Breaking News

ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.

ಎನ್‍ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …

Read More »

ಕಾರಿನ ಮೇಲೆ ಆನೆಗಳ ದಾಳಿ, ಚಾಲಕ ಜಸ್ಟ್ ಮಿಸ್

ಚಾಮರಾಜನಗರ: ಹೆದ್ದಾರಿ ನಡುವೆ ಆನೆಗಳು ಗುಂಪುಗಟ್ಟಿ ಪ್ರಯಾಣಿಕರಿಗೆ ತೊಂದರೆ ಕೊಟ್ಟಿವೆ. ವಾಹನಗಳನ್ನು ಜಖಂ ಗೊಳಿಸಿದ್ದು, ಚಾಲಕನೊಬ್ಬ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗಡಿ ಭಾಗವಾದ ಹಾಸನೂರಿನ ಬಳಿ ಘಟನೆ ನಡೆದಿದ್ದು, ತಮಿಳುನಾಡಿನ ಡಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಆನೆಗಳು ಪುಂಡಾಟ ನಡೆಸಿವೆ. ಮರಿಯಾನೆಯೊಂದಿಗೆ ಹೆದ್ದಾರಿಗೆ ಬಂದಿದ್ದ ಆನೆಗಳು ವಾಹನಗಳನ್ನು ಅಡ್ಡಗಟ್ಟಿವೆ. ಬಳಿಕ ವಾಹನಗಳನ್ನು ಜಖಂ ಗೊಳಿಸಿವೆ. ಆನೆಗಳು ಬರುತ್ತಿದ್ದರೂ ಭಯವಿಲ್ಲದೆ ಕಾರು ಚಾಲಕ ಮುಂದಕ್ಕೆ ಸಾಗುತ್ತಿದ್ದಾಗ ಆನೆ ಅಡ್ಡಗಟ್ಟಿದೆ. ಆನೆ …

Read More »

ಚಿಕ್ಕೋಡಿಯಲ್ಲಿ ಆರಕ್ಷಕರಿಗೇ ಇಲ್ಲ ಸೋರದ ಸೂರು!

ಚಿಕ್ಕೋಡಿ(ಬೆಳಗಾವಿ): ಕಳೆದ ಆರು ವರ್ಷದ ಹಿಂದೆ ಅಲ್ಲಿ ಹೊರ ಠಾಣೆಯಿಂದ ಪೊಲೀಸ್ ಠಾಣೆ ಪ್ರಾರಂಭಿಸಲಾಗಿದೆ. 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ಆ ಠಾಣೆ ಸ್ವಂತ ಕಟ್ಟಡವಿಲ್ಲದೇ ಅಲ್ಲಿರುವ ಪುರಸಭೆಯ ಹಳೆ ಕಟ್ಟಡದಲ್ಲಿದೆ. ಪುರಸಭೆ ಪಕ್ಕದಲ್ಲೆ ಠಾಣೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಒಂದು ಕಡೆಯಾದರೆ ಇನ್ನೊಂದೆಡೆ ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು. ಜನರ ರಕ್ಷಣೆ ಮಾಡಬೇಕಾದ ಪೊಲೀಸರ ಪಾಡು ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ …

Read More »

ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …

Read More »

ಅಗೆದಷ್ಟೂ, ಬಗೆದಷ್ಟೂ ಪತ್ತೆಯಾಗ್ತಿವೆ ಭ್ರೂಣಗಳ ಚರಿತ್ರೆ- ಬೆಳಗಾವಿಯ ಆಸ್ಪತ್ರೆಗಳ ಭಯಾನಕ ಕಥೆಗಳು ಬೆಳಕಿಗೆ..!

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಜೂನ್. 23ರ ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದ್ದವು. ಕೊನೆಗೆ ತನಿಖೆ ಕೈಗೊಂಡಿದ್ದ ಅಧಿಕಾರಿಗಳಿಗೆ ಇವು ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್​ಗಳ ಕೃತ್ಯ ಎನ್ನುವುದು ತಿಳಿದಿತ್ತು. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದರು ಸಿಬ್ಬಂದಿ. ಇದರ ಬೆನ್ನಲ್ಲೇ …

Read More »

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …

Read More »

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು. ಏಕೀಕರಣ ಹೋರಾಟ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು …

Read More »

ತಪ್ಪಿನ ಅರಿವಾಗಿ ಮತ್ತೆ ಮೂರು ಮಕ್ಕಳೊಂದಿಗೆ ಗರ್ಭಿಣಿ ಪತ್ನಿಯನ್ನು ಮನೆತುಂಬಿಸಿಕೊಂಡ ಪತಿ…

ಮನೆಯವರ ವಿರೋಧ ಕಟ್ಟಿಕೊಂಡು ಪ್ರೇಮವಿವಾಹವಾದ ಬಳಿಕ ೩ ಮಕ್ಕಳ ಗರ್ಭವತಿ ಅನುಭವಿಸಿದ್ದು ಅಷ್ಟೀಷ್ಟಲ್ಲ. ಕೊನೆಗೂ ಆಕೆಯ ಗಂಡನನ್ನು ಹುಡುಕಿ ಆ ಪ್ರೇಮಿಗಳನ್ನು ಒಂದು ಮಾಡಲಾಗಿದೆ. ಅಷ್ಟಕ್ಕೂ ಆ ದಂಪತಿಗಳಾರು … ಅವರನ್ನು ಒಂದುಗೂಡಿಸಿದ್ದಾದರೂ ಯಾರು??? ಅಂತೀರಾ. ಹಾಗಾದ್ರೇ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ. ಗಿಡಗಂಟಿಗಳಲ್ಲಿ ವಾಸಿಸುತ್ತಿರುವ ಮಹಿಳೆ… ಹಸಿವು-ನೀರಡಿಕೆಯಿಂದ ಪರಿತಪಿಸುತ್ತಿರುವ ಗರ್ಭಿಣಿಯ ಮೂರು ಮಕ್ಕಳು… ಗಿಡಗಂಟಿಯಲ್ಲಿ ಪತಿಯಿಲ್ಲದೇ ಪರಿತಪಿಸುತ್ತಿದ್ದ ಅಬಲೆಗೆ ಸಹಾಯ ಮಾಡಿದ ಫೌಂಡೇಶನ್… ಹೌದು, ೮ ವರ್ಷದ ಹಿಂದೆ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ …

Read More »

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

ಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ ಮುಕ್ತಾಯ ಕೊನೆಯ ಬಾರಿ ಮುಖ ನೋಡಲು ಕರೆಯುತ್ತಿರುವ ಶವಾಗಾರ ಸಿಬ್ಬಂದಿ ಪ್ರಕರಣದಲ್ಲಿ ಸ್ಥಳದಲ್ಲೇ ಮೃತಪಟ್ಟರಿರುವ ಏಳು ಕಾರ್ಮಿಕರು ಬೆಳಗಾವಿ ಬೀಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಹಸ್ತಾಂತರಿಸಿದ ಆಸ್ಪತ್ರೆ ಸಿಬ್ಬಂದಿಗಳು ಶವಾಗಾರ ಎದುರು ಜಮಾಯಿಸಿರುವ ಪೋಷಕರು, ಬಿಮ್ಸ್ ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಶವ ಹಸ್ತಾಂತರ, ತಮ್ಮ ತಮ್ಮ …

Read More »