Breaking News

ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್‌ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು …

Read More »

ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ಹಣ ಹಂಚಿಕೆ

ಮಂಡ್ಯ: ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾರರನ್ನು ಓಲೈಸಿಕೊಳ್ಳೋದಕ್ಕಾಗಿ, ಅಭ್ಯರ್ಥಿಗಳು ಹಣ, ಹೆಂಡದ ಹೊಳೆಯನ್ನೇ ಹರಿಸುತ್ತಿರೋದಾಗಿ ತಿಳಿದು ಬಂದಿದೆ. ಮಂಡ್ಯದಲ್ಲಿ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಮತದಾರರಿಗೆ 2000 ಸಾವಿರ ರೂ ಹಂಚಿಕೆ ಮಾಡಿರೋದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಚುನಾವಣೆಯ ಮತದಾರರಿಗೆ ರೂ.2000 ಹಣವನ್ನು ಕವರ್ ನಲ್ಲಿ ಇರಿಸಿ, ಮತದಾರರಿಗೆ ಹಂಚಿದಂತ ವೀಡಿಯೋ, ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ …

Read More »

ಪೋಷಕರ ವಿರೋಧದ ಮಧ್ಯೆ ಮದುವೆಯಾದ ನವಜೋಡಿ: ಕಣ್ಣೀರಿಡುತ್ತಾ ಅಪ್ಪನಿಗೆ ಮನವಿ ಮಾಡ್ತಿರುವ ಮಗಳು

ಬಳ್ಳಾರಿ : ಒಂದೇ ಕಾಲೇಜು, ಒಂದೇ ತರಗತಿ, ನಿತ್ಯ ಜೊತೆಗೆ ಓಡಾಟ ಹೀಗಾಗಿ ಈ ಇಬ್ಬರ ಮಧ್ಯೆ ಗೊತ್ತಿಲ್ಲದಯೇ ಪ್ರೀತಿ ಶುರುವಾ ಗಿತ್ತು. ಮೂರು ವರ್ಷಗಳ ಕಾಲ ಪರಸ್ಥರ ಪ್ರೀತಿಸಿದ ಆ ಜೋಡಿ ಪೋಷಕರ ವಿರೋಧದ ಮಧ್ಯೆ ಮನೆ ಬಿಟ್ಟು ಬಂದು ಸಪ್ತಪದಿ ತುಳಿದಿದ್ದಾರೆ. ಆದ್ರೇ ಯುವತಿಯ ಪೋಷಕರ ಭಯದಿಂದ ಇದೀಗ ಆ ಜೋಡಿ ರಕ್ಷಣೆಗಾಗಿ ಪೊಲೀಸ್‌ ಠಾಣೆ ಹಾಗೂ ನ್ಯಾಯಾಲಯದ ಮೇಟ್ಟಿಲೇರಿದ್ದಾರೆ. ಪ್ರತಿ ಸ್ಟೋರಿಯಲ್ಲಿದ್ದಂತೆ ಇಲ್ಲಿಯೂ ಕೂಡ ಯುವತಿಯ ಪೋಷಕರೇ ವಿಲನ್‌ಗಳಾಗಿದ್ದು, …

Read More »

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಸಂವಿಧಾನ ಜಾರಿ ತರುವ ಮೂಲಕ ಮಹಿಳೆಯರ ಪ್ರಗತಿಗಾಗಿ ಅನೇಕ ಕಾನೂನುಗಳನ್ನು ತಂದರು: ಸತೀಶ್‌ ಜಾರಕಿಹೊಳಿ

ಬಸವಣ್ಣನವರ ಕ್ರಾಂತಿಯಿಂದ 12ನೇ ಶತಮಾನದಲ್ಲೇ ಮಹಿಳೆಯರ ಜೀವನದಲ್ಲಿ ಕೆಲ ಬದಲಾವಣೆಗಳಾದವು, ನಂತರ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಸಂವಿಧಾನ ಜಾರಿ ತರುವ ಮೂಲಕ ಮಹಿಳೆಯರ ಪ್ರಗತಿಗಾಗಿ ಅನೇಕ ಕಾನೂನುಗಳನ್ನು ತಂದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಪಾಚ್ಛಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಹಾದೇವಿ ಮೆಮೋರಿಯಲ್‌ ನೂತನ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ಭಾರತ ದೇಶದಲ್ಲಿ ಎಲ್ಲಾ ರಂಗಗಳಲ್ಲಿಯೂ …

Read More »

ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ

ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಚಿಕ್ಕೋಡಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಕಛೇರಿ ಬೋರ್ಡ್‍ಗೆ ಬಟ್ಟೆ ಕಟ್ಟಿ ಬೋರ್ಡ್ ಮುಚ್ಚಿ ಪಾರ್ಟಿ ಆಯೋಜನೆ ಮಾಡಲಾಗಿದೆ. ನೂರಾರು ಶಿಕ್ಷಕರನ್ನ ಕಛೇರಿಗೆ ಕರೆಸಿ ಪ್ರಕಾಶ ಹುಕ್ಕೇರಿ ಎಣ್ಣೆ ಪಾರ್ಟಿ ಕೊಡುವ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ.   ತಾಲೂಕಾಡಳಿತ …

Read More »

ಬೆಳಗಾವಿಯಲ್ಲಿ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ1944ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ

ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ಬೆಳಗಾವಿಯ ವತಿಯಿಮದ ಪ್ರತಿವರ್ಷದಂತೆ ಈ ಬಾರಿಯೂ ಜ್ಯೇಷ್ಠ ಶುದ್ಧ ತ್ರಯೋದಶಿ ಶಕೆ ೧೯೪೪ ಹಿಂದೂ ತಿಥಿಯನುಸಾರ ಶಿವರಾಜ್ಯಾಭಿಷೇಕ ಮಾಡಲಾಯಿತು. ಪ್ರೇರಣಾ ಮಂತ್ರದೊಂದಿಗೆ ಶಿವಾಜಿ ಮಹಾರಾಜರ ಮೂರ್ತಿಗೆ ವಿಧಿವತ್ತ ಕ್ಷೀರಾಭಿಷೇಕ, ಜಲಾಭಿಷೇಕ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಶಿರೀಷ್ ಗೋಗಟೆ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನನ ಜಿಲ್ಲಾ ಪ್ರಮುಖ ಕಿರಣ ಗಾವಡೆ ಅವರು ಶಿವಾಜೀ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಮಹಾಆರತಿ ನಡೆಯಿತು. ನಂತರ …

Read More »

ನಾಯಿ ಮರಿಗೆ ‘ಚಾರ್ಲಿ’ ಎಂದು ನಾಮಕರಣ ಮಾಡಿದ ಪೊಲೀಸ್ ಇಲಾಖೆ

ಮಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ ಚಲನಚಿತ್ರ ಶುಕ್ರವಾರ ಬಿಡುಗಡೆಗೊಂಡಿದ್ದು ಮನುಷ್ಯ ಮತ್ತು ಶ್ವಾನ ನಡುವಿನ ಭಾವನಾತ್ಮಕ ಸಂಬಂಧವನ್ನು ಕಥೆಯಲ್ಲಿ ಚಿತ್ರಿಸಲಾಗಿದೆ. ಇದರಿಂದ ಸ್ಫೂರ್ತಿಗೊಂಡು ಮಂಗಳೂರು ಪೊಲೀಸ್ ಶ್ವಾನದಳದ ನಾಯಿ ಮರಿಗೂ ಚಾರ್ಲಿ ಎಂಬ ಹೆಸರಿಡಲಾಗಿದೆ.   ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಶ್ವಾನಕ್ಕೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಳೆದ ಮಾರ್ಚ್ ನಲ್ಲಿ ಹುಟ್ಟಿದ ಲ್ಯಾಬ್ರಡಾರ್ ರಿಟ್ರಿವರ್ ಶ್ವಾನವನ್ನು ಮಂಗಳೂರು ಪೊಲೀಸ್ ಇಲಾಖೆ ಖರೀದಿಸಿತ್ತು ,ಮುಂದಿನ ಸುಮಾರು …

Read More »

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

ಬೆಳಗಾವಿ: ‘ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ. ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ‘ಕೋರೆ ಅವರು ನಮ್ಮ ಹಿರಿಯರು, ಮಾರ್ಗದರ್ಶಕ. ಅವರ ಕೊಡುಗೆಯನ್ನು ಪಕ್ಷವೂ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ. ಸುದೀರ್ಘ …

Read More »

₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕುಂದಾನಗರಿಯಲ್ಲಿ ಹೈಟೆಕ್‌ ಸರ್ಕಾರಿ ಶಾಲೆ

ಬೆಳಗಾವಿ: ಇಲ್ಲಿ ಎರಡು ಕಂಪ್ಯೂಟರ್‌ ಲ್ಯಾಬ್‌ಗಳಿವೆ. ಮಕ್ಕಳಲ್ಲಿ ಬೆರಗು ಮೂಡಿಸುವಂತಹ ಇ-ಲೈಬ್ರರಿಯಿದೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಭವ್ಯ ಆಡಿಟೋರಿಯಂ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ. ಸಾಲು-ಸಾಲಾಗಿ ಹೈಟೆಕ್‌ ಕಲಿಕಾ ಸೌಲಭ್ಯಗಳೂ ಇಲ್ಲಿವೆ…   ಅಷ್ಟಕ್ಕೂ ಇದು ಯಾವುದೋ ಪ್ರತಿಷ್ಠಿತ ಖಾಸಗಿ ಶಾಲೆ ಅಂದುಕೊಂಡರೆ ಈ ಊಹೆ ತಪ್ಪು. ಇದು ಶತಮಾನ ಕಂಡಿರುವ ಇಲ್ಲಿನ ಶಹಾಪುರದ ಸರ್ಕಾರಿ ಚಿಂತಾಮಣರಾವ್‌ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಚಿತ್ರಣ. ಗಡಿಭಾಗದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ದಿನಗಳಲ್ಲಿ, …

Read More »

ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತು: ನಿತೇಶ್ ಪಾಟೀಲ್

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೆ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅಲ್ಲಿಯವರೆಗೆ ಕರ್ತವ್ಯ ನಿರ್ವಹಣೆಗೆ ಬೇರೆ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಅಥಣಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರಲು ಬಂದಿದ್ದ ಕೆಲ ಅರ್ಜಿಗಳ ಡಾಟಾ ಎಂಟ್ರಿ ಆಗಿರಲಿಲ್ಲ ಎನ್ನುವುದು ವಿಚಾರಣೆ ನಡೆಸಿದಾಗ ತಿಳಿದುಬಂದಿದ್ದು, ಹೀಗಾಗಿ ಅಥಣಿ …

Read More »