ಬೆಂಗಳೂರು: ಚುನಾವಣಾ ಆಯೋಗದ ನಿಯಮಾವಳಿಯನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ …
Read More »ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್
ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ. ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ. ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು. “ನನ್ನ ಮಗ ಅಂಥವನಲ್ಲ. …
Read More »ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ರಾತ್ರಿ ಇಲ್ಲಿನ ಹಳೇಹುಬ್ಬಳ್ಳಿ ಸದರಸೋಫಾ ಕಟಗರ ಓಣಿ ಬಳಿಯ ಮುಖಗಲ್ಲಿಯಲ್ಲಿ ನಡೆದಿದೆ. ಮಹಮ್ಮದ್ ಜಾಫರ್ ಇಮ್ತಿಯಾಜ್ ದಢೇಸೂರ (21 ವ) ಕೊಲೆಯಾಗಿದ ವ್ಯಕ್ತಿ. ಹಳೇಹುಬ್ಬಳ್ಳಿ ಕಸಾಯಿ ಮೊಹಲ್ಲಾದ ಶಾಬಾದ ಎಂಬಾತನೇ ಕೊಲೆ ಮಾಡಿದ್ದವನೆಂದು ಮೃತನ ಸಹೋದರ ಖ್ವಾಜಾಮೈನುದ್ದೀನ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಕ್ಷುಲ್ಲಕ ವಿಷಯವಾಗಿ ಇವರಿಬ್ಬರ ನಡುವೆ ಎರಡು ದಿನಗಳ ಹಿಂದೆ ಮಾತಿನ ಚಕಮಕಿ ನಡೆದಿತ್ತು. ಇದೇ …
Read More »ಕಳಸಾ-ಬಂಡೂರಿ ಪ್ರದೇಶಕ್ಕೆ ಗೋವಾ ತಂಡ ಭೇಟಿ
ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ಅಣೆಕಟ್ಟು ಯೋಜನೆ ಪೂರ್ಣಗೊಳಿಸುವ ಮೂಲಕ ಗೋವಾದ ಮಹಾದಾಯಿ ನೀರನ್ನು ತಿರುಗಿಸಲು ಕರ್ನಾಟಕ ಮುಂದಾಗಿದೆ. ಈ ಅಣೆಕಟ್ಟು ನಿರ್ಮಿಸಲು ಹಳತಾರ ಮತ್ತು ಕಳಸಾ ಪ್ರದೇಶಗಳಲ್ಲಿ ಮಣ್ಣು ಪರೀಕ್ಷೆ ಜತೆಗೆ ಉದ್ದೇಶಿತ ಕಾಲುವೆ ಅಗೆಯಲು ಗುರುತು ಹಾಕುವುದು ಬಹುತೇಕ ಪೂರ್ಣಗೊಂಡಿದೆ ಎಂದು ಗೋವಾ ಫಾರ್ವರ್ಡ್ ಶಾಸಕ ವಿಜಯ್ ಸರ್ದೇಸಾಯಿ ಹಾಗೂ ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್ ಹೇಳಿದ್ದಾರೆ. ಅವರು ಶುಕ್ರವಾರ ಕಳಸಾ-ಬಂಡೂರಿ ನಾಲಾ ವ್ಯಾಪ್ತಿಯ ಚೋರ್ಲಾ ಮಹಾದಾಯಿ ಜಲಾನಯನ …
Read More »ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ
ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ …
Read More »ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್: 2 ತಾಸು ನರಳಾಡಿದ ತುಂಬು ಗರ್ಭಿಣಿ
ಕಿತ್ತೂರು : ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ …
Read More »ಒತ್ತಡದ ಮಧ್ಯೆ ಆರೋಗ್ಯ ಕಾಪಾಡಿಕೊಳ್ಳಿ: ರಾಜೇಂದ್ರ ಕಲಘಟಗಿ
