ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ
Read More »ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು: BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, ಅವರಿಗೆ ಮೆಚ್ಯೂರಿಟಿ ಇಲ್ಲ ಎಂದು ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ನಾವು 40% ಕಮಿಷನ್ ಆರೋಪ ಮಾಡಿದ ಮೇಲೆ ಬಿಜೆಪಿಯವರು ಈಗ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಹೋಗಿ ಎಷ್ಟು …
Read More »ರೈತರೇ ಗಮನಿಸಿ : ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ : ಪಶುಪಾಲನಾ ಇಲಾಖೆ ಎಚ್ಚರಿಕೆ
ಬೆಳಗಾವಿ : ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಚರ್ಮಗಂಟು ರೋಗದ ಲಕ್ಷಣಗಳು: ಅತಿಯಾದ ಜ್ವರ (೧೦೫-೧೮೦ಈ)ಕಣ್ಣುಗಳಿಂದ …
Read More »ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್ : ಸೆ.29 ಕ್ಕೆ ಮಠದ ಪೀಠತ್ಯಾಗ ಚರ್ಚೆಗೆ ಮಹತ್ವದ ಸಭೆ
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶ್ರೀಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸೆ. 29 ರಂದು ಮುರುಘಾ ಶರಣರ ಪೀಠತ್ಯಾಗದ ಚರ್ಚೆಗೆ ವೀರಶೈವ ಸಮಾಜದ ಮುಖಂಡರು ಸಭೆ ಕರೆಯಲಾಗಿದೆ. ಮುರುಘಾ ಶ್ರೀಗಳು ಪೀಠತ್ಯಾಗ ಮಾಡದೇ ಇರುವುದರಿಂದ ಶ್ರೀಮಠದ ದೈನಂದಿನ ಧಾರ್ಮಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳ ನಿರ್ವಹಣೆ ಸವಾಲು ಎದುರಾಗಿದ್ದು, ಈ ಕುರಿತು ಚರ್ಚಿಸಲು ಸೆ.29 ರಂದು ವೀರಶೈವ ಸಮಾಜದ ಮುಖಂಡರ …
Read More »ಕದ್ದ ಕಾರನ್ನೇ ಮನೆ ಮಾಡಿಕೊಂಡಿದ್ದ ದಂಪತಿ!
ಬೆಂಗಳೂರು: ಬಾಡಿಗೆಗೆ ಕಾರು ಬುಕ್ ಮಾಡಿ ಚಾಲಕನಿಗೆ ಕಂಠಮಟ್ಟ ಮದ್ಯಪಾನ ಮಾಡಿಸಿ ಕಾರಿನೊಂದಿಗೆ ಪರಾರಿಯಾಗಿದ್ದ ದಂಪತಿಯನ್ನು ಯಲಹಂಕ ಉಪನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ನಿವಾಸಿ ಮಂಜುನಾಥ್ (27), ಆತನ ಪತ್ನಿ ವೇದಾವತಿ (25) ಬಂಧಿತರು. ಬಂಧಿತರಿಂದ ಇಟಿಯೋಸ್ ಕಾರು, 2 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ದಂಪತಿ ಕದ್ದ ಕಾರನ್ನೇ ಮನೆಯನ್ನಾಗಿ ಮಾಡಿಕೊಂಡಿದ್ದರು. ಇವರು ಇತ್ತೀಚೆಗೆ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಉಳಿದುಕೊಳ್ಳಲು ಮನೆ ಇರಲಿಲ್ಲ. ಹೀಗಾಗಿ ಕದ್ದ ಕಾರಿನಲ್ಲಿ ನಗರಾದ್ಯಂತ ಸುತ್ತಾಡುತಾ. …
Read More »7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ
ಬೆಳಗಾವಿ: ನಗರದಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾದ 7 ಜನ ಪಿಎಫ್ಐ ಮುಖಂಡರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 110ರ ಅಡಿ ಪ್ರಕರಣ ದಾಖಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಆಜಂ ನಗರದ ನಿವಾಸಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಅಸಾದ್ಖಾನ್ ಸೊಸೈಟಿ ನಿವಾಸಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರದ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಸಾದ್ಖಾನ್ ನಿವಾಸಿ ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ …
Read More »ಮಾತಿಗೆ ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ
ಅಥಣಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀಗಳು ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. …
Read More »ಯುವ ದಸರಾದಲ್ಲಿ ಅಪ್ಪು ನಮನ.. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ರಾಜರತ್ನನ ಪತ್ನಿ ಅಶ್ವಿನಿ
ಮೈಸೂರು: ಮೈಸೂರು ದಸರಾ 2022 ಹಿನ್ನೆಲೆ ನಾಳೆಯಿಂದ ನಡೆಯಲಿರುವ ಯುವ ದಸರಾ ಅಂಗವಾಗಿ ನಾಳೆ ಅಪ್ಪು ನಮನ ಕಾರ್ಯಕ್ರಮ ಅನ್ನು ದಿವಂಗತ ಪುನೀತ್ ರಾಜ್ಕುಮಾರ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಇಂದು ಯುವ ದಸರಾ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಸೆ.28ಕ್ಕೆ (ನಾಳೆ) “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು …
Read More »“ಲಂಚ ಕೊಡಬೇಕಾಗಿಲ್ಲ’ ಬೋರ್ಡ್ ಬದಲು ಸಿಸಿ ಕೆಮರಾ ಅಳವಡಿಸಿ: ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರೇ, “ಸರಕಾರಿ ಕಚೇರಿಗಳಲ್ಲಿ ಲಂಚ ಕೊಡಬೇಕಾಗಿಲ್ಲ’ ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತತ್ಕ್ಷಣ ಕ್ರಮ ಕೈಗೊಳ್ಳಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಯವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್ ಕಮಿಷನ್ ಆರೋಪ ಸಹಿತ ಸಚಿವರ ಮೇಲಿನ …
Read More »ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?
ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ. ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ …
Read More »
Laxmi News 24×7