ಬೆಂಗಳೂರು, ಏಪ್ರಿಲ್ 12: ಮಾವಿನ (Mango) ಸುಗ್ಗಿ ಪ್ರಾರಂಭವಾಗಿದೆ. ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಬಂದಿದ್ದು, ಅಂಚೆಯಣ್ಣ ಮನೆ ಬಾಗಿಲಿಗೆ ಮಾವು ಹೊತ್ತು ತರಲು ಸಿದ್ಧನಾಗಿದ್ದಾನೆ. ಇನ್ನೇಕೆ ತಡ ಇಂದೇ ಆನ್ಲೈನ್ನಲ್ಲಿ ಬುಕ್ ಮಾಡಿ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಮಾರುಕಟ್ಟೆಗೆ ಹೋಗಿ ಖರೀದಿಸತ್ತೇವೆ. ಇನ್ನೂ ಕೆಲವರು ಆನ್ಲೈನ್ನಲ್ಲಿ ಆರ್ಡರ್ ಮಾಡಿ ಕೊಳ್ಳುತ್ತಾರೆ. ಇದೀಗ ಮಾವಿನ ಹಣ್ಣಿನ ಮಾರುಕಟ್ಟೆಗೆ ಅಂಚೆ ಇಲಾಖೆ (Government of India, Department of Post) ಕಾಲಿಟ್ಟಿದೆ. …
Read More »ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ
ಬೆಳಗಾವಿ, ಏಪ್ರಿಲ್ 13: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ (Ambulance) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು ಬೆಳಗಾವಿ (Belagavi) ನಗರದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ …
Read More »ಕರ್ನಾಟಕ ರಾಜ್ಯ ಮಾಳಿ – ಮಾಲಗಾರ ಮಹಾಸಭಾ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಜ್ಯೋತಿಬಾ ಫುಲೆಯವರ 198 ಜಯಂತೋತ್ಸವ
ಕರ್ನಾಟಕ ರಾಜ್ಯ ಮಾಳಿ – ಮಾಲಗಾರ ಮಹಾಸಭಾ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಜ್ಯೋತಿಬಾ ಫುಲೆಯವರ 198 ಜಯಂತೋತ್ಸವ ಮತ್ತು ಪ್ರಾದೇಶಿಕ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ. ಈ ವೇಳೆ ತುಮಕೂರಿನ ಶಿವಗಂಗೆಯ ಶ್ರೀ ಮಹಾಲಕ್ಷ್ಮೀ ಮಹಾ ಸಂಸ್ಥಾನ ಪೀಠದ ಜಗದ್ಗುರು ಶ್ರೀ ಜ್ಞಾನನಂದಪುರಿ ಮಹಾಸ್ವಾಮಿಜಿ, ಬಬಲೇಶ್ವರ ತಾಲೂಕಿನ ನಾಗರಾಳ ಗ್ರಾಮದ ಪರಮಾನಂದ ಯೋಗಾಶ್ರಮದ ಶ್ರೀ ಸಿದ್ಧಾರೂಢ ಮಠದ ಪೂಜ್ಯ ಶ್ರೀ ಪ್ರೋ ಭ್ಯ. ಜ್ಞಾನೇಶ್ವರ …
Read More »ಹುಬ್ಬಳ್ಳಿ- ಧಾರವಾಡ ಮಧ್ಯೆ ಮೆಟ್ರೋ ಮಾದರಿ ಸಾರಿಗೆ ಯೋಜನೆ ಒಡಂಬಡಿಕೆ
ಹುಬ್ಬಳ್ಳಿ, ಏಪ್ರಿಲ್ 12: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ-ಭಾದಕಗಳ ಕುರಿತು ಶನಿವಾರ (ಏ.12) ಚರ್ಚೆ ನಡೆದಿದೆ. ಈ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ …
Read More »ವೃದ್ಧೆಯ ಬಂಗಾರದ ಸರ ಎಗರಿಸಿದ್ದ ಕಳ್ಳನ ಬಂಧಿಸಿದ ಪೊಲೀಸರು
ಹಾವೇರಿ: 84 ವರ್ಷ ವಯಸ್ಸಿನ ವೃದ್ಧೆಯ ಮೈಮೇಲಿನ ಸರಗಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಹಾವೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು 25 ವರ್ಷದ ಸಂತೋಷ ತುಳಜಪ್ಪ ಸಿಂಧೆ ಮತ್ತು 49 ವರ್ಷದ ದ್ಯಾಮಣ್ಣ ಪಾಂಡಪ್ಪ ನವರಸಣ್ಣನವರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಹಾವೇರಿ ಜಿಲ್ಲೆ ರಾಣೆಬೆನ್ನೂರ ಪಟ್ಟಣದವರು. ಇದೇ 6 ರಂದು ರಾಣೆಬೆನ್ನೂರಿನ 84 ರ್ಷದ ಸುಧಾಬಾಯಿ ಕುಲಕರ್ಣಿ ಎಂಬುವರು ದೇವಸ್ಥಾನದಿಂದ ಮನೆಗೆ ಬರುವಾಗ ಕೊರಳಲ್ಲಿರುವ ಚಿನ್ನದ ಸರಳ್ಳತನ ಮಾಡಿದ್ದರು. …
Read More »ಕರ್ನಾಟಕದ ಮರಾಠಿ ವಿದ್ಯಾರ್ಥಿಗಳಿಗೆ ಕೊಲ್ಹಾಪುರದಲ್ಲಿರುವ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಶುಲ್ಕ ವಿನಾಯಿತಿ ಆಫರ್ ನೀಡಿದ್ದಕ್ಕೆ ಕನ್ನಡ ಸಂಘಟನೆಗಳು ಆಕ್ರೋಶ
