ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ ಜಾವದವರೆಗೆ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿದೆ. ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕಾಡ್ಲೂರು, ಜೇಗರಕಲ್, ದೇವಸೂಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ …
Read More »ಗೋಕಾಕ ನಲ್ಲಿ L.R.J. ಟ್ರೋಫಿ ಉದ್ಘಾಟನೆ ಸಮಾರಂಭ ನಿರ್ವಹಿಸಿದ ಲಖನ ಜಾರಕಿಹೊಳಿ ಅವರು
ಗೋಕಾಕ : ಗೋಕಾಕ ನಲ್ಲಿ ನಡೆಯುತ್ತಿರುವ L.R.J. ಕ್ರಿಕೆಟ್ ಪಂದ್ಯಾವಳಿ ಉದ್ಧಾಟನೆ ಯನ್ನ ಇವತ್ತು ವಿಧಾನ ಪರಿಷತ್ ಸದಸ್ಯ ರು ಹಾಗೂ ಗೋಕಾಕ ಖ್ಯಾತ ಉದ್ಯಮಿ ಲಖನ ಜಾರಕಿಹೊಳಿ ಅವರು ಮಾಡಿದರು. ಟ್ರೋಫಿ ಉದ್ಘಾಟನೆ ಮಾಡಿದ ಲಖನ ಜಾರಕಿಹೊಳಿ ಅವರಿಗೆ ಗೋಕಾಕ್ ಡಿ ವೈ ಎಸ್ ಪಿ ಮನೋಜ್ ಕುಮಾರ್ ನಾಯ್ಕ್ ಅಂಜುಮನ್ ಕಮಿಟಿ ಅಧ್ಯಕ್ಷರು ಜಾವೇದ ಗೋಕಾಕ್ ಇಲಾಹಿ ಖೈರದಿ ಸದಾನಂದ ಕಲಾಲ್ ಕಿಶೋರ್ ಭಟ್ಟ ದಸ್ಟಗೀರ್ ಶಭಾಷ್ಕಾನ …
Read More »ಮೋದಿಕೊ ಹಟಾವೋ ದೇಶ ಕೊ ಬಚಾವೋ:ಅಂಜಲಿ ನಿಂಬಾಳ್ಕರ್
ಅಗ್ನಪಥ್ ಯೋಜನೆ ಜಾರಿ ವಿರೋಧಿಸಿ ಸೇನಾ ಆಕಾಂಕ್ಷಿಗಳ ಪ್ರತಿಭಟನೆ ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ಖಾನಾಪುರ ಮಲಪ್ರಭಾ ತಾಲೂಕು ಮೈದಾನದಲ್ಲಿ ಜಮಾವನೆಗೊಂಡಿರುವ ಯುವಕರು ಯುವಕರಿಗೆ ಸಾಥ್ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಯುವಕರು ಬಳಿಕ ಕ್ರೀಡಾಂಗಣದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡುವಂತೆ …
Read More »ಫಲಿತಾಂಶಕ್ಕೂ ಮುನ್ನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಸ್ನೇಹಿತರಿಬ್ಬರು ನೀರುಪಾಲು
ಜೂ.18- ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಸ್ನೇಹಿತರಿಬ್ಬರು ನೀರು ಪಾಲಾಗಿರುವ ಘಟನೆ ತಾಲೂಕಿನ ಹೆಗ್ಗಂದೂರಿನಲ್ಲಿ ನಡೆದಿದೆ. ಹೆಗ್ಗಂದೂರಿನ ರಮೇಶ್ರಾವ್ ಎಂಬುವವರ ಪುತ್ರ ಶರತ್ರಾವ್ (17) ಹಾಗೂ ಪುಟ್ಟೇಗೌಡರ ಪುತ್ರ ಶಿವಕುಮಾರ್ (17) ಮೃತಪಟ್ಟ ಸ್ನೇಹಿತರು. ಈ ಇಬ್ಬರು ಹನಗೋಡಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿಯು ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿದ್ದರು. ಕಾಮಗೌಡನಹಳ್ಳಿ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಆಯತಪ್ಪಿ ನದಿಗೆ …
Read More »ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೇ ಸ್ಥಾನ
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, …
Read More »ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು
