ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಹಳ್ಳ ಸತತ ಮಳೆಯಿಂದ ತುಂಬಿ ಹರಿಯುತ್ತಿದೆ.ಸಂಗಮನಾಥನ ಹಳ್ಳ ಮಳೆ ನೀರಿಗೆ ಮೈದುಂಬಿ ಹರಿಯುತ್ತಿದೆ. ಭಕ್ತರಿಗೆ ಸಂಗಮನಾಥನ ದರ್ಶನ ಕಷ್ಟವಾಗ್ತಿದೆ. ತಾಳಿಕೋಟೆ ಪಟ್ಟಣಕ್ಕಿದ್ದ ಪರ್ಯಾಯ ಮಾರ್ಗವೂ ಬಂದ್ ಆಗಿದೆ. ಕಾಮಗಾರಿ ನಡೆದು ತಿಂಗಳಲ್ಲೇ ತಾಳಿಕೋಟಿ-ಮೂಕಿಹಾಳ ಸಂಪರ್ಕಿಸುವ ಸೋಗಲಿ ಹಳ್ಳದ ಸೇತುವೆ ಕಳಚಿ ಬೀಳ್ತಿದೆ. ಮೂಕಿಹಾಳ, ಹಡಗಿನಾಳ,ಕಲ್ಲದೇವನಹಳ್ಳಿ, ಶಿವಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಡೋಣಿ ನದಿಗೆ ಅಡ್ಡವಾಗಿ ಕಟ್ಟಲಾಗಿದ್ದ ಪ್ರಮುಖ ಸೇತುವೆ …
Read More »ಸಾಗುವಳಿ ಹಕ್ಕು ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ
ಜಮೀನಿಗೆ ಸಾಗುವಳಿ ಹಕ್ಕು ನೀಡುವಂತೆ ಆಗ್ರಹಿಸಿ ಚನ್ನಮ್ಮನ ಕಿತ್ತೂರು ತಾಲೂಕಿನ ಒಂಬತ್ತು ಗ್ರಾಮಗಳ ರೈತರು “ಬೆಳಗಾವಿ ಚಲೋ” ಹೆಸರಿನಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ಹಕ್ಕು ಪತ್ರ ನೀಡದಿದ್ರೆ ದನ, ಕರು, ಹೆಂಡತಿ ಮಕ್ಕಳನ್ನು ಕಟ್ಟಿಕೊಂಡು ಡಿಸಿ ಕಚೇರಿ ಮುಂದೆ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದರು, ಗುರುವಾರ ಕಿತ್ತೂರಿನಲ್ಲಿರುವ ರಾಣಿ ಚನ್ನಮ್ಮಾಜಿ ವೃತ್ತದ ಮುಂಭಾಗದಲ್ಲಿ ಕೆಲಕಾಲ ಧರಣಿ ನಡೆಸಿದ ರೈತರು ಹಾಗೂ ರೈತ ಮುಖಂಡರು ರಾಜ್ಯ …
Read More »ಕನ್ನಡ ಹಿರಿಯ ನಟಿ ಲೀಲಾವತಿ’ಗೆ ಅನಾರೋಗ್ಯ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ, ಆರೋಗ್ಯ ವಿಚಾರಣೆ
ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ( Actress Leelavathi ) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ. ಈ ವಿಷಯ …
Read More »ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ
ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು. ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್ ವಿತರಿಸಿ, ಮಾತನಾಡಿದ ಅವರು, ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …
Read More »ಮಹಾಲಕ್ಷ್ಮೀಗೆ ರವೀಂದರ್ ನೀಡಿರುವ ದುಬಾರಿ ಉಡುಗೊರೆಗಳ ಬಗ್ಗೆ ತಿಳಿದ್ರೆ ಹುಬ್ಬೇರಿಸ್ತೀರಾ! ಇಲ್ಲಿದೆ ಮಾಹಿತಿ.
