Breaking News

ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್: ಸಿದ್ದರಾಮಯ್ಯ

ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್ ಇನ್ನು ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ನಿಂದನೆ ಆರೋಪಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಮಾತನಾಡಿದ್ದು, ಅರವಿಂದ ಲಿಂಬಾವಳಿ ಜನಪ್ರತಿನಿಧಿ ಆಗಲು ನಾಲಾಯಕ್. ಮಹಿಳೆ ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ಕೈಗೊಳ್ಳಿ. ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ಯೋದಾ?ಆಯಮ್ಮನಿಗೆ ರೇಪ್​ ಮಾಡಿದ್ದೀವಾ ಎಂದರೆ ಏನು ಅರ್ಥ? ತಾಳ್ಮೆಯಿಂದ ಮಹಿಳೆಯ ಕಷ್ಟ-ಸುಖ ಕೇಳಬೇಕು ಅಲ್ಲವೇ? ಲಿಂಬಾವಳಿ ಶಾಸಕರಾಗಲಿ ಲಾಯಕ್ಕಾ, ನಾಲಾಯಕ್ಕಾ ಹೇಳಿ? ಎಂದು ಹಾಸನ ಜಿಲ್ಲೆ ಗೊಲ್ಲರಹೊಸಳ್ಳಿಯಲ್ಲಿ …

Read More »

ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಟಾಂಗ್

ಹಾಸನ: ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷ್ಯ ನೀಡಲಿ ಎಂಬ ಬಿಜೆಪಿ ನಾಯಕರ(BJP Leaders) ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಲಂಚ ಕೊಟ್ಟಿದ್ದಕ್ಕೆ ಯಾರಾದರೂ ರಶೀದಿ ಕೊಡ್ತಾರೇನ್ರಿ? ಎಂದು ಟಾಂಗ್ ಕೊಟ್ಟಿದ್ದಾರೆ. ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ಮಾಡಲಿ ಸತ್ಯ ಗೊತ್ತಾಗುತ್ತೆ. ನ್ಯಾಯಾಂಗ ತನಿಖೆಯಾದ್ರೆ ದಾಖಲೆ ಕೊಡುವುದಾಗಿ ಕೆಂಪಣ್ಣ ಹೇಳಿದ್ದಾರೆ. ಆರೋಪ ಸಾಬೀತಾಗದಿದ್ದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದಿದ್ದಾರೆ. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಬಗ್ಗೆ ಭಯ ಯಾಕೆ? …

Read More »

ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು

ಇನ್ನೂ 5 ದಿನಗಳ ಕಾಲ ಮಳೆರಾಯನ ಕೆಂಗಣ್ಣಿಗೆ ಗುರಿಯಾಗಲಿದೆ ಬೆಂಗಳೂರು ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ದಿನಗಳ ಕಾಲ ಜನರು ಸದ್ಯದ ಪರಿಸ್ಥಿತಿಯನ್ನು ಸಹಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ರೈಲ್ವೇ ಅಲರ್ಟ್ ಆಗಿರುವ ಹಿನ್ನೆಲೆಯಲ್ಲಿ ಅನಾಹುತಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಹ ಪೀಡಿತ ಜನರಿಗೆ ಸ್ಪಂದಿಸಲು …

Read More »

ಮಳೆಯಿಂದ ಕಪಿಲೇಶ್ವರ ಹೊಂಡಕ್ಕೆ ಸೇರಿದ ಗಲೀಜು ನೀರು

ಬೆಳಗಾವಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಪಿಲೇಶ್ವರ ಹೊಂಡಕ್ಕೆ ರಸ್ತೆಯ ಮೇಲೆ ಹರಿಯುತ್ತಿದ್ದ ನೀರು ನುಗ್ಗಿದ್ದು ಗಣೇಶ ವಿಸರ್ಜನೆಗೆ ತೊಂದರೆಯಾಗುತ್ತಿದೆ. ಮಳೆ ನೀರಿನೊಂದಿಗೆ ಡ್ರೆöÊನೇಜ್ ನೀರು ಹೊಂಡದೊಳಕ್ಕೆ ನುಗ್ಗಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಿ ಶುದ್ಧ ನೀರನ್ನು ಹೊಂಡಕ್ಕೆ ತುಂಬಿಸಿದ್ದಾರೆ. ಬೆಳಗಾವಿಯಲ್ಲಿ ಸೆಪ್ಟೆಂಬರ್ ೯ರಂದು ಗಣೇಶ ವಿಸರ್ಜನೆ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ. ಆದರೆ ನಗರದ ಕಪಿಲೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಪಿಲೇಶ್ವರ ಹೊಂಡದಲ್ಲಿಯೇ ಸಾಂಪ್ರದಾಯಿಕ ಗಣೇಶ ವಿಸರ್ಜನೆಯನ್ನು ನೆರವೇರಿಸಲಾಗುತ್ತಿದೆ. ಆದರೆ ನಿನ್ನೆ …