ಬೆಳಗಾವಿ: ಸ್ಮೃತಿ ಭವನಕ್ಕೆ ಬೆಳಗಾವಿ ಜಿಲ್ಲಾಡಳಿತ ಕಡಿವಾಣ ಹಾಕುತ್ತಿದ್ದಂತೆ ಮಹಾರಾಷ್ಟ್ರ ಮತ್ತೊಂದು ಕ್ಯಾತೆ ಶುರು ಮಾಡಿದೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ರಾಜ್ಯದಲ್ಲಿರುವ ಸುಮಾರು 865ಕ್ಕೂ ಹೆಚ್ಚು ಗ್ರಾಮಗಳ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಶುಲ್ಕ ವಿನಾಯಿತಿ, ಉಚಿತ ಹಾಸ್ಟೆಲ್ ಸೌಲಭ್ಯದ ಆಫರ್ ನೀಡಿದೆ. ಈ ವಿಚಾರವಾಗಿ ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 1986ರಲ್ಲಿ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ ಮರಾಠಿ ಭಾಷಿಕರ ಸ್ಮರಣೆಗಾಗಿ ಎಂಇಎಸ್ ಮುಖಂಡರು ಮಹಾರಾಷ್ಟ್ರ ಸರ್ಕಾರದ ನೆರವಿನಿಂದ …
Read More »ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!* ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್
ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ..60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!* ಭಾರತದಲ್ಲೇ ಮೊದಲ ಬಾರಿಗೆ ಅನಿರುದ್ಧ್ ಹುಕುಂ ಟೂರ್ *ಬೆಂಗಳೂರಿನಲ್ಲಿ ಜನನಾಯಗನ್ ಮ್ಯೂಸಿಕ್ ಡೈರೆಕ್ಟರ್ ಕನ್ಸರ್ಟ್..* *60 ನಿಮಿಷ 16 ಸಾವಿರ ಟಿಕೆಟ್ ಸೋಲ್ಡ್ ಔಟ್…ಮೇ.31ಕ್ಕೆ ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ!* ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು …
Read More »ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ತವರುಮನೆಯ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ತವರು ಮನೆಯ ಆರಾಧ್ಯದೈವ ಚಿಕ್ಕಹಟ್ಟಿಹೊಳಿಯ ಶ್ರೀ ವೀರಭದ್ರ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ, ವೀರಭದ್ರ ದೇವರಿಗೆ ವಿಶೇಷ ಪೂಜೆ ಕೈಗೊಂಡು, ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ, ಕುಟುಂಬದ ಪರಂಪರೆಯಂತೆ ಚಿಕ್ಕಹಟ್ಟಿಹೊಳಿ ಹಾಗೂ ಜಿಕನೂರ್ ಗ್ರಾಮದ ಜನತೆಗೆ ಹೋಳಿಗೆ ಊಟದ ಸೇವೆಯನ್ನು ನೀಡಿದರು. ವಿಧಾನ …
Read More »ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ. ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ …
Read More »ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ, ಆತುರದ ಕ್ರಮ ಇಲ್ಲ.
ಬೆಳಗಾವಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ. ಜಾತಿ ಗಣತಿ ವರದಿ ಆಂಕಿ ಅಂಶ ವರದಿ ಬಿಡುಗಡೆ. ಈಗತಾನೇ ಒಪನ್ ಆಗಿದೆ. ಈಗ ಒಂದು ಕಾಪಿಯನ್ನು ನನಗೆ ಕಳುಹಿಸಿದ್ದಾರೆ. ನಾವೇಲ್ಲ ನೋಡ್ತಿವಿ, ಆತುರದ ಕ್ರಮ ಇಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ. ಏನಾದ್ರು ಲೋಪದೋಷ ಇದ್ರೆ ಅದನ್ನು ಸರಿ ಮಾಡುತ್ತೇವೆ. ನಮ್ಮ ಪಕ್ಷದ ಮೂಲ ಸಿದ್ಧಾಂತ ಎಲ್ಲರಿಗೂ ಸಮಪಾಲು, ಸಮಬಾಳು. ನಮ್ಮದು ಬಸವಣ್ಣನ ತತ್ವನ ಮೇಲೆ ಕೆಲಸ ಮಾಡ್ತಿವಿ. …
Read More »