Breaking News

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »

ಬಂಡಾಯ ಶಾಸಕರಿಗೆ CRPF ಭದ್ರತೆ; ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ. ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಟೀಂ ಗುವಾಹಟಿ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೀಗ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ 15 ಶಾಸಕರಿಗೆ ಕೇಂದ್ರ ಗೃಹ …

Read More »

ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ: ಅರವಿಂದ ಕೇಜ್ರಿವಾಲ್‌

ನವದೆಹಲಿ: ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಗೆಲುವಿಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್‌ ಹೇಳಿಕೆ ನೀಡಿದ್ದಾರೆ.   ಜನರಿಗೆ ಧನ್ಯವಾದ ಅರ್ಪಿಸಿ ಟ್ವೀಟ್‌ ಮಾಡಿರುವ ಅವರು, ‘ರಾಜಿಂದರ್ ನಗರದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ದೆಹಲಿಯ ಜನರ ಈ ಅಪಾರ ಪ್ರೀತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನಮಗೆ ಹೆಚ್ಚು ಶ್ರಮಿಸಲು ಮತ್ತು ಜನರ …

Read More »

ಹದಗೆಟ್ಟು ಹೋದ ಸರ್ಕಾರಿ ಐಟಿಐ ಕಾಲೇಜು,ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣ

ಇದು ರಾಜ್ಯದಲ್ಲಿಯೇ ಎರಡನೇ ಅತೀದೊಡ್ಡದಾದ ಸರ್ಕಾರಿ ITI ಕಾಲೇಜು. ಆದ್ರೆ ಇಲ್ಲಿ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.  ಹೌದು ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ದುಸ್ಥಿತಿ ಇದು. ಅಂದಹಾಗೇ 1957 ರಲ್ಲಿ ಪ್ರಾರಂಭವಾದ ಈ ಕಾಲೇಜು, ಅಂದಿನಿಂದ ಇಂದಿನವರೆಗೂ ವಿದ್ಯಾರ್ಥಿಗಳಿಗೆ …

Read More »

1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »

ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.

ಎನ್‍ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …

Read More »

ಕಾರಿನ ಮೇಲೆ ಆನೆಗಳ ದಾಳಿ, ಚಾಲಕ ಜಸ್ಟ್ ಮಿಸ್

ಚಾಮರಾಜನಗರ: ಹೆದ್ದಾರಿ ನಡುವೆ ಆನೆಗಳು ಗುಂಪುಗಟ್ಟಿ ಪ್ರಯಾಣಿಕರಿಗೆ ತೊಂದರೆ ಕೊಟ್ಟಿವೆ. ವಾಹನಗಳನ್ನು ಜಖಂ ಗೊಳಿಸಿದ್ದು, ಚಾಲಕನೊಬ್ಬ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗಡಿ ಭಾಗವಾದ ಹಾಸನೂರಿನ ಬಳಿ ಘಟನೆ ನಡೆದಿದ್ದು, ತಮಿಳುನಾಡಿನ ಡಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಆನೆಗಳು ಪುಂಡಾಟ ನಡೆಸಿವೆ. ಮರಿಯಾನೆಯೊಂದಿಗೆ ಹೆದ್ದಾರಿಗೆ ಬಂದಿದ್ದ ಆನೆಗಳು ವಾಹನಗಳನ್ನು ಅಡ್ಡಗಟ್ಟಿವೆ. ಬಳಿಕ ವಾಹನಗಳನ್ನು ಜಖಂ ಗೊಳಿಸಿವೆ. ಆನೆಗಳು ಬರುತ್ತಿದ್ದರೂ ಭಯವಿಲ್ಲದೆ ಕಾರು ಚಾಲಕ ಮುಂದಕ್ಕೆ ಸಾಗುತ್ತಿದ್ದಾಗ ಆನೆ ಅಡ್ಡಗಟ್ಟಿದೆ. ಆನೆ …

Read More »

ಚಿಕ್ಕೋಡಿಯಲ್ಲಿ ಆರಕ್ಷಕರಿಗೇ ಇಲ್ಲ ಸೋರದ ಸೂರು!

ಚಿಕ್ಕೋಡಿ(ಬೆಳಗಾವಿ): ಕಳೆದ ಆರು ವರ್ಷದ ಹಿಂದೆ ಅಲ್ಲಿ ಹೊರ ಠಾಣೆಯಿಂದ ಪೊಲೀಸ್ ಠಾಣೆ ಪ್ರಾರಂಭಿಸಲಾಗಿದೆ. 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ಆ ಠಾಣೆ ಸ್ವಂತ ಕಟ್ಟಡವಿಲ್ಲದೇ ಅಲ್ಲಿರುವ ಪುರಸಭೆಯ ಹಳೆ ಕಟ್ಟಡದಲ್ಲಿದೆ. ಪುರಸಭೆ ಪಕ್ಕದಲ್ಲೆ ಠಾಣೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಒಂದು ಕಡೆಯಾದರೆ ಇನ್ನೊಂದೆಡೆ ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು. ಜನರ ರಕ್ಷಣೆ ಮಾಡಬೇಕಾದ ಪೊಲೀಸರ ಪಾಡು ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ …

Read More »

ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …

Read More »