ಚೆನ್ನೈ: ಧಾರಾವಾಹಿ ನಟಿ ವಿ.ಜೆ. ಮಹಾಲಕ್ಷ್ಮೀ ಮತ್ತು ತಮಿಳು ನಿರ್ಮಾಪಕ ರವೀಂದರ್ ತಮ್ಮ ಪ್ರೇಮ ವಿವಾಹದಿಂದಲೇ ಇತ್ತೀಚೆಗೆ ಭಾರಿ ಸುದ್ದಿಯಾದರು. ಅಲ್ಲದೆ, ಕಳೆದ ದಿನಗಳಿಂದ ಈ ಜೋಡಿ ಟ್ರೆಂಡಿಂಗ್ನಲ್ಲಿದೆ. ಅದಕ್ಕೆ ಕಾರಣ ನಟಿ ಮತ್ತು ನಿರ್ಮಾಪಕ ನಡುವಿನ ವ್ಯತ್ಯಾಸ. ಅದೇನೆಂದರೆ, ಮಹಾಲಕ್ಷ್ಮೀ ಸೌಂದರ್ಯವತಿಯಾಗಿದ್ದು, ಆಕೆ ಮದುವೆ ಆಗಿರುವ ರವೀಂದರ್ ದಡೂತಿ ಮನುಷ್ಯ. ಹೀಗಾಗಿ ಇಬ್ಬರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಿಕ್ಕಾಪಟ್ಟೆ ಟ್ರೋಲ್ ಸಹ ಆಯಿತು. ಮಹಾಲಕ್ಷ್ಮೀ ಮತ್ತು …
Read More »ಹುಬ್ಬಳ್ಳಿಯಲ್ಲಿ ತೇವಾಂಶ:ಆರಂಭವಾಗದ ಭಾರತ-ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ಪಂದ್ಯ
ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಗುರುವಾರ ಭಾರತ ‘ಎ’ ಹಾಗೂ ನ್ಯೂಜಿಲೆಂಡ್ ‘ಎ’ ತಂಡಗಳ ನಡುವಣ ನಾಲ್ಕು ದಿನಗಳ ‘ಟೆಸ್ಟ್’ ಕ್ರಿಕೆಟ್ ಪಂದ್ಯವು ಮಧ್ಯಾಹ 12 ಗಂಟೆಯಾದರೂ ಆರಂಭಗೊಂಡಿಲ್ಲ. ಬೆಳಿಗ್ಗೆ 9.30ಕ್ಕೆ ಆರಂಭವಾಗಬೇಕಿದ್ದ ಪಂದ್ಯವನ್ನು ಮೈದಾನದಲ್ಲಿ ತೇವಾಂಶ ಹೆಚ್ಚಿದ್ದ ಕಾರಣ 10.30ಕ್ಕೆ ಆರಂಭಿಸುವುದಾಗಿ ಅಂಪೈರ್ಗಳು ಹಾಗೂ ಪಂದ್ಯದ ರೆಫರಿ ಪ್ರಕಟಿಸಿದರು. ಆದರೆ, ಬೆಳಿಗ್ಗೆ 10.30ರ ವೇಳೆಗೆ ಮತ್ತೆ ಕ್ರೀಡಾಂಗಣ ಪರಿಶೀಲಿಸಿದ ಅವರು, ಮಧ್ಯಾಹ್ನದ ಬಳಿಕ ಪಂದ್ಯ ನಡೆಯಲಿದೆ ಎಂದು …
Read More »ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …
Read More »ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ
ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ. ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. …
Read More »ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಕತ್ತರಿಯಿಂದ ಚುಚ್ಚಿ, ಬಳಿಕ ಭಯಗೊಂಡು ಕಿಡಕಿಯಿಂದ ಹಾರಿದ ವ್ಯಕ್ತಿ.
ಬೆಂಗಳೂರು: ಸ್ನೇಹಿತನಿಗೆ ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ನಂತರ ಹೆದರಿಕೆಯಿಂದ ಎರಡನೇ ಮಹಡಿಯ ಬಾಲ್ಕನಿಯ ಕಿಟಕಿಯಿಂದ ಹಾರಿ ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ. ನಾಗಾಲ್ಯಾಂಡ್ ಮೂಲದ ಹೇಕಾ ಹಲ್ಲೆಗೊಳಗಾದ ಯುವಕ. ಅವರ ರೂಮ್ ಮೇಟ್ ಆಗಿರುವ ರೋಹಿತ್ ಹಲ್ಲೆ ನಡೆಸಿ ಬಳಿಕ ಭಯದಿಂದ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರೋಹಿತ್ ಹಾಗೂ ಹೇಕಾ ಸೇರಿದಂತೆ ಐವರು ಸ್ನೇಹಿತರು ಒಂದೇ ಅಪಾರ್ಟ್ಮೆಂಟ್ನಲ್ಲಿ …
Read More »ಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿದ ಕೆಎಸ್ಸಾರ್ಟಿಸಿ ಕಂಡಕ್ಟರ್!- ವಿಡಿಯೋ
ಸುಳ್ಯ(ದಕ್ಷಿಣ ಕನ್ನಡ): ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ. ಈಶ್ವರಮಂಗಲ ಪೇಟೆಯ ಜಂಕ್ಷನ್ನಲ್ಲಿ ಘಟನೆ ನಡೆದಿದೆ. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಕೆಎ 21 ಎಫ್ 0002 ಬಸ್ ನಂಬರ್ನ ನಿರ್ವಾಹಕ ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಈ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದಾನೆ. ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು …
Read More »
Laxmi News 24×7