Breaking News

ಬೈಲಹೊಂಗಲದಲ್ಲಿ ರಸ್ತೆ ಸುಧಾರಣೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಬೈಲಹೊಂಗಲ ಪುರಸಭೆಯ ವ್ಯಾಪ್ತಿಯ 27 ವಾರ್ಡ್‍ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಒತ್ತಾಯಿಸಿ ಬೈಲಹೊಂಗಲ ಪಟ್ಟಣದಲ್ಲಿ ಇಂದು ಧಾರವಾಡ ಬೈಪಾಸ್ ರಸ್ತೆ ತಡೆದು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷರಾದ ಶಂಕರ ಮಾಡಲಗಿ ನೇತೃತ್ವದಲ್ಲಿ ರಸ್ತೆ ತಡೆದು ಆಕ್ರೋಶ ಹೊರಹಾಕಲಾಯಿತು. ಬೈಲಹೊಂಗಲ ಪುರಸಭೆಯ 27 ವಾರ್ಡ್ ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಒತ್ತಾಯಿಸಿ ಬೈಲಹೊಂಗಲ ಪಟ್ಟಣದಲ್ಲಿ ಇಂದು ಸೋಮವಾರ ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ …

Read More »

ಮತ್ತೆ ಮುಖಾಮುಖಿ; ಮುನಿರತ್ನ ಕೈಹಿಡಿಯಲು ಬಂದರೆ ಡಿಕೆ ಶಿವಕುಮಾರ್ ಮಾಡಿದ್ದೇನು?

ಬೆಂಗಳೂರು: ಉಪಚುನಾವಣೆ ಸಂದರ್ಭದಲ್ಲಿ ಪರಸ್ಪರ ತೀವ್ರ ವಾಗ್ದಾಳಿ ನಡೆಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಮುನಿರತ್ನ ಸೋಮವಾರ ಮುಖಾಮುಖಿಯಾದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇವರಿಬ್ಬರು ಮುಖಾಮುಖಿಯಾದರು.   ಮುನಿರತ್ನರನ್ನ ನೋಡುತ್ತಿದ್ದಂತೆ ‘ಓ ಏನ್ರೀ..’ ಎಂದು ಡಿ ಕೆ ಶಿವಕುಮಾರ್ ಬೆನ್ನು ತಟ್ಟಿದರು. ಆಗ ಡಿಕೆ ಶಿವಕುಮಾರ್ ಕೈ ಹಿಡಿಯಲು ಮುನಿರತ್ನ ಮುಂದಾದಾಗ ಶಿವಕುಮಾರ್ ನಿರಾಕರಿಸಿದರು.

Read More »

ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಗಳ ಬಗ್ಗೆ ಬಿಜೆಪಿ ಚಿಂತನಾ ಸಭೆಯಲ್ಲಿ ಚರ್ಚೆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ನಡೆಸಲು ನಿರ್ಧರಿಸಿದ್ದಾರೆ. ಜುಲೈ ‌21ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ.   ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ …

Read More »

ರಾಜ್ಯ ಸರ್ಕಾರಿ ನೌಕರರ ಸಂಘದ ‘ಅಧ್ಯಕ್ಷ ಸಿಎಸ್ ಷಡಕ್ಷರಿ’ಗೆ KRS ಪಕ್ಷದ ರಾಜ್ಯಾಧ್ಯಕ್ಷ ‘ರವಿಕೃಷ್ಣಾ ರೆಡ್ಡಿ’ ಬಹಿರಂಗ ಪತ್ರ: ಏನಿದೆ ಗೊತ್ತಾ.?

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಪೋಟೋ, ವೀಡಿಯೋ ಚಿತ್ರೀಕರಣ ನಿಷೇಧ, ಆ ಬಳಿಕ ವಾಪಾಸ್ ನಂತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S. ಷಡಾಕ್ಷರಿ ವಿರುದ್ಧ ಸಿಡಿದೆದ್ದಿದೆ. ಇದೀಗ ಮುಂದುವರೆದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿಯವರು ಸಿಎಸ್ ಷಡಾಕ್ಷರಿಗೆ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ.. ಹೀಗಿದೆ.. ರಾಜ್ಯ ಸರ್ಕಾರಿ ನೌಕರರ ಸಂಘದ …

Read More »

ವರ್ಗಾವಣೆ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಹೈಕೋರ್ಟ್​ ಜಡ್ಜ್​ ವಿರುದ್ಧ ಸುಪ್ರೀಂ ಭಾರಿ ಅಸಮಾಧಾನ: ಎಸಿಬಿ ವಿರುದ್ಧದ ಆದೇಶಗಳಿಗೆ ತಡೆ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿರುದ್ಧ ಕೆಲವು ನಿರ್ದೇಶನಗಳನ್ನು ನೀಡಿದ್ದ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಯೊಬ್ಬರ ಕ್ರಮಕ್ಕೆ ಭಾರಿ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್​, ಎಸಿಬಿ ವಿರುದ್ಧ ನೀಡಲಾಗಿರುವ ಎಲ್ಲಾ ನಿರ್ದೇಶನಗಳಿಗೂ ತಡೆ ನೀಡಿದೆ. ಎಸಿಬಿಯಿಂದ ತನಿಖೆ ಮುಗಿದ ಪ್ರಕರಣಗಳ ಪಟ್ಟಿ ಹಾಗೂ ಅಧಿಕಾರಿಗಳ ಸೇವಾ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್​ ನೀಡಿದ್ದ ಆದೇಶಗಳಿಗೆ ಸುಪ್ರೀಂಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿ ಇವುಗಳಿಗೆ ತಡೆ ನೀಡಿರುವುದಾಗಿ ಹೇಳಿದೆ. ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ …

Read More »

ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ

ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ.   ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …

Read More »

LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್‌ನಲ್ಲಿ ಸೇನಾ ಟ್ರೋಪ್‌ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …

Read More »

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …

Read More »

ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ

ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …

Read More »

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …

Read More »