Breaking News

K.P.T.C.L. ಪರೀಕ್ಷಾ ಅಕ್ರಮ; 9 ಜನರ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕೆಪಿಟಿಸಿಎಲ್ ಪರೀಕ್ಷಾ ನೇಮಕಾತಿಯಲ್ಲಿ ಬಂಧಿತ ಅಭ್ಯರ್ಥಿಗಳು ಸ್ಮಾರ್ಟ್ ವಾಚ್ ಬಳಸಿ, ಪ್ರೆಶ್ನೆ ಪತ್ರಿಕೆ ಫೋಟೋ ತೆಗೆದು ಟೆಲಿಗ್ರಾಮ್ ಆಪ್ ಮೂಲಕ ತನ್ನ ಸ್ನೇಹಿತರಿಗೆ ಕಳುಹಿಸಿ ಉತ್ತರ ಪಡೆದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಚಿನ್ ಶ್ರೀಧರ ಕಮತರ (32) ಗೋಕಾಕ ಶಹರ ಠಾಣೆಗೆ ಹಾಜರಾಗಿ …

Read More »

ಗಣೇಶೋತ್ಸವ ಶಾಂತಿಯುತವಾಗಿ ನಡೆಸುವಂತೆ ಕೇಂದ್ರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯಿಂದ ಡಿಸಿ ಹಾಗೂ ಕಮಿಶನರ್‍ರವರಿಗೆ ಮನವಿ

ಆಗಸ್ಟ್ 31 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದ್ದು, ಈ ಬಾರಿಯ ಗಣೇಶೋತ್ಸವವನ್ನು ಶಾಂತಿಯುತವಾಗಿ ನಡೆಸುವಂತೆ ಕೇಂದ್ರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ನಿಯೋಗವು ಜಿಲ್ಲಾಧಿಕಾರಿ ಹಾಗೂ ಪೆÇಲೀಸ್ ಆಯುಕ್ತರಿಗೆ ಸೋಮವಾರ ವಿವಿಧ ಬೇಡಿಕೆಗಳನ್ನು ಸಲ್ಲಿಸಿದೆ. ಈ ವರ್ಷದ ಶ್ರೀ ಗಣೇಶೋತ್ಸವವು ಹತ್ತು ದಿನಗಳು ಮತ್ತು ಬುಧವಾರ. 31 ಆಗಸ್ಟ್ ನಿಂದ ಶುಕ್ರವಾರ ಸೆಪ್ಟೆಂಬರ್ 9 ರ ಅವಧಿಯಲ್ಲಿ ಗಣೇಶೋತ್ಸವವನ್ನು ಆಚರಿಸಲಾಗುವುದು. ಬೆಳಗಾವಿಯಲ್ಲಿ 357ಕ್ಕೂ ಹೆಚ್ಚು ಸಾರ್ವಜನಿಕ ಗಣೇಶೋತ್ಸವ ಮಂಡಲಗಳು ಕಾರ್ಯನಿರ್ವಹಿಸುತ್ತಿದ್ದು, …

Read More »

ಸಾವರ್‌ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದರೆ ಹರಿದರೆ ಕೈ ಕತ್ತರಿಸಿ ಬಿಸಾಕುತ್ತೇವೆ : ಪ್ರಮೋದ ಮುತಾಲಿಕ್

ಬೆಳಗಾವಿಯಲ್ಲಿ ಪ್ರತೀ ಗಲ್ಲಿಗಲ್ಲಿಯಲ್ಲಿ ಸಾವರ್‌ಕರ್ ಯಾರು ಎಂದು ತಿಳಿಸುವ ಉದ್ದೇಶದಿಂದ ನಾವು ಪ್ರತೀ ಗಣೇಶ ಮಂಡಳಿಯಲ್ಲಿ ಸಾವರ್‌ಕರ್ ಭಾವಚಿತ್ರವನ್ನು ಅಳವಡಿಸುವಂತೆ ಅಭಿಯಾನವನ್ನು ಮಾಡುತ್ತಿದ್ದೇವೆ. ಈ ವೇಳೆ ಯಾರಾದರೂ ಕಾಂಗ್ರೆಸ್ ಅಥವಾ ಮುಸ್ಲಿಂರು ಸಾವರ್‌ಕರ್ ಭಾವಚಿತ್ರವನ್ನು ಹರಿದರೆ ಕೈ ಕತ್ತರಿಸಿ ಬಿಸಾಕುತ್ತೇವೆ ಎಂದು ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.   ಬೆಳಗಾವಿಯಲ್ಲಿ ಗಣೇಶೋತ್ಸವ ವೇಳೆ ಸಾವರ್‌ಕರ್ ಭಾವಚಿತ್ರ ಅಳವಡಿಸುವ ಆಂದೋಲನಕ್ಕೆ ಇಂದು ಪ್ರಮೋದ ಮುತಾಲಿಕ್ ಬೆಳಗಾವಿಯಲ್ಲಿ ಚಾಲನೆ ನೀಡಿದರು. …

Read More »

