Breaking News

ವಾಯವ್ಯ ಶಿಕ್ಷಕರ ಕ್ಷೇತ್ರ:‌ ಕಾಂಗ್ರೆಸ್‌ಗೆ ಬಂಡಾಯ, ಬಿಜೆಪಿಗೆ ಒಳ ಏಟಿನ ಭೀತಿ

ಬಾಗಲಕೋಟೆ: ಪಕ್ಷ ಸಂಘಟನೆ, ಹೆಚ್ಚಿನ ಸಂಖ್ಯೆಯಲ್ಲಿರುವ ಶಾಸಕರ ಬಲ (33ರಲ್ಲಿ 22) ನೆಚ್ಚಿಕೊಂಡು ಬಿಜೆಪಿಯು ಮೂರನೇ ಬಾರಿಗೆ ಅರುಣ ಶಹಾಪುರ ಅವರನ್ನು ಕಣಕ್ಕಿಳಿಸಿದೆ. ಆದರೆ, ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಅವರಿಗೆ ಮಗ್ಗಲು ಮುಳ್ಳಾಗಿದೆ. ಬಿಜೆಪಿಯಲ್ಲಿನ ಮುಸುಕಿನ ಗುದ್ದಾಟದ ಲಾಭ ಪಡೆಯಲು ಕಾಂಗ್ರೆಸ್‌ ಅನುಭವಿ ರಾಜಕಾರಣಿ ಪ್ರಕಾಶ ಹುಕ್ಕೇರಿ ಅವರನ್ನು ಕಣಕ್ಕಿಳಿಸಿದೆ. ಆದರೆ, ಬಂಡಾಯ ಅವರ ಓಟಕ್ಕೆ ಬ್ರೇಕ್‌ ಹಾಕುತ್ತಿದೆ. 12 ವರ್ಷಗಳ ಕಾಲ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದು, ಕೇಂದ್ರ ಹಾಗೂ …

Read More »

2022-23ನೇ ಸಾಲಿನ ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

ಬೆಂಗಳೂರು: ಬೆಂಗಳೂರು ಪ್ರೆಸ್‌ ಕ್ಲಬ್‌ನ 2022-23ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್‌. ಶ್ರೀಧರ್‌ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ವಿವರ ಮತ್ತು ಪಡೆದ ಮತಗಳು: ಆರ್‌. ಶ್ರೀಧರ್‌ (ಅಧ್ಯಕ್ಷ, 302 ಮತಗಳು), ಆನಂದ್‌ ಪಿ. ಬೈದನಮನೆ (ಉಪಾಧ್ಯಕ್ಷ , 327 ಮತಗಳು), ಬಿ.ಪಿ. ಮಲ್ಲಪ್ಪ (ಪ್ರಧಾನ ಕಾರ್ಯದರ್ಶಿ, 340 ಮತಗಳು), ದೊಡ್ಡಬೊಮ್ಮಯ್ಯ (ಕಾರ್ಯದರ್ಶಿ, 176), ಮಹಾಂತೇಶ್‌ ಎಸ್‌. ಹಿರೇಮಠ (ಜಂಟಿ ಕಾರ್ಯದರ್ಶಿ, 275 ಮತಗಳು), ಮೋಹನ್ …

Read More »

ಸೋನಿಯಾ ರಾಹುಲ್, ಡಿ.ಕೆ ಶಿವಕುಮಾರ್ ರನ್ನು ಕಿತ್ತುಹಾಕಬೇಕು ಎಂದ : ಸಿಎಂ ಇಬ್ರಾಹಿಂ

ಬೆಂಗಳೂರು: 2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇವತ್ತಿನ ಮುಹೂರ್ತ ಬರೆದಿಟ್ಟುಕೊಳ್ಳಿ.. ಬಿಜೆಪಿಯವರಿಗೆ ಜೆಡಿಎಸ್ ನಂಬರ್ 1 ಆಗಿ ಬರತ್ತೆ ಎನ್ನೋದು ಗೊತ್ತಾಗಿದೆ. ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗೋದು ಗೊತ್ತಾಗಿದೆ. ನಮ್ಮವರು 10 ಜನ ಜೆಡಿಎಸ್ ಗೆ ಬರ್ತಾರೆ ಎಂದು ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಇಬ್ರಾಹಿಂ ತಿರುಗೇಟು ನೀಡಿದರು. …

Read More »

ಯುವಕನ ಜತೆ ಟೀಚರ್ ಕಾಮದಾಟಕ್ಕೆ ಬಲಿಯಾದ ಗಂಡ! ವಿಜಯಪುರದ ಕೊಲೆ ರಹಸ್ಯ ಭೇದಿಸಿದ ಪೊಲೀಸರು

ವಿಜಯಪುರ: ವಿಜಯಪುರದಲ್ಲಿ ಇದೇ 8ರಂದು ನಡೆದಿದ್ದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಏಕ್ತಾ ನಗರ ನಿವಾಸಿ ಪ್ರಕಾಶ ಹಳ್ಳಿ(40)ಮನೆಯಲ್ಲೇ ಕೊಲೆಯಾಗಿತ್ತು. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ, ಅಂಗನವಾಡಿ ಟೀಚರ್​ ರಾಜೇಶ್ವರಿ ಹೊಸಮನಿ ಗೋಳೋ ಎಂದು ಅತ್ತಿದ್ದಳು. ಆದರೆ ಇದು ಸಹಜ ಸಾವಲ್ಲ, ಬದಲಿಗೆ ಪತ್ನಿಯೇ ಕೊಲೆ ಮಾಡಿರುವುದು ಎಂದು ತಿಳಿದುಬಂದಿದೆ. 30 ವರ್ಷದ ರಾಜೇಶ್ವರಿ ಅಂಗನವಾಡಿಯಲ್ಲಿ ಟೀಚರ್​ ಆಗಿದ್ದಾಳೆ. ಈಕೆ 24 ವರ್ಷದ ರವಿ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರ …

Read More »

ಇಂದು ವಿಧಾನ ಪರಿಷತ್‌ನ 4 ಸ್ಥಾನಗಳಿಗೆ ಚುನಾವಣೆ :

ಇಂದು ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಶನಿವಾರ ಸಂಝೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಇಂದು ಮತದಾನದ ನಡೆಯಲಿದೆ.   ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಜೂನ್ 15 ರ ಬುಧವಾರ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ …

Read More »

ವೀಕೆಂಡ್ ಡ್ರಗ್ಸ್ ಪಾರ್ಟಿ ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ …

Read More »

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬ ಆಚರಣೆ

ಬೆಳಗಾವಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ವತಿಯಿಂದ ಸೇಂಟ್ ಆಂಥೋನಿ ಹಬ್ಬವನ್ನು ಆಚರಣೆ ಮಾಡಲಾಯಿತು. ಬೆಳಗಾವಿಯ ಕ್ಯಾಂಪ್‌ನ ಸೇಂಟ್ ಆಂಥೋನಿ ಚರ್ಚನಲ್ಲಿ ಸೇಂಟ್ ಆಂಥೋನಿ ಫೀಸ್ಟ್ ನಿಮಿತ್ಯ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇಂದು ರವಿವಾರ ಸಾಯಂಕಾಲ ಚರ್ಚ್ದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡಲಾಗಿತ್ತು. ನಂತರ ಚರ್ಚ್ ಪ್ರಾಂಗಣದಿಂದ ಖಾನಾಪುರ್ ರಸ್ತೆ ಕ್ಯಾಂಪ್ ಮುಖಾಂತರ ಕ್ಯಾಂಪ್‌ನ ಅನೇಕ ರಸ್ತೆಗಳಲ್ಲಿ ಸೇಂಟ್ ಆಂಥೋನಿ ಪ್ರತಿಮೆಯೊಂದಿಗೆ ಸಂಚಾರ ಮಾಡಿದರು. ಈ ವೇಳೆ ಅನೇಕ ಕ್ರಿಶ್ಚಿಯನ್ ಸಮಾಜ …

Read More »

ಬೆಳಗಾವಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

4 ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು. ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದು. ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 4 ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ನಾಲ್ಕೂ ಬೈಕ್‍ಗಳು ಬೆಂಕಿಯ ಕೆನ್ನಾಲೆಯಲ್ಲಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಅದೇ ರೀತಿ ಎಪಿಎಂಸಿ ಠಾಣೆ ಪೊಲೀಸರು ಕೂಡ …

Read More »

ಸೋಲಿನ ಹತಾಶೆಯಲ್ಲಿ ಹಣ ಹಂಚುವ ಕೆಲಸ ಮಾಡ್ತಿದ್ದಾರೆ ಹುಕ್ಕೇರಿ: ಅರುಣ ಶಾಹಪುರ ಗಂಭೀರ ಆರೋಪ

ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಸೋಲಿನ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಸೋಲಿನ ಹತಾಶೆಯಲ್ಲಿ ಹಣ ಹಂಚುವ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಅರುಣ ಶಾಹಪುರ ಗಂಭೀರ ಆರೋಪ ಮಾಡಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಹಾರಾಷ್ಟ್ರ ಪಾಸಿಂಗ್ ಇರುವ ಕಾರಿನಲ್ಲಿ ಹತ್ತು ಸಾವಿರದಂತೆ ಪ್ಯಾಕೇಟ್‍ನಲ್ಲಿ ಹಣವಿಟ್ಟು ಹಂಚಲಾಗುತ್ತಿತ್ತು. ಇದೊಂದೆ ವಾಹನ ಅಲ್ಲದೆ ಇನ್ನೂ ಹದಿನಾಲ್ಕು ಕಾರುಗಳು ಹೀಗೆ ಓಡಾಡುತ್ತಿವೆ. …

Read More »

ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆ

ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಚುನಾವಣೆಯ ಮತದಾರರಿಗೆ ಹಣ ಹಂಚಲು ಹೊರಟಿದ್ದ ವಾಹನ ವಿಜಯಪುರ ನಗರದ ಗೋದಾವರಿ ಬಾರ್ ಬಳಿ ಚುನಾವಣೆ ಅಧಿಕಾರಿಗಳಿಗೆ ಸಿಕ್ಕಿದೆ. ವಾಹನದಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವಾಗ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಹಣ ಹಂಚಿಕೆದಾರರು ಸಿಕ್ಕಿ ಬಿದ್ದಿದ್ದಾರೆ. ಒಟ್ಟು 1.70 ಲಕ್ಷ ರೂ.ಪತ್ತೆಯಾಗಿದ್ದು, ಒಂದೊಂದು ಪಾಕಿಟ್ ನಲ್ಲೂ10 ಸಾವಿರ ರೂ.ಸಿಕ್ಕಿದೆ. ಸೋಮವಾರ ನಡೆಯಲಿರುವ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾರರಿಗೆ ಹಂಚಲು …

Read More »