ಬೆಳಗಾವಿ: ‘ಪ್ರತಿದಿನವೂ ನಿಯಮಿತ ಹಾಗೂ ಸಮತೋಲನದ ಆಹಾರ ಸೇವನೆ, ಸಮಯಕ್ಕೆ ಸರಿಯಾಗಿ ವಾಯುವಿಹಾರ, ಯಾವುದೇ ಒತ್ತಡ ಪರಿಸ್ಥಿತಿಯಲ್ಲಿಯೂ ಹೊರಗಿನ ಪದಾರ್ಥ ಸೇವಿಸದೇ ಇರುವುದೇ ನನ್ನ ಆರೋಗ್ಯದ ಗುಟ್ಟು. ಪೊಲೀಸ್ ಪಡೆ ಸೇರಿದವರು ಇಂಥ ಜೀವನಶೈಲಿ ರೂಢಿಸಿಕೊಳ್ಳುವುದು ಅಗತ್ಯ’ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಕಿವಿಮಾತು ಹೇಳಿದರು. ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ …
Read More »ಬೆಳಗಾವಿ: ಜನರ ಮನಸೂರೆಗೊಂಡ ಫಲ-ಪುಷ್ಪ ಪ್ರದರ್ಶನ
ಬೆಳಗಾವಿ: ಒಂದೆಡೆ ಕಾಂತಾರ ಚಲನಚಿತ್ರದ ಪರಿಸರ ದೇವತೆ ಪಂಜುರ್ಲಿ, ಇನ್ನೊಂದೆಡೆ ಎತ್ತುಚಕ್ಕಡಿ ಕಟ್ಟಿ ಬಿತ್ತಲು ನಡೆದ ರೈತ, ಮತ್ತೊಂದೆಡೆ ಕೇಶರಾಶಿ ಹರಡಿ ನಿಂತ ಸುಂದರ ಜಲಕನ್ಯೆ, ಎಲ್ಲರನ್ನೂ ಬರಸೆಳೆಯುವ ನೆಚ್ಚಿನ ನಟ ಪುನೀತ್ ರಾಜ್ಕುಮಾರ್… ಇಲ್ಲಿನ ಹ್ಯೂಮ್ ಪಾರ್ಕಿನಲ್ಲಿ ಆಯೋಜಿಸಿದ ಮೂರು ದಿನಗಳ 63ನೇ ಫಲ ಪುಷ್ಪ ಪ್ರದರ್ಶನದಲ್ಲಿ ಕಂಡುಬರುವ ದೃಶ್ಯಗಳಿವೆ. ಶುಕ್ರವಾರವೇ ಆರಂಭವಾದ ಈ ಪ್ರದರ್ಶನ ಪರಿಸರ ಪ್ರೇಮಿಗಳನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ವಿವಿಧ ಶಾಲಾ ಮಕ್ಕಳು, ಯುವಜನರು, ರೈತರು, …
Read More »ನವಿಲುತೀರ್ಥ ಜಲಾಶಯ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಪಟ್ನಾಳ ಗ್ರಾಮದಲ್ಲಿ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮುಳುಗಿಸಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಉರೂಫ್ ತನುಜಾ ಪರಸಪ್ಪ ಗೋಡಿ (32) ಮಕ್ಕಳಾದ ಸುದೀಪ (4) ರಾಧಿಕಾ (3) ಸಾವಿಗೀಡಾದವರು. ಗೃಹಿಣಿ ಗುರುವಾರ ರಾತ್ರಿ ತಮ್ಮ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದರು. ಬಳಿಕ ತಾವೂ ನೀರಿಗೆ ಹಾರಿದರು. ಕುಟುಂಬದವರು ರಾತ್ರಿಯಿಡೀ …
Read More »ಮದ್ಯದ ಅಂಗಡಿಗಳಿಗೆ ಡಿ.ಸಿ ಭೇಟಿ: ಪರಿಶೀಲನೆ
ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎರಡು ಮದ್ಯದ ಅಂಗಡಿಗಳಿಗೆ ತೆರಳಿದರು. ಲೈಸೆನ್ಸ್, ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು. ಡಿ.ಸಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಡೆದ ಮಹಿಳೆಯರು, ಊರ ಮಧ್ಯದಲ್ಲಿರುವ ಎರಡು ಮದ್ಯದಂಗಡಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿದರು. ಆಗ, ಪಾಟೀಲ ಸ್ವತಃ ಅಂಗಡಿಗಳಿಗೆ ಹೋಗಿ ಪರಿಶೀಲಿಸಿದರು. ಸದ್ಯ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದೆ. ಸಮಗ್ರವಾಗಿ …
Read More »
Laxmi News 24×7