Breaking News

ಬಾಗಲಕೋಟೆ ಜಿಲ್ಲಾಧಿಕಾರಿಗೆ ಕ್ಲಾಸ್​ ತೆಗೆದುಕೊಂಡ ಮಾಜಿ ಸಿಎಂ

ಬಾಗಲಕೋಟೆ: ಜೂನ್ 21 ರಂದು ಪಟ್ಟದಕಲ್ಲಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕೇಳದೇ ಹೆಸರು ಹಾಕಿದ್ದಕ್ಕೆ ಗರಂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಡಿಸಿ ಸುನೀಲಕುಮಾರ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕರೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಿನಗೆ ಶಿಷ್ಟಾಚಾರ ಅಂದ್ರೆ ಏನು ಎಂಬುದು ಗೊತ್ತಿಲ್ವಾ? ನೀನು ಮೊದಲು ಶಿಷ್ಟಾಚಾರವನ್ನು ಪಾಲಿಸಬೇಕು. ಅವನ್ಯಾರೋ ಸಚಿವ ಬರ್ತಾನೆ ಅಂತಾ ನೀನು ಆಮಂತ್ರಣ ಪತ್ರಿಕೆ ಮಾಡಿ ಕಳುಹಿಸಿಬಿಟ್ಟರೆ …

Read More »

ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ಸರ್ಕಾರ ಆದೇಶ

  ಬೆಂಗಳೂರು : 2022-2023ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶಿಸಿದೆ. ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ 2022-23ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತು ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 …

Read More »

ಹಾವೇರಿ: ವಿಷಕಾರಿ ಹಾವುಗಳಿಂದ ಕೂಲಿ ಕಾರ್ಮಿಕರನ್ನು ರಕ್ಷಿಸುತ್ತಿರುವ ಶ್ವಾನ!

ಹಾವೇರಿ: ಹಾವು-ಮುಂಗುಸಿ ಸೆಣಸು ಸಹಜ. ಇಲ್ಲೊಂದು ಶ್ವಾನ ಹಾವುಗಳೊಂದಿಗೆ ಹೋರಾಡಿ ಕೂಲಿ ಕಾರ್ವಿುಕರನ್ನು ರಕ್ಷಿಸುತ್ತಿದೆ. ಹಾವೇರಿ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ದಯಾನಂದ ಕಲಕೋಟಿ ಎಂಬವರು ಸಾಕಿದ ‘ಸುಹಾನಿ’ ಎಂಬ ಶ್ವಾನ ಇಲ್ಲಿಯವರೆಗೆ 28 ಹಾವುಗಳೊಂದಿಗೆ ಗುದ್ದಾಡಿ ಎಲ್ಲವನ್ನೂ ಕೊಂದು ಹಾಕಿ ಜನರನ್ನು ರಕ್ಷಣೆ ಮಾಡುತ್ತಿದೆ. ದಯಾನಂದ ಕಲಕೋಟಿ 20 ಎಕರೆ ಜಮೀನಿನಲ್ಲಿ ಸಾವಯುವ ಕೃಷಿ ಮಾಡಿಕೊಂಡು ಬಂದಿದ್ದಾರೆ. 7 ಎಕರೆ ಜಮೀನಿಲ್ಲಿ ತಾಳೆ ಮರ ಹಾಕಿದ್ದಾರೆ. ತಾಳೆ ಮರದಲ್ಲಿ ಎಣ್ಣೆಯ ಅಂಶವಿರುವುದರಿಂದ …

Read More »

ಕರುಳ ಕುಡಿಯನ್ನೇ ಸಾಯಿಸಲು ಹೋಗಿದ್ದಾಕೆ ಅರೆಸ್ಟ್​: ಹತ್ಯೆಗೆ ಸ್ಕೆಚ್​ ಹಾಕಿದ್ದೇಕೆ? ಕೊನೆಗೂ ಬಾಯ್ಬಿಟ್ಟ ಮಹಾತಾಯಿ!

ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್​) ಆಸ್ಪತ್ರೆಯಲ್ಲಿ ಕಳೆದ ಸೋಮವಾರ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು. ಇದಕ್ಕೆ ಕಾರಣ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಮತ್ತು ಸಲ್ಮಾ ದಂಪತಿಯ 40 ದಿನದ ಮಗು ಕಾಣೆಯಾಗಿತ್ತು.   ಸಲ್ಮಾ ಚಿಕಿತ್ಸೆಗೆಂದು ಮಗುವನ್ನು ಕರೆದುಕೊಂಡು ಬಂದಿದ್ದರು. ಕೊನೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಏಕಾಏಕಿ ಕಣ್ಮರೆಯಾಗಿತ್ತು. ಮಗು ಇಲ್ಲದಿದ್ದರಿಂದ ಆಸ್ಪತ್ರೆ ಸಿಬ್ಬಂದಿ ದಿಗಿಲುಗೊಂಡಿದ್ದರು. ಕೂಡಲೇ ಸಿಸಿಟಿವಿ ಪರಿಶೀಲಿಸಲಾಗಿತ್ತು. ವಾರ್ಡ್​ನಿಂದಾಗಲಿ, ಕಾರಿಡಾರ್​ನಿಂದಾಗಲಿ ಮಗು …

Read More »