ದೇಶದಲ್ಲಿ ಯುವ ಹಾಗೂ ಸಮರ್ಥ ಸೇನಾ ಶಕ್ತಿಯನ್ನು ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಸೇನಾ ಮುಖ್ಯಸ್ಥರು ಮಾಡಿದ ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು ಮುಂದಾಗುತ್ತಿರುವುದು ವಿಷಾದನೀಯ ಎಂದು ರಾಜ್ಯ ಬಿಜೆಪಿ ವಕ್ತಾರ ಎಂಬಿ ಜಿರಲಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಎಂಬಿ ಜಿರಲಿ, ವಿಶ್ವದ ಅತ್ಯಂತ ಶಕ್ತಿಶಾಲಿ ಸೇನಾ ಹೊಸ ವ್ಯವಸ್ಥೆಯನ್ನು ದೇಶದ ರಕ್ಷಣಾ ಮಂತ್ರಿಗಳಾದ ರಾಜನಾಥ್ಸಿಂಗ್ …
Read More »ಅಗ್ನಿಪಥ್ ಯೋಜನೆ ಜಾರಿಗೆ ವಿರೋಧಿಸಿ ಗೋಕಾಕ್ನಲ್ಲಿಯುವಕರ ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರದ ಸೇನಾ ನೇಮಕಾತಿಯ ಹೊಸ ನಿಯಮ ಅಗ್ನಿಪಥ್ ಯೋಜನೆ ಜಾರಿಗೆ ವಿರೋಧಿಸಿ ದೇಶಾಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಗೋಕಾಕ್ನಲ್ಲಿಯೂ ಕೂಡ ನೂರಾರು ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. ಹೌದು ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಅಗ್ನಿಪಥ್ ಯೋಜನೆ ಯುವ ಸಮೂಹದ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿ ಗೋಕಾಕ್ನ ಬಸವೇಶ್ವರ ವೃತ್ತದಲ್ಲಿ ದೇಶಪ್ರೇಮಿ ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ …
Read More »ವರ್ಷಾಂತ್ಯಕ್ಕೆ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ: ಹೈಕೋರ್ಟ್ಗೆ ಸರ್ಕಾರ
ಬೆಂಗಳೂರು: ಈ ವರ್ಷದ ಡಿಸೆಂಬರ್ ವೇಳೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಸಂಬಂಧ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರ್ಕಾರ …
Read More »ರಾಯಚೂರು: ನೀರಿನಲ್ಲಿ ಮಿತಿಮೀರಿದ ರಾಡಿಯಿಂದ ವಾಂತಿಭೇದಿ?
ರಾಯಚೂರು: ನಗರದಲ್ಲಿ ಪೂರೈಕೆಯಾಗುವ ಕುಡಿಯುವ ನೀರಿನಲ್ಲಿ ‘ರಾಡಿ’ ಮತ್ತು ಆಮ್ಲದ ಪ್ರಮಾಣ (ಪಿಎಚ್) ಮಿತಿಮೀರಿದ ಪ್ರಮಾಣದಲ್ಲಿ ಇರುವುದು ಪತ್ತೆಯಾಗಿದೆ. ಕಲಷಿತ ನೀರು ಕುಡಿದು ಜನರು ವಾಂತಿ-ಭೇದಿಯಿಂದ ಬಳಲುತ್ತಿರುವುದು ಮತ್ತು ಕೆಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೀರಿನ ಪರೀಕ್ಷೆ ಮಾಡಿಸಿದೆ. ರಾಂಪುರ ಜಲ ಶುದ್ಧೀಕರಣ ಘಟಕದಿಂದ ಶುದ್ಧೀಕರಿಸಿದ ನೀರನ್ನು ಕಳೆದ ಮೇ 30ರಂದು ಪರೀಕ್ಷಿಸಿದಾಗ ರಾಡಿ ಪ್ರಮಾಣ 14 ಮತ್ತು ಪಿಎಚ್ ಪ್ರಮಾಣ 8.8ರಷ್ಟು ಪತ್ತೆ …
Read More »ಮಳೆ ನೀರು ತೆರವು: ದರ್ಶನಕ್ಕೆ ಅವಕಾಶ
(ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದೊಳಕ್ಕೆ ನುಗ್ಗಿದ್ದ ಮಳೆ ನೀರನ್ನು ಹೊರಹಾಕಿ ಶುಚಿಗೊಳಿಸಲಾಗಿದ್ದು ಶುಕ್ರವಾರ ಭಕ್ತರು ಎಂದಿನಂತೆ ದೇವಿಯ ದರ್ಶನ ಪಡೆದರು. ಗುರುವಾರ ಸಂಜೆ ಸುರಿದ ಧಾರಾ ಕಾರ ಮಳೆಯಿಂದಾಗಿ ಸುತ್ತಲಿನ ಗುಡ್ಡದ ಪ್ರದೇಶದಿಂದ ಅಪಾರ ಪ್ರಮಾಣದ ನೀರು ಹರಿದುಬಂದಿತ್ತು. ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ನೀರು ದೇವಸ್ಥಾನದ ಪ್ರಾಂಗಣಕ್ಕೆ ನುಗ್ಗಿತ್ತು. ಇದರಿಂದ ಭಕ್ತರು ಪರದಾಡಿದ್ದರು. ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಚರಂಡಿ ಸ್ವಚ್ಛಗೊಳಿಸಿ, ನೀರು ಹರಿದು ಹೋಗಲು ಅನುವು ಮಾಡಿದರು. ನಸುಕಿನಿಂದಲೇ …
Read More »