Breaking News

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆ

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆಯಾಗಿದೆ. ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.   ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ …

Read More »

ಹೃದಯಾಘಾತದಿಂದ ಯೋಧ ಸಾವು: ಗೋಕಾಕದ ಮೇಲ್ಮಟ್ಟಿಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ

ಗೋಕಾಕ (ಬೆಳಗಾವಿ ಜಿಲ್ಲೆ): ಹೃದಯಾಘಾತದಿಂದ ಮಂಗಳವಾರ ನಿಧನರಾದ ಯೋಧ ಬಾಳಪ್ಪ ಯಲಿಗಾರ (33) ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಾದ ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿಗೆ ತರಲಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ ಸುತ್ತಮುತ್ತಲಿನ ಗ್ರಾಮಗಳ ಜನ, ಯೋಧನ ಮೃತದೇಹಕ್ಕೆ ಗೌರವಪೂರ್ಣ ಸ್ವಾಗತ ಕೋರಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಹಾಗೂ ಡಿಎಆರ್ ಎಸ್ಪಿ ವೈ.ಕೆ. ಕಾಶಪ್ಪನವರ ಅವರು ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ …

Read More »

ಕರ್ನಾಟಕದಲ್ಲಿ ಕನ್ನಡ ಕಡ್ಡಾಯ: ಶೀಘ್ರವೇ ಕಾನೂನು ಜಾರಿ:: ಸಿಎಂ ಬೊಮ್ಮಾಯಿ

ಕನ್ನಡಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕನ್ನಡವನ್ನು ಕಡ್ಡಾಯಗೊಳಿಸುವ ಕಾಯ್ದೆ ಜಾರಿಗೆ ಬರಲಿದ್ದು, ಈ ಸಂಬಂಧ ವಿಧೇಯಕವು ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಇದರಿಂದ ನಾಡು-ನುಡಿಗೆ ಕಾನೂನು ಬದ್ಧ ಸಂರಕ್ಷಣೆ ಸಿಗುವಂತಾಗುತ್ತದೆ ಎಂದು ಸದನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು. ಬುಧವಾರ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಿಂದಿ ದಿವಸ್ ಹೆಸರಿನಲ್ಲಿ ಆ ಭಾμÉಯನ್ನು ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಇದನ್ನು ಖಂಡಿಸಿ ಕನ್ನಡ …

Read More »

ದಿ.ಉಮೇಶ ಕತ್ತಿ ಮನೆಗೆ ರಾಜ್ಯಪಾಲರ ಭೇಟಿ,

ದಿವಂಗತ ಉಮೇಶ್ ಕತ್ತಿ ಅವರ ಮನೆಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಆಗಮಿಸಿ ಕತ್ತಿಯವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ದಿ.ಉಮೇಶ್ ಕತ್ತಿ ನಿವಾಸಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ದಿ, ಉಮೇಶ ಕತ್ತಿಯವರ ಪತ್ನಿ ಶೀಲಾ ಕತ್ತಿ ಪುತ್ರ ನಿಖೀಲ ಸಹೋದರ ರಮೇಶ ಕತ್ತಿ ಹಾಗೂ ಪುತ್ರರಾದ ಪ್ರಥ್ವಿ, ಪವನ ರವರಿಗೆ ಸಾಂತ್ವನ ಹೇಳಿದರು.ರಾಜ್ಯ ಪಾಲರಿಗೆ …

Read More »

ಕಾಕತಿ ಸಿಪಿಐ ಮೇಲೆ ಈ ವೇಳೆ ಕೆಂಡ ಕಾರಿದ ಹುಲ್ಲಿಯಾನೂರು ಗ್ರಾಮಸ್ಥರು

ಕಳೆದ ಭಾನುವಾರ ವರುದಕ್ಷಣೆ ತರುವಂತೆ ಒತಾಯಿಸಿ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವಿವಾಹಿತೆ ರೇಣುಕಾಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಹುಲ್ಲಿಯಾನೂರು ಗ್ರಾಮಸ್ಥರು ಬುಧವಾರ ಪೆÇಲೀಸ್ ಆಯುಕ್ತರ ಕಚೇರಿ ಮುಂದೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹೌದು ಕಳೆದ ಭಾನುವಾರ ಕಾಕತಿ ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ನವ ವಿವಾಹಿತೆ ರೇಣುಕಾ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಪತಿಯ ಕುಟುಂಬ ಹಾಗೂ ಪ್ರಭಾವಿ ಬಿಜೆಪಿ ಮುಖಂಡರ ಅಣತೆಗೆ …

Read More »

ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆ

ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಹೌದು ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಸಂವಿಧಾನದಲ್ಲಿರುವ ಎಲ್ಲಾ ಭಾಷೆಗಳಿಗೆ ಸಮಾನ ಸ್ಥನಮಾನಗಳನ್ನು ನೀಡಬೇಕು. ಶಿಕ್ಷಣ ಹಾಗೂಐ ಉದ್ಯೋಗಗಳಲ್ಲಿ ಎಲ್ಲಾ ಭಾಷೆಗಳಿಗೆ ಸಮಾನ ಸ್ಥಾನ …

Read More »

ಹಿಂದಿ ದಿವಸ್ ಸದ್ದು ಗದ್ದಲ: ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತಾಡ್ತೀರಾ?: ಸ್ಪೀಕರ್

ಬೆಂಗಳೂರು: ಹಿಂದಿ ದಿವಸ್ ಆಚರಣೆ ವಿಚಾರ ವಿಧಾನಸಭೆಯಲ್ಲೂ ಗದ್ದಲಕ್ಕೆ ಕಾರಣವಾಗಿದ್ದು, ಜೆಡಿಎಸ್ ಶಾಸಕರು ಕನ್ನಡ ಶಾಲು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಡಾ. ಅನ್ನದಾನಿ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಎದ್ದು ನಿಂತ ಜೆಡಿಎಸ್ ಶಾಸಕರು ಕನ್ನಡಕ್ಕೆ ಅನ್ಯಾಯವಾಗುತ್ತಿದೆ ಎಂದು ಏರಿದ ಧ್ವನಿಯಲ್ಲಿ ಮಾತನಾಡಿದರು. ಇದು ಸ್ಪೀಕರ್ ಕಾಗೇರಿ ಅವರನ್ನು ಕೆರಳಿಸಿತು.ಏನಿದು ಜಾತ್ರೆನಾ ? ಸಂತೆನಾ ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಏನಿದು ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದ ಹಾಗೆ ಮಾತನಾಡುತ್ತೀರಿ ಎಂದು ಸ್ಪೀಕರ್ ಕಾಗೇರಿ ಗರಂ …

Read More »

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ‌ ರೂ.ಅವ್ಯವಹಾರ ನಡೆದಿದೆ ಎಂದು ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ವಿಷಯ ಪ್ರಸ್ತಾಪಿಸಿದರು. ಆದರೆ ಸರಕಾರ ಸಮರ್ಪಕ ಉತ್ತರ ನೀಡಿಲ್ಲ ಎಂದು ಶಾಸಕರಾದ ಪ್ರಿಯಾಂಕ ಖರ್ಗೆ ,ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ …

Read More »

ಅತಿವೃಷ್ಟಿ: ಕಟ್ಟೆಚ್ಚರ ವಹಿಸಲು ತಾಕೀತು

ಕಾಗವಾಡ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ಮನೆಗಳು ಬಿದ್ದಲ್ಲಿ ಮತ್ತು ಇನ್ನಿತರೆ ಯಾವುದೇ ಜೀವಹಾನಿ, ಅನಾಹುತಗಳು ಸಂಭವಿಸಿದಲ್ಲಿ 24 ಗಂಟೆ ಒಳಗಾಗಿ ಮೇಲಧಿಕಾರಿಗಳಿಗೆ ವರದಿ ಒಪ್ಪಿಸಬೇಕು ಎಂದು ಚಿಕ್ಕೋಡಿ ಜಿಲ್ಲಾ ನೋಡಲ್ ಅಧಿಕಾರಿ ಎಲ್.ವೈ. ರೂಡಗಿ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ಸಭೆ ಕರೆಯಲಾಗಿದೆ. ನೆರೆ ಹಾವಳಿ ಹಾಗೂ ಅತಿವೃಷ್ಠಿಯಿಂದ ನಿಮ್ಮ ಕ್ಷೇತ್ರಗಳ …

Read More »

ಜಿಲ್ಲೆಯಲ್ಲಿ ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರ: ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಪೂರ್ಣ ಪ್ರಮಾಣ ಮನೆ ಬಿದ್ದವರಿಗೆ 24 ಗಂಟೆ ಒಳಗೆ ಪರಿಹಾರದ ಹಣ ಕೊಡಲಾಗುತ್ತಿದೆ. ರಾಜ್ಯದಲ್ಲೇ ಇದು ಅತ್ಯಂತ ವೇಗವಾಗಿ ನಡೆದ ಕೆಲಸ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.   ವಿಧಾನ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, 2019ರಲ್ಲಿ 46,959 ಮನೆಗಳಿಗೆ ₹ 828.67 ಪರಿಹಾರ ಕೊಟ್ಟಿದ್ದೇವೆ. 2019ರಲ್ಲಿ₹ 120.05 ಕೋಟಿ ಕೊಟ್ಟಿದ್ದೇವೆ. ಇಷ್ಟು ಪ್ರಮಾಣದಲ್ಲಿ ಪರಿಹಾರವನ್ನು 75 ವರ್ಷದಲ್ಲಿ ಯಾರೂ …

Read More »