ಬೆಂಗಳೂರು, ಮೇ 20: ಮಳೆಯಿಂದ ಹಾನಿಯಾಗಿರುವ ರಾಜಧಾನಿಯ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ, ಹೈಕಮಾಂಡ್ ನಿಂದ ತುರ್ತು ಬುಲಾವ್ ಬಂದಿದೆ. ಇಂದು ಮಧ್ಯಾಹ್ನದ ನಂತರ ಸಿಎಂ ದೆಹಲಿಗೆ ಹೊರಡಲಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಕಚೇರಿಯಿಂದಲೇ ದೂರವಾಣಿ ಕರೆ ಬಂದಿದ್ದು, ಇಂದು ಸಂಜೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗುವ ಸಾಧ್ಯತೆಯಿದೆ. ಜೊತೆಗೆ, ಅಪಾಯಿಂಟ್ಮೆಂಟ್ ಸಿಕ್ಕಿದರೆ ಅಮಿತ್ ಶಾ ಅವರನ್ನೂ ಬೊಮ್ಮಾಯಿ …
Read More »ಕಾಂಗ್ರೆಸ್ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಮುನ್ನವೇ ರಾಜಕೀಯ ಜ್ವರ ಆರಂಭವಾಗಿದೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ಸಮಾಜಸೇವಕರು ಲಗ್ಗೆ ಇಟ್ಟಿದ್ದಾರೆ. ವಿವಿಧ ಪಕ್ಷಗಳ ಹಾಲಿ ಶಾಸಕರು ಮತ್ತೂಮ್ಮೆ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ, ಸಮಾಜ ಸೇವೆ ನೆಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಸನ್ನದ್ಧರಾಗಿದ್ದಾರೆ. …
Read More »ಜೆಡಿಎಸ್ ತೊರೆದು ಬಿಜೆಪಿ ಸೇರುವ ಅನಿರ್ವಾಯತೆ ನನಗಿರಲಿಲ್ಲ: ಹೊರಟ್ಟಿ
ಹುಬ್ಬಳ್ಳಿ: ಬಿಜೆಪಿಗೆ ಸೇರುವ ಹಾಗೂ ಜೆಡಿಎಸ್ ತೊರೆಯುವ ಅನಿವಾರ್ಯತೆ ನನಗಿರಲಿಲ್ಲ. ನನ್ನ ಕ್ಷೇತ್ರದ ಶಿಕ್ಷಕರು, ಹಿತೈಷಿಗಳು ಬಿಜೆಪಿ ಸೇರ್ಪಡೆಯಾಗುವ ಬಲವಾದ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ. ಎಲ್ಲೇ ಇದ್ದರೂ ಪಕ್ಷದ ಶಿಸ್ತು, ನಿಯಮಗಳಿಗೆ ಬದ್ಧನಾಗಿರುವೆ ಎಂದು ವಿಧಾನ ಪರಿಷತ್ತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಶುಕ್ರವಾರ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಅಕ್ಕನ ಮದುವೆಗೆ ಬರುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ರೈಲಿನಡಿ ಸಿಲುಕಿ ಸಾವು
ರಾಯಚೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕನಾಗಿದ್ದಾನೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ. ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ …
Read More »ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: 1,201 ಹುದ್ದೆಗಳು ಖಾಲಿ..!
ಬೆಂಗಳೂರು : ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 …
Read More »ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ:
ಹುಬ್ಬಳ್ಳಿ: ಪಕ್ಕದ ಮನೆಯ ಮಹಿಳೆಯೊಬ್ಬಳ ಮೇಲೆ ಕಣ್ಣು ಹಾಕಿದ ಕಿರಾತಕನೊಬ್ಬ ಆಕೆಯ ಗಂಡನನ್ನು ತನ್ನ ಮನೆಯ ಕಾರು ಚಾಲಕನನ್ನಾಗಿ ಮಾಡಿಕೊಂಡು, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಮೌಲಾಸಾಬ್ ಮಹ್ಮದ್ ಸಾಬ್ ಹುಲಸೂರ ಎಂಬ ಕಾಮುಕನ ವಿರುದ್ಧ ಮಹಿಳೆ ಈಗ ದೂರು ದಾಖಲಿಸಿದ್ದಾರೆ. ಮಹಿಳೆಗಿಂತಲೂ ಚಿಕ್ಕವನಾಗಿರುವ ಮೌಲಾಸಾಬ್ ಆಕೆಯ ಮೇಲೆ ಕಣ್ಣು ಹಾಕಿ ಹೇಗಾದರೂ ಅವಳನ್ನು ತನ್ನವಳನ್ನಾಗಿಸಿಕೊಳ್ಳುವ …
Read More »ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ …..
ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ ….. ಶೈಕ್ಷಣಿಕ ಜಿಲ್ಲಾ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ನಾಗರಮುನ್ನೋಳಿ ಗ್ರಾಮದಲ್ಲಿ ಜಲಜೀವನ್ ಮಷೀನ್ ಯೋಜನೆಯ ಅಡಿ ಕಾಮಗಾರಿಯು ಮೊದಲಿನಿಂದಲೂ ಕಳಪೆಯಾಗಿ ನಡೆಯುತ್ತಿದು ಅದರಲ್ಲಿ ಇವಾಗ ಮಾಲ್ಕಿನ್ ಜಾಗದಲ್ಲಿ ದಬ್ಬಾಳಿಕ್ಕೆ ಮೇರೆದು ಗುತ್ತಿಗೆದಾರ ದುರರ್ವತ್ತಣೆ ಮೆರೆದಿದ್ದಾನೆ , ರೈತರಿಗೆ ಮಾಹಿತಿ ನೀಡದೆ ಅವರ ಹೊಲದಲ್ಲಿ ಜಲಕುಂಭ ನಿರ್ಮಾಣ ಮಾಡಿ …
Read More »‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ
‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ ಬೆಂಗಳೂರು, ಮೇ 20: ಮಳೆಯಿಂದ ತತ್ತರಿಸಿ ಹೋಗಿರುವ ನಗರದ ವಿವಿಧ ಭಾಗಗಳಿಗೆ ರಾಜಕೀಯ ಮುಖಂಡರು ಪ್ರದಕ್ಷಿಣೆ ಹಾಕುತ್ತಿದ್ದಾರೆ. ಅದರಂತೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗಾಂಧಿನಗರ, ಶಿವಾಜಿನಗರ, ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿದ್ದಾರೆ. ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಸಿದ್ದರಾಮಯ್ಯ, ಮಳೆಯಿಂದ ಇಷ್ಟೊಂದು ಆವಾಂತರವಾಗಲು ಸರಕಾರದ …
Read More »ರೋಗಿಯೊಬ್ಬರಿಂದ ಕೇವಲ ಒಂದು ಗಂಟೆ ಅವಧಿಯಲ್ಲಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿದ್ದಾರೆ.
ತೆಲಂಗಾಣದ(Telangana) ಹೈದರಾಬಾದ್ನಲ್ಲಿರುವ(Hyderabad) ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ(Glenigals Global Hospital) ವೈದ್ಯರು ಕೀಹೋಲ್(Keyhole) ಶಸ್ತ್ರಚಿಕಿತ್ಸೆಯ ಮೂಲಕ ರೋಗಿಯೊಬ್ಬರಿಂದ ಕೇವಲ ಒಂದು ಗಂಟೆ ಅವಧಿಯಲ್ಲಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ರೋಗಿಯು ಆರು ತಿಂಗಳಿಗೂ ಹೆಚ್ಚು ಕಾಲ ತನ್ನ ಎಡ ಸೊಂಟದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದ ಹಿನ್ನಲೆ, ಬೇಸಿಗೆಯ ತಿಂಗಳು ಪ್ರಾರಂಭವಾದಾಗಿನಿಂದ ತಾಪಮಾನದ ಪರಿಣಾಮ ಇದು ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಕೂಡಲೇ ಶಸ್ತ್ರಚಿಕಿತ್ಸೆಗೆ ಎಂದು ಬಂದ ರೋಗಿಗೆ ಕಾದಿದ್ದು ಆಶ್ಚರ್ಯವೇ, ವೈದ್ಯರಿಗೂ …
Read More »ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ
ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ ಕಲಬುರಗಿ: ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಪರಿಹಾರ ಕೊಡುತ್ತಿದೆ. ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ದರೂ ಪರಿಹಾರ ಕೊಡಬೇಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನೆಲೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಸರಿಯಾಗಿ ನಿರ್ವಹಣೆ ಮಾಡಬೇಕು. ಅದೇ ನೀರು ರಸ್ತೆ ಮನೆಗಳಿಗೆ ನುಗ್ಗುತ್ತಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ರಾಜಕಾಲುವೆ ಸ್ವಚ್ಛತೆ …
Read More »