ನವದೆಹಲಿ: ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆಂದು ನಾನು ದೆಹಲಿಗೆ ಬಂದಿಲ್ಲ. ಯಾರದ್ದೋ ಕೈಕಾಲು ಹಿಡಿದು ಬಿಜೆಪಿ ಸೇರಲ್ಲ. ಬಿಜೆಪಿಗೆ ತಗೊಳ್ಳಿ ಅಂತಾ ಯಾರ ಬಳಿಯೂ ಹೋಗಲ್ಲ. ನಾವು ಸ್ವಾಭಿಮಾನದಿಂದ ಬದುಕಿರೋರು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿ ದ್ದಾರೆ. ಬಿಜೆಪಿ ಸೇರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭ್ರಷ್ಟ ಕುಟುಂಬದ ನೇತೃತ್ವವನ್ನು ನಾವು ಒಪ್ಪಲ್ಲ. ರಾಜ್ಯ ದಲ್ಲಿ ಭ್ರಷ್ಟ ಕುಟುಂಬ ಎಲ್ಲಿವರೆಗೆ ಇರುತ್ತೋ, ಅಲ್ಲಿವ ರೆಗೂ ಬಿಜೆಪಿ ಸೇರುವ ಪ್ರಶ್ನೆ …
Read More »ಮನೆ ಬೆಂಕಿ ಅಹುತಿಯಾದ ಕುಟುಂಬಕ್ಕೆ ಕನ್ನಡ ರಕ್ಷಣಾ ವೇದಿಕೆ ಮತ್ತು ಕನ್ನಡ ಸೇನೆ ಸಂಘಟನೆಯಿಂದ ಆಹಾರ ಕಿಟ್,ಬಟ್ಟೆ ವಿತರಣೆ
ಮೂಡಲಗಿ: ತಾಲೂಕಿನ ಬಡಿಗವಾಡ ಗ್ರಾಮದ ರೈತ ರಂಗಪ್ಪ ಮಾಳಪ್ಪ ಚೂಡಪ್ಪಗೋಳ ಹಾಗೂ ಪತ್ನಿ,ನಾಲ್ಕು ಜನ ಮಕ್ಕಳು ಸೇರಿ ಮನೆಯಲ್ಲಿ ವಾಸಿಸುತ್ತಿದ್ದರು. ಇತ್ತಿಚ್ಚೇಗೆ ಶನಿವಾರರಂದು ಬೆಳಗ್ಗೆ 10.30 ರ ಸುಮಾರಿಗೆ ಮನೆಯಲ್ಲಿ ಗ್ಯಾಸ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ಸಂಭವಿಸಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿತ್ತು ಮನೆಯಲ್ಲಿ ಚಿನ್ನಾಭರಣ,ಲಕ್ಷಾಂತರ ನಗದು ಹಣ,ಎರಡು ಎಮ್ಮೆ,ಒಂದು ಆಕಳು,ಗೃಹಬಳಕೆಯ ವಸ್ತುಗಳು,ದವಸ ಧಾನ್ಯಗಳು,ಬಟ್ಟೆ ಬರೆಗಳು,ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿರುವದರಿಂದಾ,ಕನ್ನಡ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಮತ್ತು …
Read More »ಇಸ್ಪೀಟ್ ಅಡ್ಡೆ ಮೇಲೆ ಯಮಕನಮರಡಿ ಪೊಲೀಸರ ದಾಳಿ: 9 ಜನರ ಬಂಧನ
ಬೆಳಗಾವಿ: ಜಿನರಾಳ ಗ್ರಾಮದ ಬ್ಯಾಡರಟ್ಟಿ ಕ್ರಾಸ್ ಹತ್ತಿರವಿರುವ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಯಮಕನಮರಡಿ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಯಮಕನಮರ್ಡಿ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದ ಪೊಲೀಸ್ ತಂಡವು ಜಿನರಾಳ ಗ್ರಾಮದ ಹದ್ದಿಯಲ್ಲಿರುವ ಬ್ಯಾಡರಟ್ಟಿ ಕ್ರಾಸ್ ಬಳಿಯ ಡೈಕ್ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಮಿಂಚಿನ ದಾಳಿ ನಡೆಸಿದೆ. ಬಂಧಿತರಲ್ಲಿ ಹುಕ್ಕೇರಿ ತಾಲೂಕಿನ ಹೊಸೂರು, ಯರನಾಳ ನಿವಾಸಿಗಳು ಹಾಗೂ …
Read More »ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯ
ವಿಧಾನಸೌಧ, ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣೆಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ …
Read More »ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿ ವಿನಯ್ ಕಪಾಳಕ್ಕೆ ಹೊಡೆದ ವಕೀಲರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ10 ಆಗಿರುವ ವಿನಯ್ಗೆ ಅವರ ವಕೀಲರಿಂದಲೇ ಕಪಾಳ ಮೋಕ್ಷವಾಗಿರುವ ಘಟನೆ ಬೆಂಗಳೂರಿನ ಕೋರ್ಟ್ ಆವರಣದಲ್ಲಿ ನಡೆದಿದೆ. ಎ10 ವಿನಯ್ ಸ್ಟೋನಿಬ್ರೂಕ್ ಮಾಲೀಕ. ಇತ್ತೀಚೆಗೆ ಆರೋಪಿ ವಕೀಲರ ಬದಲಾವಣೆಗೆ ಮುಂದಾಗಿದ್ದರು. ಈ ಬಗ್ಗೆ ಮತ್ತೆ ತಕರಾರು ತೆಗೆದಿದ್ದರು. ಇದರಿಂದ ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾ.9ರಂದು ನಟರಾಜ್ ಅವರು ವಿನಯ್ ಪರ ವಕಾಲತ್ತು ವಹಿಸಲು ಬಂದಿದ್ದರು. ಈ ವೇಳೆ ಅವರ ಬಳಿ ಬದಲಾವಣೆ ಬಗ್ಗೆ …
Read More »ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ
ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳು ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು. ಪುಣೆಯಲ್ಲಿರುವ ನನ್ನ …
Read More »ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ನಿವಾಸಿ ಸಂಜಯ ವಿಠ್ಠಲ ಬೈಲೂರ(೩೬) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ೧ ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ. ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಪುಸಲಾಯಿಸಿ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದೂರು …
Read More »ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್
ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು. ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ
ಯಾದಗಿರಿ: ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು (ಮಾ.9) ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೇ ಇದೀಗ ಮುತ್ಯಾ ಭಕ್ತರು …
Read More »ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ ಬರಲಿದ್ದು, ಮಾಹಿತಿ ಕೆಳಗಿನಂತಿದೆ. 1. ರೈಲು ಸಂಖ್ಯೆ 20669: ಎಸ್ಎಸ್ಎಸ್ ಹುಬ್ಬಳ್ಳಿ -ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯಲ್ಲಿ ಬೆಳಿಗ್ಗೆ 7:05ರಿಂದ 07:10 ಗಂಟೆ ಮತ್ತು ಘಟಪ್ರಭಾದಲ್ಲಿ ಬೆಳಿಗ್ಗೆ 07:48ರಿಂದ 07:50ರವರೆಗೆ ನಿಲುಗಡೆಯಾಗಲಿದೆ. 2. ರೈಲು ಸಂಖ್ಯೆ 20661: ಕೆಎಸ್ಆರ್ ಬೆಂಗಳೂರು -ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ದಾವಣಗೆರೆಯಲ್ಲಿ …
Read More »
Laxmi News 24×7