Read More »

ರಾಜಹಂಸಗಡದಲ್ಲಿ ಬೋಟಿಂಗ್ ಸ್ಪರ್ಧೆ

ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಉತ್ಸಾಹಿ ಯುವಕರು ಭಾಗಿಯಾಗಿದ್ದರು. ಈ ಬೋಟ್ ಕಾಂಪಿಟೇಶನ್‌ನಲ್ಲಿ ಯುವತಿಯರು ಭಾಗಿಯಾಗಿದ್ದು ವಿಶೇಷವಾಗಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ೭೦ ವರ್ಷದ ಪರಶುರಾಮ್ ಹಲಗೇಕರ್, ಹಾಗೂ ನರ್ಮದಾ ಕಡೋಲ್ಕರ್ ಭಾಗಿಯಾಗಿದ್ದು …

Read More »

ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿ: ಬಾಗೇವಾಡಿ

ಬೆಳಗಾವಿ: ಒಂದು ದೇಶದ ಪ್ರಗತಿ ಅಲ್ಲಿಯ ಶಿಕ್ಷಣದ ಗುಣಮಟ್ಟದ ಮೇಲೆ ನಿಂತಿದೆ. ಗುಣಮಟ್ಟದ ಶಿಕ್ಷಣ ಸಾಕಾರಗೊಳ್ಳಲು ಅಲ್ಲಿಯ ಶಿಕ್ಷಕರ ವೃತ್ತಿಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಮುಖೇನ ಅವರಿಗೆ ವೃತ್ತಿ ಸ್ವಾತಂತ್ರ್ಯ ನೀಡಿದರೆ ಭಾರತದ ಉಜ್ವಲ ಭವಿಷ್ಯ ಬರೆಯಬಲ್ಲ ಮಕ್ಕಳನ್ನು ತಯಾರು ಮಾಡಬಲ್ಲ ಸಾಮರ್ಥ್ಯ ಶಿಕ್ಷಕರಿಗಿದೆ ಎಂದು ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಶಂಕರ ಬಾಗೇವಾಡಿ ಅಭಿಪ್ರಾಯ ಪಟ್ಟರು.   ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ …

Read More »

ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ.   ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …

Read More »

ಮಣ್ಣಲ್ಲಿ ಮಣ್ಣಾದ ಉಮೇಶ್ ಕತ್ತಿ

ಬೆಲ್ಲದ ಬಾಗೇವಾಡಿ (ಬೆಳಗಾವಿ): ಆಹಾರ ಮತ್ತು ಅರಣ್ಯ ಸಚಿವ ಉಮೇಶ ವಿಶ್ವನಾಥ ಕತ್ತಿ (61) ಅವರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಅಂತಿಮ ಯಾತ್ರೆ ನಡೆಸಿ ವೀರಶೈವ ಲಿಂಗಾ ಯತ ಸಮುದಾಯದ ವಿಧಿ ವಿಧಾನದಂತೆ ಬುಧವಾರ ರಾತ್ರಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.   ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ  ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು …

Read More »

ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಐ.ಟಿ.ದಾಳಿ

ಹೊಸದಿಲ್ಲಿ: ದೇಣಿಗೆ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ನಡೆಸಿದೆ. ದಿಲ್ಲಿ, ಗುಜರಾತ್‌, ಉ.ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ‌, ಹರಿಯಾಣ ಸೇರಿ ಹಲವು ರಾಜ್ಯಗಳ ಕನಿಷ್ಠ 110 ಸ್ಥಳಗಳಲ್ಲಿ ಏಕಕಾಲ ದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು.   ಆರ್‌ಯುಪಿಪಿಯಲ್ಲಿರುವ ಕನಿಷ್ಠ 198 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಇತ್ತೀಚಿಗೆ ಭಾರತೀಯ ಚುನಾವಣ …

Read More »

ಕಿಕ್‌ಬ್ಯಾಕ್‌ ಆರೋಪ: ಬಿಎಸ್‌ವೈ ವಿರುದ್ಧದ ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕೋಟ್ಯಂತರ ರೂಪಾಯಿ “ಕಿಕ್‌ಬ್ಯಾಕ್‌’ ಪಡೆದುಕೊಂಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರು ಹಾಗೂ ಕೆಲ ಆಪ್ತರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ಸಹಿತ ಅವರ ಕುಟುಂಬಸ್ಥರು ರಾಮಲಿಂಗಂ ಕನ್‌ಸ್ಟ್ರಕ್ಷನ್‌ …

Read More »