Breaking News

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಲಾಯಿತು. ಈ ವೇಳೆ ಮುಖಂಡರು ಮತ್ತು ಕಾರ್ಯಕರ್ತರನ್ನು ಕೂಡ ಭೇಟಿ

Read More »

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಸಿಎಂ ಕೂಗು ಮೇಲೇಳಲಿದೆ. ಅಂದ ಹಾಗೆ ಈ ವಿಷಯವನ್ನು ಆಪ್ತರೊಡನೆ ಹಂಚಿಕೊಂಡ ಪವರ್ ಫುಲ್ ನಾಯಕರೊಬ್ಬರು:’ಸಿದ್ಧರಾಮಯ್ಯ ಸಿಎಂ ಆಗಿರುವವರೆಗೆ ದಲಿತರು ಈ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ.ಯಾಕೆಂದರೆ ರಾಜ್ಯದ ಅಹಿಂದ ವರ್ಗಗಳಿಗೆ ಅವರು ನಿರ್ವಿವಾದ ನಾಯಕ.ಆದರೆ ಅಧಿಕಾರ ಹಂಚಿಕೆಯ ಮಾತಿಗೆ ಬ್ರೇಕ್ ಬಿದ್ದಿಲ್ಲವಲ್ಲ?ಹೀಗಾಗಿ ದಲಿತರು ತಮ್ಮ ಹಕ್ಕಿಗಾಗಿ ಪೂರ್ವ ತಯಾರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ’ …

Read More »

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ ಭಕ್ತಿಭಾವ, ಸಂಭ್ರಮ ಹಾಗೂ ಸಾಂಸ್ಕೃತಿಕ ಬಣ್ಣಗಳಿಂದ ಕೂಡಿದ ಗಣೇಶ ಚತುರ್ಥಿ ಹಬ್ಬದ ಆಗಮನಕ್ಕೆ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ವಿನಾಯಕ ಚತುರ್ಥಿ ಎಂಬ ಹೆಸರಿನಲ್ಲಿಯೂ ಪ್ರಸಿದ್ಧವಾಗಿರುವ ಈ ಹಬ್ಬವು ಕರ್ನಾಟಕದ ಜನತೆಗೆ ವಿಶೇಷ ಮಹತ್ವ ಹೊಂದಿದ್ದು, ಮನೆಮನೆಗಳಲ್ಲಿ, ಬೀದಿಬೀದಿಗಳಲ್ಲಿ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಹರ್ಷೋದ್ಗಾರದಿಂದ ಆಚರಿಸಲಾಗುತ್ತಿದೆ. ಅನೇಕ ದೇವಾಲಯಗಳು, ಸಂಘ–ಸಂಸ್ಥೆಗಳು ಹಾಗೂ ಮನೆಮನೆಗಳಲ್ಲಿ …

Read More »

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತನಾ? ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು : ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿ ಆಗುತ್ತಾರಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ನಿಯೋಜನೆ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್‌ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ?. ಕಾಂತಾರದ …

Read More »

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್​ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಳೆ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, …

Read More »

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

ಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು. ಇದೀಗ ಲಂಚ ಪಡೆಯುವ ಸರದಿ ಕೆಎಸ್ಆರ್​ಟಿಸಿಗೂ (KSRTC) ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದಕ್ಕೆ ಸಾಕ್ಷ್ಯವೂ ಲಭ್ಯವಾಗಿದೆ. ಕೆಎಸ್ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100ಕ್ಕೂ ಬಸ್​​ಗಳಿವೆ. ಈ …

Read More »

ನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ಕಲಬುರಗಿ: ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ಧಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ …

Read More »

