ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ …
Read More »ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ
ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು …
Read More »ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು
ಬೆಂಗಳೂರು: ಬಿಎಂಟಿಸಿ (BMTC) ನಿಗಮ ಸಾಲದ ಸುಳಿಯಲ್ಲಿ ಸಿಲುಕಿದೆ ಅಂತ ಖುದ್ದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಗೋವಿಂದ್ ರಾಜು (Govida Raju) ಬದಲಾವಣೆ ಯುಬಿ ವೆಂಕಟೇಶ ಬಿಎಂಟಿಸಿ ಸಾಲದ ಬಗ್ಗೆ ಪ್ರಶ್ನೆ ಕೇಳಿದರು. ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಶ್ರೀರಾಮುಲು ಅವರು, 5 ವರ್ಷಗಳಲ್ಲಿ ಬಿಎಂಟಿಸಿ 1,324 ಕೋಟಿ ಸಾಲ ಮಾಡಿದೆ. ಸಾಲವನ್ನು ಬಸ್ ಖರೀದಿ, …
Read More »ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ
ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ …
Read More »ಈ ಬಾಬ್ತು ಬಿಲ್ ಪಾವತಿ ಮಾಡಲು ಕೋರಿದಾಗ, 11 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸ್.ಬಿ.ಲೋಕೇಶ್ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರು. ಸೆ.22 ಗುರುವಾರ 11 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನರಸಿಂಹಮೂರ್ತಿ ಹಣದ ಸಮೇತ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್ಗಳಿಗೆ ಪಾತ್ರೆ ಮತ್ತಿತರೆಪರಿಕರಗಳನ್ನು ಸರಬರಾಜು ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕ ನರಸಿಂಹಮೂರ್ತಿ ಬಂಧಿತ ಆರೋಪಿ.ಸಜ್ಜನಕೆರೆ ಗ್ರಾಮದ ಕಲ್ಲೇಶ್ವರ ಏಜೆನ್ಸಿ ಮಾಲಿಕ ಎಸ್.ಬಿ.ಲೋಕೇಶ್, ಆಗಸ್ಟ್ 2 ರಂದು ಸಮಾಜ ಕಲ್ಯಾಣ ಇಲಾಖೆ …
Read More »ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ; ‘ಲಂಚ ಕೇಸ್’ ಅರ್ಜಿ ವಿಚಾರಣೆಗೆ ಮಧ್ಯಂತರ ತಡೆ
ಹೊಸದಿಲ್ಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚದ ದೂರಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ತನಿಖೆಗೆ ತಡೆ ನೀಡುವಂತೆ ಅವರು ಸಲ್ಲಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ‘ತನಿಖೆಗೆ ಮಧ್ಯಂತರ ತಡೆ’ ನೀಡಿದೆ. ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅಧಿಕಾರಿಗಳು, ಗುತ್ತಿಗೆದಾರರನ್ನು ಆರೋಪಿಗಳನ್ನಾಗಿಸಿ ಸಾಮಾಜಿಕ ಕಾರ್ಯಕರ್ತ …
Read More »ಹೋಟೆಲ್ ನಲ್ಲಿ ಚಟ್ನಿ ವಿಚಾರಕ್ಕೆ ಕಿರಿಕ್;ಪೊಲೀಸರೆದುರು ಬ್ಲೇಡ್ ನಿಂದ ಕುತ್ತಿಗೆ ಕುಯ್ದ ಯುವಕ
ಹುಬ್ಬಳ್ಳಿ: ಹೊಟೇಲ್ ನಲ್ಲಿ ಊಟದ ವಿಷಯವಾಗಿ ಮಾಲಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಓರ್ವನನ್ನು ಠಾಣೆಗೆ ವಿಚಾರಣೆಗೆಂದು ಪೊಲೀಸರ ಬಳಿ ಕರೆದುಕೊಂಡು ಬಂದಾಗ, ಆತ ಕುತ್ತಿಗೆಗೆ ಬ್ಲೇಡ್ ನಿಂದ ಕೊಯ್ದುಕೊಂಡು ಬೆದರಿಕೆ ಹಾಕಲು ಮುಂದಾದ ಘಟನೆ ಇಲ್ಲಿನ ಹಳೇಹುಬ್ಬಳ್ಳಿ ಠಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಇಲ್ಲಿನ ಗಣೇಶಪೇಟೆ ಮೀನು ಮಾರುಕಟ್ಟೆಯ ರಾಘವೇಂದ್ರ ನಾಯಕ ಎಂಬಾತನೆ ಕುತ್ತಿಗೆಗೆ ಬ್ಲೇಡ್ ಇರಿದುಕೊಂಡವ. ಈತನು ಗುರುವಾರ ಇಂಡಿ ಪಂಪ್ ವೃತ್ತ ಬಳಿಯ ಬಿರಿಯಾನಿ ಹೌಸ್ ಅಂಗಡಿಯ …
Read More »ವಿಜಯಪುರದಲ್ಲಿ ಜನಸ್ನೇಹಿ ಪೊಲೀಸ್ ಠಾಣೆ!
