ತಿರುವನಂತಪುರ (ಕೇರಳ): ‘ಅದೃಷ್ಟ ಹುಡುಕುವವರಿಗೆ ಸಿಹಿಸುದ್ದಿ! ಈ ಓಣಂಗೆ ನಮ್ಮಲ್ಲಿಗೆ ಬನ್ನಿ, ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯ ಅತಿದೊಡ್ಡ ಜಾಕ್ಪಾಟ್ ಗೆಲ್ಲಿ, 25 ಕೋಟಿ ರೂ.ಗಳನ್ನು ಮನೆಗೆ ತೆಗೆದುಕೊಂಡು ಹೋಗಿ…’ – ಹೀಗೆ ಎನ್ನುತ್ತಿದೆ ಕೇರಳ ಸರ್ಕಾರ. ಈ ಮೊದಲು ಗಲ್ಫ್ ರಾಷ್ಟ್ರಗಳಿಂದ ಹಣದ ಹೊಳೆಯೇ ಕೇರಳಕ್ಕೆ ಹರಿದುಬರುತ್ತಿತ್ತು. ಆದರೆ ಕರೊನಾದಿಂದಾಗಿ 10 ಲಕ್ಷಕ್ಕೂ ಅಧಿಕ ಮಂದಿ ಕೇರಳಿಗರು ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರಗಳಿಂದ ತಾಯ್ನಾಡಿಗೆ ವಾಪಸಾಗಿದೆ. ಅದರ ನಡುವೆ ಕರೊನಾದಿಂದಾಗಿ …
Read More »ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿದೆ, ನಮ್ಮದು ಘರ್ಜನಾ ರೂಪದ ಸಿಂಹ: ಸಿಎಂ ಬೊಮ್ಮಾಯಿ
ಉಡುಪಿ: ಕಾಂಗ್ರೆಸ್ನವರು ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದವರು, ನಮ್ಮದು ಘರ್ಜನಾ ರೂಪದಲ್ಲಿ ಇರಬೇಕಾಗಿರೊ ಸಿಂಹ. ಕಾಂಗ್ರೆಸ್ ನೋಡುವ ದೃಷ್ಟಿಯೇ ಬೇರೆ, ನಾವು ನೋಡುವ ದೃಷ್ಟಿಯೇ ಬೇರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಸ ಸಂಸತ್ ಭವನದ ಮೇಲೆ ಸ್ಥಾಪಿಸಿರುವ ರಾಷ್ಟ್ರ ಲಾಂಛನವನ್ನು ಸರ್ಕಾರ ಮಾರ್ಪಾಡು ಮಾಡಿದೆ. ಆ ಮೂಲಕ ರಾಷ್ಟ್ರ ಲಾಂಛನದ ಘನತೆಗೆ ಸರ್ಕಾರ ಅವಮಾನ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಮೂಲ ರಾಷ್ಟ್ರ ಲಾಂಛನದಲ್ಲಿರುವಂತೆ …
Read More »ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬಿಎಸ್ ವೈ-ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ!
ಬೆಳಗಾವಿ :ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಮಾಡುತ್ತಿರುವ ಅಪೂರ್ವ ಗುತ್ತಿಗೆದಾರರ ಮೇಲೆ ಕ್ರಮ ಹಾಗೂ ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಬುಧವಾರ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅರ್ಹತೆ ಇಲ್ಲದವರಿಗೆ ನೇಮಕ ಮಾಡಿದ್ದಾರೆ. ವಿದ್ಯಾ ಅರ್ಹತೆ ಇಲ್ಲದವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇಮಕ ಮಾಡಿದ್ದಾರೆ. ಅಲ್ಲದೆ, ಅರ್ಹತೆ ಇರುವ ನಿಷ್ಠಾವಂತರಿಗೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿಯಿಂದ …
Read More »ರಾಜಕೀಯ ನಾಯಕನ ರಂಗಿನಾಟದ ರಹಸ್ಯ ಬಟಾಬಯಲು
ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್ಪೋಸ್” ಮಾಡುತ್ತಾರೆ. ಐಷಾರಾಮಿ ಕೊಠಡಿಯ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ ಬಂಡವಾಳ ಬಿಚ್ಚಿಡುತ್ತಾಳೆ. ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ …
Read More »ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಬೆಂಗಳೂರು ಚಿಕ್ಕೋಡಿ ಶಾಖೆ ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿ ವಿಳಂಬ ಖಂಡಿಸಿ ಅನಿರ್ದಿಷ್ಟ ಅವಧಿಯವರೆಗೂ ಮುಸ್ಕರ ನಡೆಸಿದ್ದಾರೆ. ಸುಮಾರು ಹತ್ತು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಗೊಳಿಸಬೇಕು, ಹಾಗೂ ಪೌರಕಾರ್ಮಿಕರು ಕೆಲಸದಲ್ಲಿ ಮರಣ ಹೊಂದಿದಲ್ಲಿ ಅವರ ಮನೆಯವರಿಗೆ ಕೆಲಸಕ್ಕೆ ನೇಮಿಕ ಮಾಡಿಕೊಳ್ಳಬೇಕು ಎಂದು …
