Breaking News

4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ,

ಬೆಂಗಳೂರು: ದೆಹಲಿಗೆ ತೆರಳಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಅಲ್ಲಿ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಮಾಧ್ಯಮಗಳಿಂದ ಬಂದ ವಿಚಾರ ಅಷ್ಟೇ. ಪಕ್ಷದಲ್ಲಿ ಈ ಬಗ್ಗೆ ಯಾವುದೇ‌ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Read More »

ಹಿರಿಯ ರಂಗ ಕಲಾವಿದೆ ಲಕ್ಷ್ಮೀ ಬಾಯಿ ಏಣಗಿ ನಿಧನ

ಧಾರವಾಡ: ಪ್ರಸಿದ್ದ ರಂಗ ಕಲಾವಿದೆ ಹಾಗೂ ದಿ. ಏಣಗಿ ಬಾಳಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಲಕ್ಷ್ಮಿಬಾಯಿ ಬಾಳಪ ಏಣಗಿ (96) ಮಂಗಳವಾರ ಇಲ್ಲಿನ ರಜತಗಿರಿ ನಿವಾಸದಲ್ಲಿ ನಿಧನರಾದರು. ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 2:೦೦ ಗಂಟೆಗೆ ಹೋಸಯಲಾಪೂರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.   ಚಿತ್ರನಟ ದಿ. ನಟರಾಜ ಏಣಗಿ ಹಾಗೂ ಓರ್ವಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. 1940-50 ರ …

Read More »

ಪಿಎಸ್‌ಐ ಪರೀಕ್ಷೆ ಅಕ್ರಮ: ಸ್ಫೋಟಕ ಅಂಶ ಬಯಲು ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು. ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ …

Read More »

ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಪಿಎಸ್ ಐ ವರ್ಗಾವಣೆ ಆರೋಪಿಗಳು ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಸರಕಾರ ಸಾಮಾನ್ಯ ಜನಪೀಡಕ ಸರಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳಾದ ದರ್ಶನ ಗೌಡ ಹಾಗೂ ನಾಗೇಶ್ ಗೌಡ ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಕಾರಣಕ್ಕಾಗಿ ಅವರನ್ನು ಬಿಟ್ಟುಕಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರ ನೇಮಕದಲ್ಲೂ ಅಕ್ರಮ ನಡೆದಿದ್ದು, ಅಶ್ವತ್ಥನಾರಾಯಣ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ …

Read More »

ಬಸವ ಜಯಂತಿಯಂದೇ ಬಸವಣ್ಣನಿಗೆ ಅಪಮಾನ!

ವಿಜಯಪುರ: ಬಸವ ಜಯಂತಿಯಂದೇ ಜಗಜ್ಯೋತಿ ಬಸವಣ್ಣನಿಗೆ ಅಪಮಾನ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಗಜ್ಯೋತಿ ಬಸವೇಶ್ವರ ದಿನಾಚಾರಣೆಯನ್ನು ವಿಜಯಪುರದಲ್ಲಿ ಆದ್ಧೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರರ ಮೂರ್ತಿ ಎದುರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆಯಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಎಸ್ಪಿ ಆನಂದ ಕುಮಾರ ಸೇರಿದಂತೆ ಹಲವರು ಭಾಗಿ ಆಗಿದ್ದರು. ಇದೆ ವೇಳೆ ಬಸವೇಶ್ವರರಿಗೆ ಅಪಮಾನ ಮಾಡಿದ ಘಟನೆ ಕೂಡ ನಡೆಯಿತು.ಸಂಸದ ರಮೇಶ ಜಿಗಜಿಣಗಿ ಶೂ ಧರಿಸಿ ಪೂಜೆಯಲ್ಲಿ ಪಾಲ್ಗೊಂಡರು‌. …

Read More »