ಬೆತ್ತಲೆ ವಿಡಿಯೋ ಕಾಲ್ ಮಾಡಿ ಯುವತಿಯಿಂದ ಬ್ಲ್ಯಾಕ್ ಮೇಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ಮೈಸೂರು: ಯುವತಿಯೊಬ್ಬಳು ಯುವಕನಿಗೆ ವಿಡಿಯೋ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ವಾಸು ಬ್ಲ್ಯಾಕ್ ಮೇಲ್ ಗೊಳಗಾದ ಯುವಕ. ಯುವಕನಿಗೆ ಮೆಸೆಜ್ ಮೂಲಕ ತನ್ನನ್ನು ಅಮೃತಾ ಎಂದು ಪರಿಚಯಿಸಿಕೊಂಡ ಯುವತಿ ಪದೇ ಪದೆ ವಿಡಿಯೋ ಕಾಲ್ ಮಾಡಿದ್ದಾಳೆ ಅಲ್ಲದೇ ಬೆತ್ತಲೆ ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿದ್ದಾಳೆ. ತಕ್ಷಣ ಯುವಕ ವಿಡಿಯೋ ಕಾಲ್ ಕಟ್ ಮಾಡಿದ್ದಾನೆ. ಆದರೆ ವಿಡಿಯೋ ಕಾಲ್ …

Read More »

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವಿಡಿಯೋ ವೈರಲ್; ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಬೆಳಗಾವಿಯ ಗಾಲ್ಫ್ ಮೈದಾನ ಸಮೀಪದಲ್ಲಿ ಮತ್ತೆ ಚಿರತೆ ಕಾಣಿಸಿಕೊಳ್ಳುವ ಮೂಲಕ ಸಾರ್ವಜನಿಕರ ಆತಂಕ ಹೆಚ್ಚಿಸಿದೆ. ಈಗ್ಗೆ 20 ದಿನಗಳ ಹಿಂದೆ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಇದೀಗ ಸೋಮವಾರ ಹಿಂಡಲಗಾ ರಸ್ತೆಯ ಮಹಾತ್ಮ ಗಾಂಧೀ ವೃತ್ತ ಬಳಿ …

Read More »

ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಗದಗದಲ್ಲಿ ಅಪ್ಪ, ಮಗನಿಂದಲೇ ಡೀಲ್‌

ಗದಗ, ಆಗಸ್ಟ್‌ 21: ರಾಜ್ಯದಲ್ಲಿ ಪಿಎಸ್‌ಐ ಪರೀಕ್ಷೆಯ ಹಗರಣ ಮಾಸುವ ಮುನ್ನವೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಗದಗದ ಮುನ್ಸಿಪಲ್ ಕಾಲೇಜ್‌ನಲ್ಲಿ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯ …

Read More »

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ

ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ …

Read More »

ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!

ನೆಲಮಂಗಲ: ಇಲ್ಲೊಂದು ಕೊಲೆ ನಡೆದ 50 ದಿನಗಳ ಬಳಿಕ ಕೊಲೆಗೀಡಾದವನ ಅಸ್ಥಿಪಂಜರ ಪತ್ತೆಯಾಗಿದ್ದು, ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯೇ ಕೊಲೆಗಾತಿ ಎಂಬುದು ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.   ರಾಯಚೂರು ಮೂಲದ ದೊಡ್ಡಲಿಂಗಪ್ಪ (45) ಕೊಲೆಯಾದ ವ್ಯಕ್ತಿ. ಲಕ್ಷ್ಮೀ (35) ಮತ್ತು ವೆಂಕಟೇಶ್​ (40) ಕೊಲೆ ಆರೋಪಿಗಳು. ಲಕ್ಷ್ಮೀಗೆ ವೆಂಕಟೇಶ್ ಜತೆಗಷ್ಟೇ ಅಲ್ಲದೆ, ದೊಡ್ಡಲಿಂಗಪ್ಪ ಜತೆಗೂ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಜು. …

Read More »

ಬಿಪಿಎಲ್ ಕಾರ್ಡ್ ರದ್ದಾದರೆ ಸರ್ಕಾರಿ ಸೌಲಭ್ಯಗಳೂ ಕಟ್; ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು :ಅನರ್ಹರ ಬಳಿಯಿದ್ದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿದೆ. ಈ ಮೂಲಕ ಕಾರ್ಡ್​ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್​ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಸುಳ್ಳು ದಾಖಲೆ ಸಲ್ಲಿಸಿ ಸರ್ಕಾರಿ ಸೌಲಭ್ಯ ಪಡೆಯುತ್ತಿದ್ದವರಿಗೆ ಕ್ರಿಮಿನಲ್ ಕೇಸ್ ಭೀತಿಯೂ ಶುರುವಾಗಿದೆ. ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3,30,024 ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 …

Read More »

ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ..? ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ಮಾಂಸಾಹಾರ ಸೇವಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೇವಸ್ಥಾನಕ್ಕೆ ತೆರಳಿದ್ದ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಬರಬೇಡಿ ಎಂದು ದೇವರು ಹೇಳಿದ್ದಾರಾ? ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.   ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ ಅವರು ಸಹ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಹುದು ಎಂದು ಹೇಳಿದರೆ ಬಂದು …

Read More »