Breaking News

ಸಿಎಂ ಹೆಗಲಿಗೆ ಸಂಪುಟ: ಅರುಣ್ ಸಿಂಗ್ ಹೇಳಿಕೆ | ಸಚಿವರ ಮೌನ ಕಾರ್ಯವೈಖರಿಗೆ ಕಿಡಿ

ಬೆಂಗಳೂರು: ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು, ಬಿಡಬೇಕು ಎನ್ನುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಷಯದಲ್ಲಿ ಮುಖ್ಯಮಂತ್ರಿಯದೇ ಪರಮಾಧಿಕಾರ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಚರಿಸಿದರು.   ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯದಮವರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಅದೇನಿದ್ದರೂ ಕಾಂಗ್ರೆಸ್​ನಲ್ಲಿದೆ, ಸದಾ ಗೊಂದಲದಲ್ಲಿ ಆ ಪಕ್ಷ ಮುಳುಗಿರುತ್ತದೆ ಎಂದರು. ‘ವರಿಷ್ಠರ ಒಪ್ಪಿಗೆಯಂತೆ ಮುಂದಿನ ನಡೆ ಎಂದು ಸಿಎಂ …

Read More »

ಇಂದಿರಾ, ಸೋನಿಯಾ ಬಳಿಕ ರಾಜ್ಯಕ್ಕೆ ಪ್ರಿಯಾಂಕಾ?

ಬೆಂಗಳೂರು: ರಾಜಸ್ಥಾನದಲ್ಲಿ ನಡೆದಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಕರ್ನಾಟಕವನ್ನು ಗೆಲ್ಲುವ ಬಗ್ಗೆ ಚಿಂತನ ಮಂಥನ ಕೂಡ ನಡೆದಿದೆ. ಈ ವರ್ಷದ ನವೆಂಬರ್​ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಾಗೂ 2023ರ ಮಾರ್ಚ್-ಏಪ್ರಿಲ್​ನಲ್ಲಿ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಕಾಂಗ್ರೆಸ್ ಗಂಭೀರವಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಈ ಎರಡು ರಾಜ್ಯಗಳನ್ನು ಕೈ ವಶಮಾಡಿಕೊಳ್ಳಲೇಬೇಕೆಂದು ಪಕ್ಷದ ನಾಯಕರು ಸಂಕಲ್ಪ ಮಾಡಿದ್ದಾರೆ. ಈ ಎರಡು ರಾಜ್ಯಗಳ ಕುರಿತಂತೆ ಪ್ರಮುಖ ಅಜೆಂಡವಾಗಿ ಸಭೆಯಲ್ಲಿ …

Read More »

ಅಪಘಾತದಲ್ಲಿ ಜೀವಕಳೆದುಕೊಂಡ ದಂತಕಥೆ ಸೈಮಂಡ್ಸ್‌

ಆಸ್ಟ್ರೇಲಿಯಾ: ಕ್ರಿಕೆಟ್‌ ಲೋಕದ ದಂತಥೆ ಎಂದೇ ಬಿಂಬಿತವಾಗಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಆಟಗಾರ ಆಂಡ್ರ್ಯೋ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರಿಗೆ 46 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆ ಬಳಿ ಈ ಅಪಘಾತ ನಡೆದಿದೆ.   ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೈಮಂಡ್ಸ್ 26 ಟೆಸ್ಟ್, 198 ಏಕದಿನ ಹಾಗೂ 14 ಟಿ20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದಾರೆ. ಕ್ವೀನ್ಸ್‌ಲ್ಯಾಂಡ್ ಪೊಲೀಸರು ಶನಿವಾರ ಸಂಜೆ ನಗರದಿಂದ ಸುಮಾರು …

Read More »

ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್‌, ಪರಿಷತ್‌ಗೆ ವಿಜಯೇಂದ್ರ ಆಯ್ಕೆಗೆ ಸಮ್ಮತಿ

ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್‌ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.   ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ …

Read More »

ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ,: ಆರ್. ಅಶೋಕ

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.   ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ …

Read More »

ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್​ ಬಾಬು ಸಿನಿಮಾ ದಾಖಲೆ

ಮೊದಲಾರ್ಧವನ್ನು ಇಷ್ಟಪಟ್ಟ ಫ್ಯಾನ್ಸ್​ ಸೆಕೆಂಡ್ ಹಾಫ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯಪ್ಯಾನ್ ಇಂಡಿಯಾಟ್ರೆಂಡ್ ಜೋರಾಗಿದೆ. ಆದರೆ, ಮಹೇಶ್ ಬಾಬು ಸಿನಿಮಾ ತೆಲುಗಿನಲ್ಲಿ ಮಾತ್ರ ತೆರೆಗೆ ಬಂದಿದೆ. ಆದಾಗ್ಯೂ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಮಹೇಶ್ ಬಾಬು ಫ್ಯಾನ್ಸ್ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಹೀಗಾಗಿ ಈ ಚಿತ್ರ ಎರಡೇ ದಿನಕ್ಕೆ 100 …

Read More »

ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ

ಬಾಗಲಕೋಟೆ: ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಾಗಲಕೋಟೆ ನಗರದ ವಿನಾಯಕ ನಗರದ ಕ್ರಾಸ್​ನಲ್ಲಿ ನಡೆದಿದೆ. ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆದಿದೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬಾತನ ವಿರುದ್ಧ ಮಾರಣಾಂತಿಕ‌ವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನನಗೆ ಕಾಲು, ಎದೆಭಾಗ ಹಾಗೂ ತಲೆಗೆ ಪೆಟ್ಟಾಗಿದೆ ಮತ್ತು ನನ್ನ ಪತಿಗೆ ಕಿವಿ ಹಾಗೂ ತಲೆಗೆ …

Read More »

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.   ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲಾಡ್ಜ್ ನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಇರುವ ಬ್ಯಾಗ್ ಪತ್ತೆ..!

ಹಾವೇರಿ : ಹಾವೇರಿನಗರದ ಶಿವಶಕ್ತಿ ಪ್ಯಾಲೆಸ್ ಲಾಡ್ಜ್ ‌ ನಲ್ಲಿ ದಾಖಲೆ ಇಲ್ಲದ 58 ಲಕ್ಷ ರೂ ಹಣ ಪತ್ತೆಯಾಗಿದೆ . ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಪೊಲೀಸರು ದಾಖಲೆ ಇಲ್ಲದ ಹಣ ಇಟ್ಟುಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ತನಿಖೆಯನ್ನ ಆರಂಭಿಸಿದ್ದಾರೆ . ಯಾವುದೋ ಅಕ್ರಮ ಎಸಗುವ ಉದ್ದೇಶದಿಂದ ಆರೋಪಿಗಳು ಸೂಕ್ತ ದಾಖಲೆಗಳಿಲ್ಲದ ಹಣ ಇಟ್ಟುಕೊಂಡಿದ್ರು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ . ಬಂಧಿತ ಅರೋಪಿಗಳನ್ನ ರವಿ , …

Read More »

ಸೋಮವಾರ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಮೇ 14- ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ.   ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. …

Read More »