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

ತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ ಮಾದರಿಯ ಗಣೇಶ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪೇಟ ತೊಟ್ಟಿರುವ ಗಣಪತಿ ವಿಗ್ರಹ, ಆಸ್ಥಾನದಲ್ಲಿ ಕುಳಿತ ಭಂಗಿಯ ಗಣೇಶ, ಕೈ ಎತ್ತಿ ನೃತ್ಯ ಮಾಡುವ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಡಲಾಗಿದೆ. ಮೂರ್ತಿಗಳಿಗೆ ನೈಸರ್ಗಿಕ ಬಣ್ಣಗಳನ್ನು ಬಳಸುತ್ತಿರುವುದು ಗಮನಿಸಬೇಕಾದ ಅಂಶ. ಈ ಮೊದಲು ಆಯಿಲ್‌ ಪೈಂಟ್​ಗಳನ್ನು ಬಳಸಲಾಗುತ್ತಿತ್ತು. ಇದರಿಂದ ವಿಸರ್ಜನೆ ವೇಳೆ ಕೆರೆ ನೀರು …

Read More »

ಮೈಸೂರಿನಿಂದ ಧರ್ಮಸ್ಥಳಕ್ಕೆ ಬೃಹತ್ ಕಾರು ರ‍್ಯಾಲಿ

ಮೈಸೂರು: ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಲು ಮೈಸೂರಿನಿಂದ ಮಾಜಿ ಸಚಿವ ಸಾ‌.ರಾ.ಮಹೇಶ್ ಅವರ​ ನೇತೃತ್ವದಲ್ಲಿ ಇಂದು ಧರ್ಮಸ್ಥಳಕ್ಕೆ ಬೃಹತ್ ಕಾರು ರ‍್ಯಾಲಿ ತೆರಳಿತು. ದಟ್ಟಗಳ್ಳಿಯಲ್ಲಿರುವ ಸಾ.ರಾ‌‌.ಕನ್ವೆನ್ಷನ್ ಹಾಲ್ ಮುಂಭಾಗದ ಗಣಪತಿ ದೇವಸ್ಥಾನದಲ್ಲಿ ಸಾ.ರಾ.ಮಹೇಶ್ ಹಾಗೂ ಜೆಡಿಎಸ್ ಮುಖಂಡರು ಪೂಜೆ ಸಲ್ಲಿಸಿದರು. ನಂತರ ರ‍್ಯಾಲಿಗೆ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ಸಾ.ರಾ.ಮಹೇಶ್ ಮಾತನಾಡಿ, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಬಂದಾಗ ಬಹಳ ನೋವಾಗಿತ್ತು‌. ಈಗ ಸತ್ಯ ಹೊರಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ನಿಷ್ಪಕ್ಷವಾಗಿ ತನಿಖೆ …

Read More »

45 ವರ್ಷಗಳಿಂದ ಆವೆಮಣ್ಣಿನ ಗಣಪತಿ ಮೂರ್ತಿ ತಯಾರಿಸುತ್ತಿರುವ ನಿವೃತ್ತ ಕಲಾಶಿಕ್ಷಕ

ಉಡುಪಿ: ಗಣೇಶೋತ್ಸವಕ್ಕೆ ಇನ್ನು ಒಂದೇ ದಿನ ಬಾಕಿ. ವಿನಾಯಕನ ಮೂರ್ತಿಗಳಿಗೆ ಅಂತಿಮ ಸ್ಪರ್ಶ ನೀಡುವ ಕೆಲಸ ಎಲ್ಲೆಡೆ ಭರದಿಂದ ಸಾಗುತ್ತಿದೆ. ಈ ಮಧ್ಯೆ ನಗರದ ಅಲೆವೂರಿನ ನಿವೃತ್ತ ಶಿಕ್ಷಕರೊಬ್ಬರು ಸದ್ದಿಲ್ಲದೆ ಕಳೆದ ನಾಲ್ಕೂವರೆ ದಶಕದಿಂದ ಮೂರ್ತಿ ತಯಾರಿಸಿ ಮಾರಾಟ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ಸಲಹೆಗಳನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಲೆವೂರಿನ 70 ವರ್ಷದ ಶೇಖರ ಕಲ್ಮಾಡಿ ಅವರು, ಪ್ರತಿವರ್ಷವೂ ಪರಿಸರಸ್ನೇಹಿ ಮಣ್ಣಿನ ಗಣಪನ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ. …

Read More »