮಿಸಿದ್ದರು. ಇದರ …
Read More »ಧಾರವಾಡ : ಮೆಕ್ಕಾಗೆ ತೆರಳಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು
ಧಾರವಾಡ : ಮೆಕ್ಕಾಗೆ ಉಮ್ರಾಗೆ ಹೋಗಿದ್ದ ಯಾತ್ರಾರ್ಥಿಯೋರ್ವರು ಹೃದಯಾಘಾತದಿಂದ ಸೌದಿಯ ಮೆಕ್ಕಾದಲ್ಲಿ ನಿಧನ ಹೊಂದಿರುವ ಘಟನೆ ನಡೆದಿದೆ. ಮೃತರನ್ನು ಜಿಲ್ಲೆಯ ವರವ ನಾಗಲಾವಿಯ ಸೈಯದ್ ದಾದಾಪೀರ ಪೀರಜಾದೆ (70) ಎಂದು ಗುರುತಿಸಲಾಗಿದೆ. ಕಳೆದ ಅ.9 ರಂದು ಧಾರವಾಡದಿಂದ ಉಮ್ರಾಗಾಗಿ ಪೀರಜಾದೆ ಸೌದಿಗೆ ತೆರಳಿದ್ದರು. ನಾಗಲಾವಿ ಗ್ರಾಮದಲ್ಲಿ ಇರುವ ಶರೀಫ್ ಸಜ್ಜಾದ ದರ್ಗಾದ ಗುರುಗಳು ಆಗಿದ್ದ ದಾದಾಪೀರ ಪೀರಜಾದೆ ಇವರ ಜೊತೆಯಲ್ಲಿ ಕುಟುಂಬದ ಕೆಲ ಸದಸ್ಯರು ಕೂಡಾ ಹೋಗಿದ್ದರು ಎನ್ನಲಾಗಿದೆ. ಪೀರಜಾದೆ ಅವರ …
Read More »ಅಕ್ರಮ ಭೂ ಡಿನೋಟಿಫಿಕೇಶನ್ ಪ್ರಕರಣ: ಬಿಎಸ್ವೈ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ
ಬೆಂಗಳೂರು: ಅಕ್ರಮ ಭೂ ನೋಟಿಫಿಕೇಶನ್ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ| ಯು.ಯು. ಲಲಿತ್ ಹಿಂದೆ ಸರಿದಿದ್ದಾರೆ. ಶುಕ್ರವಾರ ಅರ್ಜಿ ವಿಚಾರಣೆಗೆ ಬಂದೊಡನೆ ಹಿಂದೆ ಸರಿದ ಸಿಜೆಐ, “ದೀಪಾವಳಿ ಹಬ್ಬದ ಬಳಿಕ ಬೇರೊಂದು ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ’ ಎಂದಿದ್ದಾರೆ. 2021ರ ಜ.27ರಂದು ಇದೇ ಪ್ರಕರಣ ಸಂಬಂಧ ಬಿಎಸ್ವೈ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರಿಗೆ …
Read More »ಸಂಪುಟ ವಿಸ್ತರಣೆ; ಸದ್ಯದಲ್ಲಿಯೇ ದೆಹಲಿಗೆ ಭೇಟಿ: ಸಿಎಂ ಬೊಮ್ಮಾಯಿ
ಬೆಳಗಾವಿ: ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು. ಶನಿವಾರ ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು …
Read More »
Laxmi News 24×7