Read More »ಡಿಕೆಶಿ ಜೈಲಿಗೆ ಹೋಗಲು ನೀವೇ ಕಾರಣರಲ್ಲವೇ?: ಸಿದ್ದು ಏಟಿಗೆ ಜೋಶಿ ತಿರುಗೇಟು
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡುವೆ ಟ್ವೀಟ್ ವಾರ್ ಜೋರಾಗಿ ನಡೆದಿದೆ. ಏಟಿಗೆ ಪ್ರತಿಏಟು ಎಂಬಂತೆ ಇಬ್ಬರೂ ಹಿರಿಯ ಮುಖಂಡರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳು ಈಗ ತೀಕ್ಷ್ಣ ಸ್ವರೂಪ ಪಡೆದುಕೊಂಡಿವೆ. ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಟ್ವಿಟರ್ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ …
Read More »ಮೊಬೈಲ್ ಕೊಡಿಸದಿದ್ದಕ್ಕೆ ಅಪ್ಪನ ಜನ್ಮ ದಿನವೇ ಮಗ ಆತ್ಮಹತ್ಯೆ
ಬೆಳಗಾವಿ: ತಂದೆಯ ಜನ್ಮದಿನದಂದೇ 17 ವರ್ಷದ ಮಗನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪೂರದ ಹಲಕರ್ಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮದ ಪ್ರಥಮೇಶ ರಾಜು ಕೋಳಿ (17) ಮೃತ ದುರ್ದೈವಿ. ಇವರ ತಂದೆ ರಾಜು ಕೋಳಿ ಮೊಬೈಲ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ತಂದೆಗೆ ಮೊಬೈಲ್ ಕೊಡಿಸುವಂತೆ ಖಾನಾಪೂರ ಪಟ್ಟಣದ ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಪ್ರಥಮೇಶ ಎರಡು ದಿನಗಳಿಂದ ಹಠ …
Read More »ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಮೂಡಲಗಿ ಪಟ್ಟಣದ ಗವಿ ತೋಟದ ಆನಂದ ಶರತ್ ಚೌಗಲಾ(25), ಕಲ್ಲಪ್ಪ ಮಲ್ಲಿಕಾರ್ಜನ ಬಿಸನಕೊಪ್ಪ (27), ಬಸವರಾಜ ಶ್ರೀಕಾಂತ ನಿಡಗುಂದಿ (26) ಬಂಧಿತರು. ಪಟ್ಟಣದ ಗೋಕಾಕ್ ಕ್ರಾಸ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಸಂಚರಿಸುತ್ತಿದ್ದ ಮೂವರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಬೈಕ್ ನಿಲ್ಲಿಸದೇ ಪರಾರಿಯಾಗುತ್ತಿದ್ದರು. ಹಿಂಬಾಲಿಸಿ ಹಿಡಿದ …
Read More »ಬೈಲಹೊಂಗಲ ಪಟ್ಟಣದಲ್ಲಿ ದುಷ್ಕರ್ಮಿಗಳಿಂದ ಚಿತ್ರನಟ ಶಿವರಂಜನ್ ಮೇಲೆ ಫೈರಿಂಗ್
ಬೆಳಗಾವಿ : ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದು, ಅದೃಷ್ಟವಶಾತ್ ಯಾವುದೇ ಗುಂಡು ತಗುಲಿಲ್ಲ. ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಶಿವರಂಜನ್ ಅವರಿಗೆ ಯಾವುದೇ ಗುಂಡು ತಗುಲಿಲ್ಲ. ಶಿವರಂಜನ್ ಅವರ ಸಹೋದರ ಸಂಬಂಧಿ ಗುಂಡು ಹಾರಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇನ್ನುವರೆಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ. ಗುಂಡು ಹಾರಿಸಿದವರ ಬಗ್ಗೆ …
Read More »ಸ್ಮಾರ್ಟ್ ಸಿಟಿ ಕೆಲಸ ನಿಗದಿತ ವೇಳೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯಲ್ಲಿ ಅರ್ಧಂಬರ್ಧ ಸ್ಮಾರ್ಟ್ ಎಂಬ ಶೀರ್ಷಿಕೆಯಡಿ ಉದಯವಾಣಿಯಲ್ಲಿ ವಿಶೇಷ ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಕಾಮಗಾರಿ ಪರಿಶೀಲಿಸಿದ್ದು ವಿಶೇಷವಾಗಿತ್ತು. ಸಿಬಿಟಿ ಪಕ್ಕದ ಜಾಗಕ್ಕೆ ಸಂಬಂಧಿಸಿದ …
Read More »
Laxmi News 24×7