ನವದೆಹಲಿ: ನೀವಿನ್ನೂ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಿಲ್ಲವೇ? ಇನ್ನು ನಿಮಗೆ ಉಳಿದಿರುವುದು ಇವತ್ತೂಂದೇ ದಿನ! 2021-22ರ ಹಣಕಾಸು ವರ್ಷದ ಐಟಿಆರ್ ಫೈಲಿಂಗ್ನ ಜು.31ರ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿರುವ ಕಾರಣ, ರಿಟರ್ನ್ಸ್ ಸಲ್ಲಿಕೆಗೆ ಭಾನುವಾರವೇ ಕಡೇ ದಿನವಾಗಿದೆ. ಒಂದು ವೇಳೆ ಭಾನುವಾರ ನಿಮಗೆ ರಿಟರ್ನ್ಸ್ ಸಲ್ಲಿಕೆ ಸಾಧ್ಯವಾಗದೇ ಇದ್ದರೆ ಏನು ಮಾಡಬೇಕು? ಹೆಚ್ಚುವರಿ ಶುಲ್ಕದೊಂದಿಗೆ ಸಲ್ಲಿಕೆ ಜು.31ರ ಡೆಡ್ಲೈನ್ನೊಳಗೆ ಸಲ್ಲಿಕೆ ಮಾಡಲು ಆಗದವರಿಗೆ ಇದೇ ವರ್ಷದ …
Read More »ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪಿಯುಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂ. …
Read More »ದಿಢೀರ್ ಪ್ರವಾಹ: ಮಳೆಗೆ ಕೊಚ್ಚಿಹೋದ ಮನೆ, ವಾಹನಗಳು; ಏಳು ಸಾವು
ಅಬುಧಾಬಿ: ಈವರೆಗಿನ ನಮ್ಮ ಜೀವಿ ತಾವಧಿಯಲ್ಲಿ ಇಷ್ಟೊಂದು ಅಗಾಧ ಮಳೆ ಯನ್ನು ನೋಡಿರಲೇ ಇಲ್ಲ….. ಇದು ಶಾರ್ಜಾದ ಕಲ್ಬಾ ಎಂಬ ಪ್ರಾಂತ್ಯದ ನಿವಾಸಿಗಳ ಮಾತು. ಯುಎಇ ಸ್ಥಳೀಯ ಕಾಲಮಾನ, ಶುಕ್ರವಾರ ಬೆಳಗಿನ ಜಾವ ಸುಮಾರು 6 ಗಂಟೆಗೆ ಸುರಿದ ಅಗಾಧ ಮಳೆಯಿಂದಾಗಿ, ಅನೇಕ ನಗರಗಳಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟು ಮನೆಗಳಿಗೆ ನೀರು ನುಗ್ಗುವುದು, ರಸ್ತೆಗಳು ಜಖಂ ಆಗಿರುವುದು ಮುಂತಾದ ತೊಂದರೆಗಳಾಗಿವೆ. ಅದರಲ್ಲೂ, ಹಿಂದೆಂದೂ ಕಂಡಿರದ ದಿಢೀರ್ ಪ್ರವಾಹಕ್ಕೆ ಅಬುಧಾಬಿ ತುತ್ತಾ ಗಿದೆ. ಭಾರೀ …
Read More »ರಾತ್ರಿ ನಾಯಿಗಳು ಬೊಗಳುವ ಸದ್ದು ಕೇಳಿ ಮನೆಯಿಂದ ಹೊರಬಂದ ವಿಜಯಪುರ ನಿವಾಸಿಗಳಿಗೆ ಕಾದಿತ್ತು ಶಾಕ್!
ವಿಜಯಪುರ: ಕಾಳರಾತ್ರಿ, ನಿರವ ಮೌನ, ನಾಯಿಗಳ ಬೊಗಳುವಿಕೆಯ ಸದ್ದು, ಗಾಬರಿಗೊಂಡು ಮನೆಯಿಂದ ಹೊರಬಂದ ನಿವಾಸಿಗಳಿಗೆ ಕಂಡಿದ್ದು ದೊಣ್ಣೆ ಹಿಡಿದುಕೊಂಡು, ಮುಸುಕು ಧರಿಸಿ ಹೊರಟಿದ್ದ ದಾಂಡಿಗರ ಪಡೆ….! ಅಬ್ಬಾ ಏನಿದು? ಯಾರು ಈ ಮುಸುಕುಧಾರಿಗಳು? ಎಲ್ಲಿಗೆ ಹೊರಟಿದ್ದಾರೆ? ಎಂದು ಅರಿಯದ ಜನ ಆತಂಕದಿಂದಲೇ ಮನೆಯ ಬಾಗಿಲು, ಕಿಟಕಿ ಹಾಕಿಕೊಂಡು ಬೆಚ್ಚಗೆ ಮಲಗಿಕೊಂಡಿದ್ದಾರೆ. ಆದರೆ, ರಾತ್ರಿ ಪೆಟ್ರೋಲಿಂಗ್ನಲ್ಲಿದ್ದ ಪೊಲೀಸರು ನಾಯಿಗಳ ಜೋರಾದ ಬೊಗಳುವಿಕೆಯ ಸದ್ದು ಕೇಳಿ ಆ ಬಡವಾಣೆಗೆ ಕಾಲಿಟ್ಟರೆ ಇದ್ದಕ್ಕಿದ್ದಂತೆ ಎಲ್ಲರೂ ಮಂಗಮಾಯ. …
Read More »ಸತೀಶ ಜಾರಕಿಹೊಳಿ ಅಭಿಮಾನಿ ಯಮಕನಮರಡಿಯಿಂದ ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಬೈಕ್ ಮೂಲಕ ಪ್ರಯಾಣ
ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಲು ಯಮಕನಮರಡಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮಾನಿ ಓರ್ವ ಬೈಕ್ ಮೂಲಕ ಪ್ರಯಾಣ ಆರಂಭಿಸಿದ್ದಾರೆ. ಹೌದು ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸತೀಶ ಜಾರಕಿಹೊಳಿ ಅವರ ಅಪ್ಪಟ ಅಭಿಮಾನಿ ಆಗಿರುವ ಅರುಣ ರಾವಳ ಯಮಕನಮರಡಿಯಿಂದ ಬೈಕ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾನೆ. ಕಡೋಲಿ ಗ್ರಾ.ಪಂ. ಮುಂದೆ ಆಗಮಿಸಿದ …
Read More »ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧ ಇಸ್ಲಾಮೀಕರಣ ಮಾಡುವ ಹುನ್ನಾರ: ಲಕ್ಷ್ಮಣ ಸವದಿ
ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧವಾಗಿ ಇಸ್ಲಾಮೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಹೀಗಾಗಿ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಂಭೀರ ಆರೋಪ ಮಾಡಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಎಲ್ಸಿ ಲಕ್ಷ್ಮಣ ಸವದಿ ಬಿಜೆಪಿ ಕಾರ್ಯಕರ್ತರ ಕೊಲೆ ಖಂಡನೀಯವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಯಾರೇ ಆಗಲಿ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರ ಸಹಿಸಲ್ಲ ಉಗ್ರ ಕಾನೂನು ತಂದು ಶಿಕ್ಷಿಸಲಾಗುವುದು …
Read More »ಬಿಜೆಪಿ ಕಾರ್ಯಕರ್ತ ಹತ್ಯೆಯಾದ್ರೆ 25 ಲಕ್ಷ: ಬೇರೆ ಧರ್ಮದವರಿಗೆ 1 ರೂಪಾಯಿನೂ ಪರಿಹಾರ ಇಲ್ಲ: ಸತೀಶ ಜಾರಕಿಹೊಳಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಹತ್ಯೆಯಂತಹ ಘಟನೆ ನಡೆಯುತ್ತಿದ್ದರೂ ಗೃಹ ಸಚಿವರೇ ಗಂಭೀರವಾಗಿ ಗಮನಿಸುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಗೋಕಾಕ್ನಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಬಿಜೆಪಿ ಸರ್ಕಾರ ಮುಂಬರುವ ಚುನಾವಣೆ ತಯಾರಿಯಲ್ಲಿದೆ. ಸರ್ಕಾರವನ್ನು ಯಾವ ರೀತಿ ನಡೆಸಬೇಕು ಎನ್ನುವ ಚಿಂತನೆ ಬಿಜೆಪಿ ನಾಯಕರಿಗಿಲ್ಲ. ಹತ್ಯೆ ಪ್ರಕರಣದಲ್ಲಿ …
Read More »ಕೊಟ್ಟ ಮಾತು ಬೊಮ್ಮಾಯಿ ತಪ್ಪಬಾರದು: ಕಾಶಪ್ಪನವರ
ಪಂಚಮಸಾಲಿ ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ಕಳಿಸುತ್ತೇವೆ. ಕೊಟ್ಟ ಮಾತು ತಪ್ಪಿದ ಕಾರಣಕ್ಕೆ ಯಡಿಯೂರಪ್ಪನವರಿಗೆ ನಮ್ಮ ಸಮಾಜದ ಶಾಪ ತಟ್ಟಿದೆ. ಕೊಟ್ಟ ಮಾತನ್ನ ಬಸವರಾಜ ಬೊಮ್ಮಾಯಿ ತಪ್ಪಬಾರದು, ಮಾತು ತಪ್ಪಿದರೆ ನಮ್ಮ ಶಾಪ ನಿಮಗೆ ತಟ್ಟುತ್ತದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿಂದು ಪಂಚಮಸಾಲಿ ಬೃಹತ್ ರ್ಯಾಲಿಗೂ ಮೊದಲು ಸಮಾವೇಶದಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಪಂಚಮಸಾಲಿ ಸಮಯ ದೊಡ್ಡದಿದೆ. ನಾವು ಬಹುಸಂಖ್ಯಾತರು, ಆದ್ರೆ ಇಲ್ಲಿ …
Read More »ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಗೃಹ ಸಚಿವರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಸಿಡಿಮಿಡಿಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕಿಂದು ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ವೈಫಲ್ಯವನ್ನ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ತಮ್ಮ ಕಚೇರಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂತಹ ಘಟನೆ ಒಪ್ಪಿಕೊಳ್ಳುವಂತ ವಿಚಾರ ಅಲ್ಲ. …
Read More »ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ.. ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್ಒ ಪತ್ರ
ಬೆಳಗಾವಿ : ಡಿಹೆಚ್ಒಗೆ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ ಹಿನ್ನೆಲೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿ ಡಿಹೆಚ್ಒ ಡಾ.ಮಹೇಶ್ ಕೋಣಿ ಪತ್ರ ಬರೆದಿದ್ದಾರೆ. ತಮ್ಮದೇನೂ ತಪ್ಪು ಇಲ್ಲದೇ ಇದ್ದರೂ ಜನಪ್ರತಿನಿಧಿಗಳು ತಮಗೆ ಕರೆ ಮಾಡಿ ತರಾಟೆಗೆ ತಗೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್ಒ ಡಾ.ಮಹೇಶ್ ಕೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ …
Read More »
Laxmi News 24×7