Breaking News

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಜೊತೆ ಇರುವ ಯುವಕ ಯಾರು ಗೊತ್ತಾ..?

ಬೆಂಗಳೂರು : ಪರ್ಸನಲ್ ಲೈಫ್ ಮೂಲಕ ಮತ್ತೆ ರಮ್ಯಾ ಸದ್ದು ಮಾಡುತ್ತಿದ್ದು, ಗಾಂಧಿನಗರದಲ್ಲಿ ರಮ್ಯಾ ಫೋಟೋ ಸಖತ್ ಸೆನ್ಸೇಷನ್‌ ಕ್ರಿಯೇಟ್ ಮಾಡುತ್ತಿದೆ. ಸೋಷಿಯಲ್ ಮೀಡಿಯಾ ದಲ್ಲಿ ಪದ್ಮಾವತಿ ಫೋಟೋ ಸುಂಟರಗಾಳಿ ಎಬ್ಬಿಸಿದ್ದು, ಕೆಲ ಗಂಟೆಗಳ ಹಿಂದೆ ಸಖತ್ ಕ್ಲೋಸ್ ಆಗಿ ಹುಡುಗನ ಜೊತೆ ಇರುವ ಫೋಟೋವೊಂದನ್ನ ಸೋಷಿಯಲ್ ಮೀಡಿಯಾ ದಲ್ಲಿ ರಮ್ಯಾ ಶೇರ್ ಮಾಡಿದ್ರು, ರಮ್ಯಾ ಫೋಟೋ ನೋಡ್ತಿದಂತೆ ಅಭಿಮಾನಿಗಳು ಶಾಕ್ ಆಗಿದ್ದು, ಜೊತೆಗೆ ಫುಲ್ ಥ್ರಿಲ್ ಆಗಿದ್ದಾರೆ.   ಫೋಟೋದಲ್ಲಿ ರಮ್ಯಾ …

Read More »

ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

Read More »

80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಜ್ಯದ ಮೊದಲ ತೇಲುವ ಸೇತುವೆ ನಾಲ್ಕೇ ದಿನಕ್ಕೆ ಪೀಸ್ ಪೀಸ್

80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಜ್ಯದ ಮೊದಲ ತೇಲುವ ಸೇತುವೆ (Floating bridge) ಉದ್ಘಾಟನೆಗೊಂಡ ನಾಲ್ಕೇ ದಿನಕ್ಕೆ ತುಂಡಾಗಿದೆ. ಮಲ್ಪೆ ಬೀಚ್ ನಲ್ಲಿ ತಲೆ ಎತ್ತಿದ್ದ ಸೇತುವೆ ಸಮುದ್ರದ ಅಲೆಗಳ ರಭಸಕ್ಕೆ ಹಾನಿಗೀಡಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರವಾಸಿಗರಿಗೆ ತೊಂದರೆ ಆಗಿಲ್ಲ.   ಸಮುದ್ರದ ಅಲೆಗಳೊಂದಿಗೆ ತೇಲುವ ಈ ಸೇತುವೆ 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲ ವಿಸ್ತೀರ್ಣ ಹೊಂದಿತ್ತು. ಸೇತುವೆಯ ಎರಡು ಕಡೆಗಳಲ್ಲಿ ರೇಲಿಂಗ್ …

Read More »

ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹ: ಆರೋಪಿಗಳನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. , ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.  ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ …

Read More »

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …

Read More »

500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ …

Read More »

ಮೊದಲು ಕರ್ನಾಟಕದಲ್ಲಿ ಮದರಸಾವನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್

ಮೈಸೂರು: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್ ಮಾಡಿ  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ಮುಖಂಡರ ಹತ್ಯೆಯ ಪ್ಲಾನ್ ವಿಚಾರದ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಅಬ್ಬರ ಅಟ್ಟಹಾಸ ಹೆಚ್ಚಾಗತ್ತಿದೆ. ಕೊಲೆ, ಗಲಾಟೆ ಮಾಡುತ್ತಿರುವವರು ಹಿಂದೂಗಳಲ್ಲ.  ಮೈಸೂರಿನ ‘ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಅಂತ ಘೋಷಣೆ ಕೂಗಿದ್ದು, ಹುಬ್ಬಳ್ಳಿಯಲ್ಲಿ ದೇವಾಲಯದ ಮೇಲೆ ಕಲ್ಲೂತೂರಾಟ ನಡೆಸಿ ಹಲ್ಲೆ ನಡೆಸಿದ್ದೂ ಹಿಂದೂಗಳಲ್ಲ. ಹಿಂದೂಗಳಿಂದ …

Read More »

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. …

Read More »

‘ಸುಪ್ರೀಂ ಕೋರ್ಟ್‌ ಆದೇಶ ಎಲ್ಲರಿಗೂ ಅನ್ವಯ’

ಬೆಂಗಳೂರು: ‘ಧ್ವನಿವರ್ಧಕ ಬಳಕೆ ನಿರ್ಬಂಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶ ದೇವಸ್ಥಾನ, ಮಸೀದಿ ಎಲ್ಲವಕ್ಕೂ ಅನ್ವಯವಾಗುತ್ತದೆ. ಈ ವಿಚಾರದಲ್ಲಿ ಸಮಾಜಘಾತುಕ ಶಕ್ತಿಗಳು ರಾಜಕಾರಣ ಮಾಡಲು ಅವಕಾಶ ನೀಡುವುದಿಲ್ಲ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಮಸೀದಿಗಳಲ್ಲಿ ಆಜಾನ್‌ ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳ ಮೂಲಕ ಭಜನೆ ಮೊಳಗಿಸಬೇಕೆಂಬ ಹಿಂದುತ್ವ ಪರ ಸಂಘಟನೆಗಳ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾರೇ ತಪ್ಪು ಮಾಡಿದರೂ ನಾವು ಕ್ರಮ ಜರುಗಿಸುತ್ತೇವೆ. ಅವರು …

Read More »

‘ಗ್ರಾಮ ಒನ್‌’ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿ ಮೇಲೆ ನಿಗಾ ಇರಿಸಬೇಕು.: ಬೊಮ್ಮಾಯಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಹಾನಿಯಾಗುತ್ತದೆ. ಯಾವುದೇ ಸಂದರ್ಭದಲ್ಲೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಭಾನುವಾರ ಎಚ್ಚರಿಕೆ ನೀಡಿದರು.   ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ನಾಲ್ಕು ಗಂಟೆಗಳ ಕಾಲ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಅವರು, ಆಡಳಿತದ ವಿವಿಧ ಹಂತದಲ್ಲಿರುವ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ತಾಕೀತು ಮಾಡಿದರು. ಚುನಾವಣಾ ವರ್ಷವಾಗಿರುವ ಕಾರಣದಿಂದಬಜೆಟ್‌ ಘೋಷಣೆಗಳನ್ನು ಕಾಲಮಿತಿ ಯೊಳಗೆ …

Read More »