ಹುಬ್ಬಳ್ಳಿ: ಪಿಎಫ್ಐ ಸಂಘಟನೆ ನಿಷೇಧ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ ನಿಷೇಧ ಕಾಂಗ್ರೆಸ್ ನವರಿಗೆ ನೋವು ತರಿಸಿದೆ. ಆದರೆ ಪಿಎಫ್ಐ ವಿರುದ್ಧ ಸಾಕ್ಷ್ಯಗಳು ಎಷ್ಟು ಬಲವಾಗಿವೆ ಎಂದರೆ, ಕಾಂಗ್ರೆಸ್ ನವರು ನಿಷೇಧ ಬಹಿರಂಗ …
Read More »ಖಂಡಿತವಾಗಿಯೂ ರಮೇಶ್ ಜಾರಕಿಹೊಳಿ ಸಚಿವರಾಗುತ್ತಾರೆ: ನಳಿನ್ಕುಮಾರ್
ಬೆಳಗಾವಿ: ರಮೇಶ್ ಜಾರಕಿಹೊಳಿ ಖಂಡಿತವಾಗಿಯೂ ಮತ್ತೆ ಸಚಿವರಾಗುತ್ತಾರೆ. ಯಾವಾಗ ಆಗಲಿದ್ದಾರೆ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಹಾಲಿ ಬಿಜೆಪಿ ಶಾಸಕರ ಮತಕ್ಷೇತ್ರದಲ್ಲಿ ಅವರನ್ನು ಬದಲಾಯಿಸುವ ಪ್ರಶ್ನೆಯಿಲ್ಲ. ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದರೆ, ಅದು ಪಕ್ಷದ ಶಕ್ತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ, ಐಟಿ ಎಲ್ಲರ ತನಿಖೆ ಮಾಡುತ್ತವೆ. ಪ್ರಾಮಾಣಿಕವಾಗಿದ್ದರೆ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿ ತನಿಖೆಗೆ ತೆರಳಿ ಉತ್ತರ ನೀಡಬೇಕು …
Read More »ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …
Read More »ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್
ಮೈಸೂರು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಬ್ಯಾನ್ ಮಾಡಿ ಎನ್ನುತ್ತಿದ್ದಾರೆ. ಮೊದಲು ಅವರ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಮಂಗಳೂರಿನಲ್ಲಿ ಪಿಎಫ್ ಐ – ಎಸ್ ಡಿಪಿಐ ಜೊತೆ ಯಾರ ಸಂಬಂಧವಿದೆ ಎಂದು ಗೊತ್ತಾಗುತ್ತದೆ ಎಂದರು. ಗುಜರಾತ್ ಚುನಾವಣೆ ವೇಳೆ ಯಾವಾಗಲೂ ನರೇಂದ್ರ ಮೋದಿಗೆ …
Read More »ಚುನಾವಣೆ ವರ್ಷದಲ್ಲಿ ಸರ್ಕಾರಿ ನೌಕಕರಿಗೆ ಸಿಗಲಿದೆಯಾ ಭರ್ಜರಿ ಗಿಫ್ಟ್
ಸರ್ಕಾರಿ ಉದ್ಯೋಗವೇ ಹಾಗೆ, ಒಮ್ಮೆ ಜಾಬ್ ಆದ್ರೆ ಸಾಕು ಆಮೇಲೆ ಲೈಫ್ ಫುಲ್ ಸೆಟಲ್ ಅನ್ನೋದು ಹೆಚ್ಚಿನವರ ಅಭಿಪ್ರಾಯ. ಅದರಲ್ಲೂ ವೇತನ ಹೆಚ್ಚಾಯಿತು ಅಂದ್ರೆ ಅದರಲ್ಲಿ ಸಿಗೋ ಸಂತೋಷ ಮತ್ಯಾವುದರಿಂದಲೂ ಸಿಗಲ್ಲ ಎಂಬ ಅನುಭವ ಆಗುತ್ತದೆ. ಇದೀಗ ಇದೇ ಸರ್ಕಾರಿ ನೌಕರರಿಗೆ ಹೊಸ ವರ್ಷಾರಂಭದಲ್ಲಿ ವೇತನ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಮೂಲಕ ಚುನಾವಣೆ ವರ್ಷದಲ್ಲಿ ನೌಕರ ವರ್ಗಕ್ಕೆ ಭರ್ಜರಿ ಗಿಫ್ಟ್ ದೊರಕಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ …
Read More »ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ
ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪತ್ನಿ ಪುಷ್ಪಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ರಾಯನಾಳ ಬಳಿ ಜುಲೈ 4 ರಂದು ದೀಪಕ್ ಪಠದಾರಿ ಹತ್ಯೆಯಾಗಿತ್ತು. ದೀಪಕ್ ಮತ್ತು ಪುಷ್ಪಾ ಪ್ರೀತಿಸಿ ವಿವಾಹವಾಗಿದ್ದರು. ಇದರಿಂದ ತಮ್ಮ ಕುಟುಂಬದವರೇ ದೀಪಕ್ ಕೊಲೆ ಮಾಡಿರಬಹುದು ಎಂದು ಆರೋಪಿಸಿ ಪುಷ್ಪಾ, ಕುಟುಂಬದವರ ವಿರುದ್ಧ ಪೊಲೀಸ್ ಠಾಣೆ ದೂರು ನೀಡಿದ್ದರು. ಬಳಿಕ ಪತಿಯ ಹತ್ಯೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ …
Read More »BIGGNEWS : ನಾನು ಮನಸ್ಸು ಮಾಡಿದ್ರೆ, ಬಿಜೆಪಿ ಕಾರ್ಯಕ್ರಮ ಫ್ಲೆಕ್ಸ್ ಎಲ್ಲೂ ಹಾಕೋದಕ್ಕೆ ಬಿಡಲ್ಲ : ಡಿಕೆಶಿ
ಬೆಂಗಳೂರು : ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹಾಕಿದ್ದನ್ನು ಹರಿದು ಹಾಕಿದ ವಿಚಾರ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಫ್ಲೆಕ್ಸ್ ಹರಿದು ಹಾಕುವುದು ಒಳ್ಳೆಯ ಸಂಸ್ಕೃತಿಯಲ್ಲ. ಚುಚ್ಚಿದರು ಗುಂಡುಕ್ಕಿದರೂ ಕಾಂಗ್ರೆಸ್ಸಿಗರು ಹೆದರಲ್ಲ. ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ. ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ …
Read More »ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್
ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …
Read More »ಪಿಎಸ್ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!
ಬೆಂಗಳೂರು, ಸೆ.28. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …
Read More »ಆರು ತಿಂಗಳ ಬೆಳೆ : ಬದನೆಯಿಂದ ಲಕ್ಷಾಂತರ ಲಾಭ ಮಾಡಿಕೊಂಡ ರೈತ ಮಲ್ಲಿಕಾರ್ಜುನ
ರಬಕವಿ-ಬನಹಟ್ಟಿ: ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡು ಅದನ್ನೇ ಪ್ರತಿನಿತ್ಯ ತಮ್ಮ ಕುಟುಂಬದೊಂದಿಗೆ ಮುಂದುವರೆಸಿಕೊಂಡು ಕಲ್ಲು ಗುಡ್ಡಗಳ ಭೂಮಿಯನ್ನು ಹದ ಮಾಡಿ ಈ ಭಾಗದಲ್ಲಿ ಹೊಸತನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆದು ಲಕ್ಷಾಂತರೂಗಳ ಲಾಭಗಳಿಸಬಹುದು ಎಂಬುದನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ನಾವಲಗಿಯ ಮಲ್ಲಿಕಾರ್ಜುನ ಹನಮಂತ ಜನವಾಡ ತೋರಿಸಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಕಲಿತಿದ್ದು ಎಸ್.ಎಸ್.ಎಲ್.ಸಿ ಆದರೆ ಸಾಧನೆ ಮಾತ್ರ ಮುಗಿಲೆತ್ತರದು. ಕೇವಲ 1 ಎಕರೆ ಜಾಗದಲ್ಲಿ ಗ್ಯಾಲನ್ ತಳಿಯ ಬದನೆಕಾಯಿಗಳನ್ನು ಬೆಳೆದು ಆರು ತಿಂಗಳ ಅವಧಿಯಲ್ಲಿ …
Read More »
Laxmi News 24×7