ಬೆಂಗಳೂರು : ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಗರಸಭೆ ಪುರಸಭೆ , ಪಟ್ಟಣ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿಯ 3673 ನೌಕರರು, …
Read More »ಅಗ್ನಿವೀರರ ನೇಮಕಾತಿ ಪೂರ್ಣ
ಹಾವೇರಿ: ಅಗ್ನಿಪಥ್ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ್ದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43 ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4,200 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸೇನಾ ನೇಮಕಾತಿ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಸತತ ಮಳೆಯ ಕಾರಣ ಸೇನಾ ನೇಮಕಾತಿ ರ್ಯಾಲಿ …
Read More »FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್
ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು. …
Read More »ರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು;
ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಒತ್ತುವರಿ ತೆರವು ಸಮರ್ಪಕವಾಗಿ ಮಾಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಕೆ.ಜೆ. ಜಾರ್ಜ್ ಕಿಡಿಕಾರಿದರು. ಕಾಂಗ್ರೆಸ್ ನಾಯಕರ ಅವಧಿಯಲ್ಲಿಯೇ ಕೆರೆಗಳು ಒತ್ತುವರಿಯಾಗಿವೆ ಎಂದು ಬಿಜೆಪಿ ಸದಸ್ಯರು ಆರೋಪಿಸುತ್ತಿದ್ದಂತೆ ಮತ್ತೆ …
Read More »ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು -ಶಿಷ್ಯರ ಭೇಟಿ
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು ನೋಡುತ್ತಿದ್ದಂತೆ ಕೈಮುಗಿದು ಹೇಗಿದ್ದೀರಿ ಸರ್ ಎಂದು ಆರೋಗ್ಯ ವಿಚಾರಿಸಿದ್ದಾರೆ. ವಿಧಾನಮಂಡಲ ಕಲಾಪ ಮುಗಿದ ನಂತರ ಸಿದ್ದರಾಮಯ್ಯ ಅವರು ಶಾಸಕರಾದ ಜಮೀರ್ ಅಹಮದ್, ಭೈರತಿ ಸುರೇಶ್ ಮೊದಲಾದವರ ಜೊತೆಗೆ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಆರು ವರ್ಷಗಳ ನಂತರ ಸಿದ್ದರಾಮಯ್ಯ, …
Read More »ಹುಬ್ಬಳ್ಳಿ| ಮನೆ ಮನೆಯಲ್ಲೂ ಹಿಟ್ಟಿನ ಗಿರಣಿ…
ಹುಬ್ಬಳ್ಳಿ: ತಿಂಗಳಿಗೆ ಒಮ್ಮೆ ಅಥವಾ ಎರಡು ಬಾರಿ ಗೋಧಿ, ಜೋಳವನ್ನು ಗಿರಣಿಗೆ ಹಾಕಿಸಿಕೊಂಡು ಬರುವುದು ಸಾಕಾಗಿದ್ದರೆ, ನಿಮಗಾಗಿಯೇ ಬಂದಿದೆ ಹೊಸದೊಂದು ಪೋರ್ಟೆಬಲ್ ಗಿರಣಿ. ಇದು ಧಾರವಾಡದ ಕೃಷಿ ಮೇಳದಲ್ಲಿನ ಒಂದು ಆಕರ್ಷಣೆ. ಪ್ರತಿ ಬಾರಿ ಗಿರಣಿಗೆ ಕಾಳು ಒಯ್ದು ಕೊಡುವುದು, ಅಲ್ಲಿ ಕಾಯುವುದು ಇಂಥ ಜಂಜಾಟಗಳಿಂದ ತಪ್ಪಿಸಲು ಮನೆಯಲ್ಲೇ ಎಲ್ಲ ರೀತಿಯ ಕಾಳುಗಳನ್ನು ಹಿಟ್ಟು ಮಾಡಲು ‘ಗ್ರೈಂಡ್ಮಾ’ ಕಂಪನಿಯು ಸಂಪೂರ್ಣ ಸ್ವಯಂ ಚಾಲಿತ ‘ಹೈಟೆಕ್’ ಯಂತ್ರವೊಂದನ್ನು ಪರಿಚಯಿಸಿದೆ. ಇದು ನಿಮ್ಮ …
Read More »ಕೆಎಸ್ಆರ್ಟಿಸಿ ಬಸ್, ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರೂ ಸಾವು..
ಬಾಗಲಕೋಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ಶ್ರೀನಿವಾಸ ಹಂಸನೂರು (32), ಈಶ್ವರ ಮಾಚಕನೂರು (54) ಸಾವಿಗೀಡಾದವರು. ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್ನಲ್ಲಿ ಈ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮುದ್ದೇಬಿಹಾಳದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದು, ಬೈಕ್ ಸವಾರರು ಬಾಗಲಕೋಟೆಯಿಂದ ಸೀಗಿಕೇರಿ ಕಡೆಗೆ ಸಾಗುತ್ತಿದ್ದರು. ಅಪಘಾತದಲ್ಲಿ ಶ್ರೀನಿವಾಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ …
Read More »ಫಾರೆಸ್ಟ್ ರೇಂಜರ್ ಆಫೀಸರ್’ ಗೆ ಹಿಗ್ಗಾಮುಗ್ಗಾ ಹೊಡೆದ ಜನ ಯಾಕೆ ಗೊತ್ತಾ..?
ಬಳ್ಳಾರಿ : ನಕಲಿ ಪೊಲೀಸ್ ಎಂದು ಡೆಪ್ಯೂಟಿ ಫಾರೆಸ್ಟ್ ರೇಂಜರ್ ಆಫೀಸರ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ನಗರದ ವಿಮ್ಸ್ ಆಸ್ಪತ್ರೆ ಸಮೀಪದ ರೇಣುಕಾ ಹೋಟೆಲ್ ಬಳಿ ನಡೆದಿದೆ. ಡೆಪ್ಯೂಟಿ ಫಾರೆಸ್ಟ್ ರೇಂಜರ್ ಕೆಂಚಪ್ಪ ಅವರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದು, ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೋಟೆಲ್ ಹಾಗೂ ಅಂಗಡಿಗಳಲ್ಲಿ ಕೆಂಚಪ್ಪ ಹಣ ವಸೂಲಿ …
Read More »ಡಿಕೆಶಿಗೆ ಶಾಕ್ ಮೇಲೆ ಶಾಕ್! ಇ.ಡಿ ಕಚೇರಿಗೆ ಕಾಲಿಡುತ್ತಲೇ ಸುಪ್ರೀಂನಿಂದ ಮತ್ತೊಂದು ಆದೇಶ
ನವದೆಹಲಿ: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗುತ್ತಿದ್ದಂತೆಯೇ ಅತ್ತ ಕಡೆ ಸುಪ್ರೀಂಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಹಣದ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (ಐಟಿ) ಡಿಕೆಶಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. 2017ರಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಆದಾಯ …
Read More »ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಪ್ರಾಪ್ತ …
Read More »
Laxmi News 24×7