ಮದುವೆಯಾದ ಮೂರೇ ತಿಂಗಳಿಗೆ ಹೆಂಡತಿ ಆತ್ಮಹತ್ಯೆ: ಬಾಮೈದುನರಿಂದಲೆ ಕೊಲೆಯಾದ ನಟ ಸತೀಶ್ಮ

ಸ್ಯಾಂಡಲ್‌ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸತೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದ್ದು, ಸತೀಶ್ ಬಾಮೈದುನರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.   ಕೆಲವೊಂದು ಶಾರ್ಟ್ ಮೂವಿಯಲ್ಲಿ ಕೆಲಸ ಮಾಡಿದ್ದ ಸತೀಶ್ `ಲಗೋರಿ’ ಎಂಬ ಸಿನಿಮಾದಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದರು. ಸತೀಶ್ ವಜ್ರ, ಅವರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ …

Read More »

ದ್ವಿತೀಯ ಪಿಯುಸಿ ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಒಟ್ಟಿಗೇ ಪಾಸ್​;

ಕೊಪ್ಪಳ: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ. ಆದರೆ, ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ.   ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್​ನಲ್ಲಿ …

Read More »

K.L.E..ಕೃಷಿ ವಿಜ್ಞಾನ ಕೇಂದ್ರದಲ್ಲಿ ವಸತಿ ಗೃಹ ನಿರ್ಮಾಣ

ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ರೈತರಿಗೆ ಅನುಕೂಲ ಕಲ್ಪಿಸುವದಕ್ಕೋಸ್ಕರ ಕೆಎಲಇ ಸಂಸ್ಥೆಯು ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದ್ದು, ಈ ಭಾಗದ ಕೃಷಿ ಹಾಗೂ ಸಮಾಜದ ಅಭಿವೃದ್ದಿಯಲ್ಲಿ ಸಂಸ್ಥೆಯ ಯೋಗದಾನ ಬಹಳಷ್ಟಿದೆ . ಡಾ. ಪ್ರಭಾಕರ ಕೋರೆ ಅವರ ಪ್ರಯತ್ನದ ಫಲವಾಗಿ ಇಂದು ದೇಶದಲ್ಲಿಯೇ ಅತ್ಯುತ್ತಮವಾದ ಕೃಷಿ ವಿಜ್ಞಾನ ಕೇಂದ್ರ ಗ್ರಾಮೀಣ ಪ್ರದೇಶದಲ್ಲಿ ತಲೆ ಎತ್ತಿ ನಿಂತಿದೆ ಎಂದು ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ …

Read More »

ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ

ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮರಾಠ ಮಂಡಳ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹ ವಿಜ್ಞಾನ ಮಹಾವಿದ್ಯಾಕಯದ ಎಂಎಸ್ಸಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಎಂಎಸ್ಸಿ ರಸಾಯನ ಶಾಸ್ತ್ರ ವಿಭಾಗದಲ್ಲಿ ಶೇ.79.5ರಷ್ಟು ಅಂಕ ಪಡೆಯುವ ಮೂಲಕ ವಿಶ್ವವಿದ್ಯಾಲಯಕ್ಕೆ ತೃತೀಯ ಸ್ಥಾನ ಪಡೆದಿಕೊಂಡಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಮರಾಠ ಮಂಡಳ …

Read More »

ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸ

ಗೌಂಡವಾಡದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸರ ನಡೆ ಸಧ್ಯ ತೀವ್ರ ಟೀಕೆಗೆ ಗ್ರಾಸವಾಗಿದೆ. ಹೌದು ಮನೆಯಲ್ಲಿ ಮಲಗಿದ್ದ ಮಕ್ಕಳನ್ನ ಅಪರಾಧಿಗಳಂತೆ ಪೊಲೀಸರು ಕರೆದೊಯ್ದಿದ್ದಾರೆ. ಪೆÇಲೀಸರ ವರ್ತನೆಗೆ ಬಂಧಿತ ಮಕ್ಕಳ ತಾಯಿಂದಿರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡುವಂತೆ ತಾಯಂದಿರು ಧರಣಿ ನಡೆಸಿದರು. ಇದೇ ವೇಳೆ ಪೊಲೀಸರ ಎದುರೇ ತಾಯಂದಿರು ಕಣ್ಣೀರಾಕಿದ್ದಾರೆ.ಇನ್ನು ಮಕ್ಕಳು ಎಲ್ಲಿದ್ದಾರೆಂತು ತಿಳಿಯದೇ ಸತೀಶ್ …

Read More »

ನಾಳೆ ಅಗ್ನಿಪಥ್ ಯೋಜನೆ ಪ್ರತಿಭಟನೆಗೆ ಅನುಮತಿ ಇಲ್ಲ:ಡಾ.ಬೋರಲಿಂಗಯ್ಯ

ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್‍ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದ್ದಾರೆ. ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ದೇಶಾಧ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ನಮ್ಮ ಬೆಳಗಾವಿ ಜಿಲ್ಲೆಯಲ್ಲಿಯೂ ಸಾಕಷ್ಟು ಯುವಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆ ನಿಟ್ಟಿನಲ್ಲಿ ನಾಳೆ ಸೋಮವಾರ ಬೆಳಗಾವಿ ಬಂದ್‍ಗೆ ಕೆಲ ಯುವಕರು ಕರೆ …

Read More »