ಉಡುಪಿ : ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು. ‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ …
Read More »ಸೋನಿಯಾ ಗಾಂಧಿ ರಾಜ್ಯ ಭೇಟಿ: ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಭಾಗಿ
ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ರಾಜ್ಯಕ್ಕೆ ಬರಲಿದ್ದು, ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಗುರುವಾರ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ‘ಸೋಮವಾರ ರಾಜ್ಯಕ್ಕೆ ಬರಲಿರುವ ಸೋನಿಯಾ, ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ತಂಗುವರು. ಗುರುವಾರ ಒಂದು ದಿನ ಮಾತ್ರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು’ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಗುರುವಾರವೇ ಪಾದಯಾತ್ರೆಯನ್ನು ಸೇರಿಕೊಳ್ಳಲಿದ್ದಾರೆ ಎಂದು …
Read More »ಭಾಲ್ಕಿ ಶ್ರೀಗಳಿಗೆ ರಾಷ್ಟ್ರೀಯ ಪ್ರಶಸ್ತಿ
ಗದಗ: ‘ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಸಕ್ತ ಸಾಲಿನಲ್ಲಿ ಬೀದರ್ನ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಪ್ರದಾನ ಮಾಡಲಾಗುವುದು’ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅ.6ರಂದು ಇಲ್ಲಿ ನಡೆಯುವ ಲಿಂ.ಡಾ.ತೋಂಟದ ಸಿದ್ಧಲಿಂಗಸ್ವಾಮೀಜಿಯವರ ನಾಲ್ಕನೇ ಪುಣ್ಯಸ್ಮರಣೆ, ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
Read More »ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನವರಾತ್ರಿ ಮಹೋತ್ಸವ ಅಂಗವಾಗಿ ಸಮೀಪದ ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು. ಹಲವಾರು ಮಹಿಳೆಯರು ಉಡಿ ತುಂಬುವ ಸಂಪ್ರದಾಯದಲ್ಲಿ ಪಾಲ್ಗೊಂಡರು. ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ದೇವಸ್ಥಾನ ಆಡಳಿತ ಮಂಡಳಿ, ಸಕಲ ವ್ಯವಸ್ಥೆ ಕಲ್ಪಿಸಿದರು. ಪರಮೇಶ್ವರಿ ಮೂರ್ತಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಹಿಳೆಯರು ಆರತಿ ತಟ್ಟೆ ಹಿಡಿದು, ಕುಂಕುಮ, …
Read More »ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು
ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್ ಅಂಗವಾಗಿ ಕ್ಯಾಂಪ್ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …
Read More »ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್ನಲ್ಲಿ ನಡೆದಿದೆ. ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ್ ಮನೆಯ ಬಳಿ ಪದೇ ಪದೆ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್ ಎಂಬುವರ ನಡುವೆ ವಾಗ್ವಾದ ನಡೆದಿತ್ತು. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ …
Read More »ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್ ಮಾಡಬೇಕು: ಬಸವಗೌಡ ಪಾಟೀಲ
ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್ಎಸ್ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್ಎಸ್ಎಸ್ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. …
Read More »ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ
ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …
Read More »ಗಾಂಧಿ ಜಯಂತಿಯಂದು 2 ಟನ್ ಗೋಮಾಂಸ ಸಾಗಣೆ: ಐವರು ಆರೋಪಿಗಳ ಬಂಧನ
ಕಾರವಾರ(ಉತ್ತರ ಕನ್ನಡ): ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮೂರು ವಾಹನಗಳ ಸಮೇತ ಬಂಧಿಸಿರುವ ಘಟನೆ ಜೊಯಿಡಾದ ಅನಮೋಡ ಅಬಕಾರಿ ಚೆಕ್ಪೋಸ್ಟ್ನಲ್ಲಿ ಭಾನುವಾರ ನಡೆದಿದೆ. ಹುಬ್ಬಳ್ಳಿಯಿಂದ ಗೋವಾ ಕಡೆಗೆ ಹಸುಗಳನ್ನು ವಧೆ ಮಾಡಿ ಮಾಂಸವನ್ನು ಎರಡು ಮಹೀಂದ್ರ ಬುಲೆರೋ ಪಿಕಪ್ ಹಾಗೂ ಒಂದು ಟಾಟಾ 407 ವಾಹನದಲ್ಲಿ ಗೋವಾಕ್ಕೆ ಸಾಗಿಸುತ್ತಿದ್ದ ಬಗ್ಗೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನಾ ಪನ್ನೇಕರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು. …
Read More »ಗದಗ _ಬೆಟಗೇರಿ ಅವಳಿ ನಗರದಲ್ಲಿ ಹದಗೆಟ್ಟ ರಸ್ತೆ ರಿಪೇರಿ ಮಾಡಿಸಿ.. ಶಾಸಕ ಹೆಚ್ ಕೆ ಪಾಟೀಲ್
ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಗದಗ ಮತಕ್ಷೇತ್ರದ ಶಾಸಕ ಹೆಚ್ ಕೆ ಪಾಟೀಲ್ ಮನವಿ ಮಾಡಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ಸಂಚರಿಸುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ. ಹೀಗಾಗಿ, ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ …
Read More »
Laxmi News 24×7