Breaking News

ಉತ್ತರ ಕನ್ನಡದಲ್ಲಿ ಹೆಚ್ಚಿದ ಚಿರತೆಗಳ ಓಡಾಟ

ಕಾರವಾರ (ಉತ್ತರ ಕನ್ನಡ): ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರಸಿ ಮತ್ತು ದಾಂಡೇಲಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಿರಸಿ ತಾಲೂಕಿನ ನಿರ್ನಳ್ಳಿಯಲ್ಲಿ ಭಾನುವಾರ ಮಧ್ಯರಾತ್ರಿ ನರಸಿಂಹ ಹೆಗಡೆ ಎಂಬುವರ ಮನೆಯ ಅಂಗಳಕ್ಕೆ ಚಿರತೆಯೊಂದು ಬಂದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯು ಈ ಹಿಂದೆ ನಡೆದ ಚಿರತೆಗಳ ಓಡಾಟದ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. …

Read More »

ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. …

Read More »

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿ ಹೈವೋಲ್ಟೇಜ್’ನಿಂದಾಗಿ ವಿದ್ಯುತ್ ಉಪಕರಣಗಳು ಮತ್ತು ವಿದ್ಯುತ್ ದೀಪಗಳು ಸುಟ್ಟು ಸ್ಥಳೀಯರು ಮತ್ತು ವ್ಯಾಪಾರಿಗಳು ತೀವ್ರ ನಷ್ಟವನ್ನು ಅನುಭವಿಸುವಂತಾಗಿದ್ದು, ಹೆಸ್ಕಾಂ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿಯ ಅನಗೋಳ ಬಾಬಲೆ ಗಲ್ಲಿ ಮತ್ತು ಪ್ರದೇಶದಲ್ಲಿ ನಿನ್ನೆ ಭಾನುವಾರ ಬೆಳಿಗ್ಗೆ ಹೈವೋಲ್ಟೆಜ್’ನಿಂದಾಗಿ ಶಾರ್ಟ್ ಸರ್ಕ್ಯೂಟ್’ಗಳು …

Read More »

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್

ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್ ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿ ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸಿದರು ಹಲವಾರು ವರ್ಷಗಳಿಂದ ಬೆಳಗಾವಿ ಉಜ್ವಲ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದವು ಒಳಚರಂಡಿ ದುರಸ್ತಿ ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು. ಸೋಮವಾರ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು …

Read More »

ಕಾಲ್ತುಳಿತ ಪ್ರಕರಣ, ಅಮೈಕಾಸ್‌ ಕ್ಯೂರಿ ನೇಮಿಸಿದ ಹೈಕೋರ್ಟ್

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್​​ಸಿಬಿ) ಐಪಿಎಲ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಅಮಿಕಸ್​ ಕ್ಯೂರಿ (ಕೋರ್ಟ್‌ಗೆ ನೆರವಾಗುವವರು) ಯನ್ನಾಗಿ ಹಿರಿಯ ವಕೀಲರಾದ ಸುಶೀಲಾ ಅವರನ್ನು ನೇಮಕ ಮಾಡಿ ಹೈಕೋರ್ಟ್‌ ಆದೇಶಿಸಿದೆ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ …

Read More »

ಮೆಡಿಕಲ್ ಸೀಟು ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಗೆ ₹10 ಲಕ್ಷ ವಂಚನೆ ಆರೋಪ

ದಾವಣಗೆರೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿ ಉದ್ಯೋಗಿಗೆ 10.64 ಲಕ್ಷ ರೂಪಾಯಿ ವಂಚಿಸಿರುವ ಘಟನೆ 2022ರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಭರುಣೇಂದ್ರ, ಗೌರವ ಚೌದ್ರಿ ಮತ್ತು ಉಮೇಶ್ ಎಂಬುವರ ವಿರುದ್ಧ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕಾಶ್ ಎಂಬವರು ಸಿಇಎನ್ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪಿಜೆ ಬಡಾವಣೆ ನಿವಾಸಿ ಆಗಿರುವ ಪ್ರಕಾಶ್, ತಮ್ಮ‌ ಸಂಬಂಧಿಕರೊಬ್ಬರ ಪುತ್ರನನ್ನು ಎಂಬಿಬಿಎಸ್‌ಗೆ ಸೇರಿಸಬೇಕೆಂದುಕೊಂಡಿರುವುದಾಗಿ ಸ್ನೇಹಿತರೊಬ್ಬರ ಬಳಿ …

Read More »

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ. ಆರ್. ಪಾಟೀಲ್ ಆರೋಪ

ಬೆಂಗಳೂರು : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆಡಳಿತ ಪಕ್ಷದ ಶಾಸಕರ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಶಾಸಕ ಎ. ಮಂಜು ಮಾತನಾಡಿ, ಈಗಾಗಲೇ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಅವರು ಒಂದು ರೀತಿಯಲ್ಲಿ ಮಾತನಾಡಿದ್ದಾರೆ. ಬಿ. ಆರ್. ಪಾಟೀಲ್ ಅವರ ಮಾದರಿಯಲ್ಲೇ ಶಾಸಕ ರಾಜು ಕಾಗೆ ಹೇಳಿದ್ದಾರೆ. ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ. ಅದರ ಬಗ್ಗೆ ನನಗೂ …

Read More »

ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ಪೋಷಕರಿಕೆ ಒಪ್ಪಿಸಿದ ಪೊಲೀಸರು

ಬೆಂಗಳೂರು: 5 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸಮ್ಮ ಹಾಗೂ ಸುಲೋಚನಾ ಎಂಬಿಬ್ಬರನ್ನು 24 ಗಂಟೆಗಳೊಳಗೆ ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಆಕೆಯ ಪೋಷಕರಿಗೊಪ್ಪಿಸಿದ್ದಾರೆ. ಜೂನ್ 21ರಂದು ವಿಶ್ವೇರಯ್ಯ ಲೇಔಟ್‌ನಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ, ಸಿಂಧನೂರಿಗೆ ಕರೆದೊಯ್ದಿದ್ದರು‌. ಸಿಂಧನೂರು ಮೂಲದವರೇ ಆದ ಬಾಲಕಿಯ ಪೋಷಕರು ಹಾಗೂ ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, 2 ವರ್ಷಗಳಿಂದಲೂ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು‌. ಆದರೆ ಜೂನ್ …

Read More »

ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು …

Read More »