ವಿಜಯಪುರ: ಸಾಮಾನ್ಯವಾಗಿ ಪೊಲೀಸ್ ಠಾಣೆ ಅಂದಾಕ್ಷಣ ಕಣ್ಮುಂದೆ ಬರೋದು ಠಾಣೆ ಮುಂದೆ ನಿಂತ ನಾಲ್ಕಾರು ಹಳೆ ವಾಹನಗಳು, ಬಣ್ಣ ಮಾಸಿದ ಗೋಡೆ, ಗಿಡ ಗಂಟಿಗಳು ಬೆಳೆದು ನಿಂತ ಇಕ್ಕಟ್ಟಾದ ಪ್ರದೇಶ. ಇಂತಹ ಠಾಣೆಗಳಿಗೆ ಜನ ಬರುವುದಕ್ಕೂ ಹಿಂದೆ ಮುಂದೆ ನೋಡುವ ಇಂದಿನ ದಿನಗಳಲ್ಲಿ ಜಿಲ್ಲೆಯ ಆದರ್ಶ ನಗರ ಪೊಲೀಸ್ ಠಾಣೆ ಸಾಕಷ್ಟು ಡಿಫರೆಂಟ್ ಆಗಿ ಜನ ಸಾಮಾನ್ಯರನ್ನ ಆಕರ್ಷಿಸುತ್ತಿದೆ. ಮಾತ್ರವಲ್ಲದೇ ಬಂದಂತಹ ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಕುರಿತು ಅಗತ್ಯ ಮಾಹಿತಿ ಒದಗಿಸುವ …
Read More »ಕಾಂಗ್ರೆಸ್, ಜೆಡಿಎಸ್ ಧರಣಿ ನಡುವೆ ನಾಲ್ಕು ವಿಧೇಯಕಗಳ ಅಂಗೀಕಾರ: ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿಧೇಯಕಗಳನ್ನು ಪ್ರತಿಪಕ್ಷಗಳ ಧರಣಿ ನಡುವೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ಮಾಡಲಾಗಿದ್ದು, ಕಲಾಪವನ್ನು ಅನಿರ್ದಿಷ್ಟಾವದಿಗೆ ಮುಂದೂಡಿಕೆ ಮಾಡಲಾಯಿತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59 ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ …
Read More »ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ನೂರಾರು ಕೋಟಿಯ ನಕಲಿ ಬಿಲ್ಲು, ಕಳಪೆ ಕಾಮಗಾರಿ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಇಂದು ಕಾವೇರಿ ಥೀಯಟರ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು. ಪಾಲಿಕೆಯ ವಾರ್ಡ್ಗಳಲ್ಲಿ ನಕಲಿ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳೇ ತಮ್ಮ ಅಸಹಾಯತೆ ವ್ಯಕ್ತಪಡಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ವಿಚಾರಣೆಗೆ ಒಳಪಡಿಸಬೇಕು. …
Read More »
Laxmi News 24×7