Breaking News

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ* *ಮೂಡಲಗಿ-* ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ

ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ್ರೋಹಿಗಳು ಸತ್ತರೆ 20 ಲಕ್ಷ ರೂ. ನೀಡುವ ಕಾಂಗ್ರೆಸ್ ಸರ್ಕಾರ, ಹಿಂದೂಗಳ ಹತ್ಯೆಯಾದರೆ ತಿರುಗಿಯೂ ನೋಡುವುದಿಲ್ಲ ಎಂದು ಆರೋಪಿಸಿದರು. ವಾಲ್ಮೀಕಿ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಏನೂ ಕೊಡುಗೆ ಇಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ …

Read More »

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:*ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಜನವರಿ 17: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ …

Read More »

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ನಡೆದ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿದಂತೆ ಒಟ್ಟು 7 ಜನರ ವಿರುದ್ಧ …

Read More »

ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ

ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ ಬೆಳಗಾವಿ:ಅಕ್ಕ ಪ್ರೀತಿಸುತ್ತಿದ್ದ ಹುಡುಗನನ್ನೇ ಹತ್ಯೆಗೈದ ಅಪ್ರಾಪ್ತ ಬಾಲಕ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ‌ಘಟನೆ. ರಾಜಾಪುರ ಗ್ರಾಮದ ಮಂಜುನಾಥ ಸುಭಾಷ್ ಎಣ್ಣಿ (23) ಕೊಲೆಯಾದವ. ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಸಹೋದರಿಯನ್ನು ಪ್ರೀತಿಸುತ್ತಿದ್ದ ಮಂಜುನಾಥ. ಅಕ್ಕನ ಉಸಾಬರಿಗೆ ಬರಬೇಡ ಎಂದು ಹಲವು ಸಲ ಮಂಜುನಾಥಗೆ ವಾರ್ನ್ ಮಾಡಿದ್ದ ಅಪ್ರಾಪ್ತ ಬಾಲಕ. ಆದರೂ ಅಪ್ರಾಪ್ತ ಅಕ್ಕನ ಜೊತೆಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ …

Read More »

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ ಆವರಣದಲ್ಲಿ ತಡರಾತ್ರಿ ನಡೆದಿದೆ. ಕೊಪ್ಪಳ ಜಿಲ್ಲೆ ಕವಲೂರು ಮೂಲದ ಅಯಾನ್ ಸುಂಕದ (17)ಮೃತಪಟ್ಟ ವಿದ್ಯಾರ್ಥಿ. ಸನಾ ಗ್ರೂಪ್ ಆಫ್ ಇನ್​​ಸ್ಟಿಟ್ಯೂಟ್​​ನ ಸೈನ್ಸ್ ವಿಭಾಗದಲ್ಲಿ ಅಯಾನ್ ಸುಂಕದ ವಿದ್ಯಾಭ್ಯಾಸ ಮಾಡುತ್ತಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡಿಕೊಂಡು ಕಾಲೇಜಿನ ಹಾಸ್ಟೆಲ್​​ನಲ್ಲಿಯೇ ವಾಸವಾಗಿದ್ದ. ಆದರೆ, ತಡರಾತ್ರಿ ಸನಾ ಶಾಹೀನ್ ಕಾಲೇಜಿನ 04ನೇ ಹಂತದ ಟೇರಸ್ ಮೇಲಿಂದ ಕೆಳಗಡೆಗೆ …

Read More »

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಅವರು ಕುಟುಂಬಸ್ಥರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ನಕ್ಸಲ್‌ಮುಕ್ತ ಕರ್ನಾಟಕವೆಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷ ಗತಿಸಿದೆ. ಹೀಗಿದ್ದರೂ ಸರ್ಕಾರಕ್ಕೆ ಶರಣಾದ ಮಾನವಿ ತಾಲೂಕಿನ ಮಾರೆಪ್ಪ ಆರೋಲಿ, ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಕೆ.ವಸಂತ, ಟಿ.ಎನ್.ಜೀಶ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ಮಾರೆಪ್ಪ ಆರೋಲಿ ಅವರ ಪುತ್ರ ಚನ್ನಬಸವ …

Read More »

ಬಾದಾಮಿಗೆ ₹2,000 ಕೋಟಿ ಅನುದಾನ ನೀಡಲಾಗಿದೆ- ಸಿಎಂ

ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳಲ್ಲಿ 2,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಾದಾಮಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೋಮವಾರ ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಚಾಲುಕ್ಯ ಉತ್ಸವ -2026 ಉದ್ಘಾಟಿಸಿ ಸಿಎಂ ಮಾತನಾಡಿದರು. ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು …

Read More »

ರಾಸಲೀಲೆಯ ವಿಡಿಯೋ ವೈರಲ್: IPS ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಸಸ್ಪೆಂಡ್

ಬೆಂಗಳೂರು: ರಾಸಲೀಲೆಯ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ಸಸ್ಪೆಂಡ್ ಮಾಡಿ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ. ಸರ್ಕಾರಿ ಕರ್ತವ್ಯದಲ್ಲಿ, ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿ (ಕೆಎನ್: 1993ರ ಬ್ಯಾಚ್) …

Read More »

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್.

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್. – ಜನವರಿ 24ರಂದು ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.  ನಗರದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ …

Read More »