ಎತ್ತುಗಳ ಮೆರವಣಿಗೆ ವೇಳೆ ಚಪ್ಪಲಿ ತೂರಿದ ಯುವಕನನ್ನು ಥಳಿಸಿದ ಗ್ರಾಮಸ್ಥರು

ಹಾವೇರಿ: ಬಸವ ಜಯಂತಿ ಪ್ರಯುಕ್ತ ನಡೆದ ಎತ್ತುಗಳ ಮೆರವಣಿಗೆ ವೇಳೆ ಸವಣೂರು ತಾಲೂಕಿನ ಗ್ರಾಮದಲ್ಲಿ ಯುವಕನೊಬ್ಬ ಚಪ್ಪಲಿ ತೂರಿ ವಿಕೃತಿ ಮೆರೆದಿದ್ದಾನೆ. ಮಂಗಳವಾರ ರಾತ್ರಿ ಕಾರಡಗಿ ಗ್ರಾಮದಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎತ್ತುಗಳ ಮೇಲೆ ಖಾಜಾಮುದ್ದೀನ್ ಕೋಲ್ಕಾರ(29) ಎಂಬಾತ ಚಪ್ಪಲಿ ತೂರಿದ್ದಾನೆ. ಚಪ್ಪಲಿ ತೂರಿದ್ದಕ್ಕೆ ಆಕ್ರೋಶಗೊಂಡ ಜನರು ಯುವಕನನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಖಾಜಾಮುದ್ಧೀನ್‌ನನ್ನು ವಶಕ್ಕೆ ಪಡೆದಿದ್ದಾರೆ. 

Read More »

ಆಮೆಗತಿಯಲ್ಲಿ ಸಾಗುತ್ತಿದೆ ಚಿಕ್ಕೋಡಿಯ ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ

ಅಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡ ಕಟ್ಟಲಾಗುತ್ತಿದೆ. ಎರಡೂ ವರ್ಷ ಮುಂಚೆಯೇ ಪೂರ್ಣಗೊಳ್ಳಬೇಕಾಗಿದ್ದ ಕಾಮಗಾರಿ… ಸದ್ಯ ಈ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ..ಬೇಗನೆ ಕಾಮಗಾರಿ ಮುಗಿಸುವಂತೆ ಒತ್ತಾಯಿಸುತ್ತಿದ್ದಾರೆ.ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರ 20 ಕೋಟಿ ಅನುದಾನ ನೀಡಿ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯ ಬಾಣಂತಿ ಕೋಡಿ ರಸ್ತೆ ಪಕ್ಕದಲ್ಲಿ ನಿರ್ಮಾಣ ವಾಗುತ್ತಿರುವ ತಾಯಿ …

Read More »

M.E.S.ಬಾಲ ಬಿಚ್ಚೋಕೆ ಬಿಡಬಾರದು: ಸಿದ್ದರಾಮಯ್ಯ ಎಚ್ಚರಿಕೆ

ಗಡಿ ವಿವಾದಲ್ಲಿ ಮತ್ತೆ ಉದ್ಧಟತನ ಮೆರೆದ ನಾಡದ್ರೋಹಿ ಎಂಇಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಂಇಎಸ್‍ನವರ ಪುಂಡಾಟಿಕೆಯನ್ನ ಸರ್ಕಾರ ಹತ್ತಿಕ್ಕಬೇಕು. ಎಂಇಎಸ್ ಬಾಲ ಬಿಚ್ಚೋಕೆ ಬಿಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಾಡದ್ರೋಹಿ ಎಂಇಎಸ್ ಮುಖಂಡನೊರ್ವ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಬಾಲ್ಕಿ ಸಹಿತ ನೂತನ ನಕ್ಷೆ ತಯಾರಿಸಿ ಅಖಂಡ ಮಹಾರಾಷ್ಟ್ರ ನಕ್ಷೆ ಇರುವ ಪೋಸ್ಟ ಫೇಸಬುಕ್‍ನಲ್ಲಿ ಹಾಕಿರುವ ಬಗ್ಗೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್‍ಎಚ್ ಗ್ರಾಮದಲ್ಲಿ …

Read More »

ಶ್ರೀ ದೊಡ್ಡಣ್ಣ ದಿ.5 ರಂದು ಬೆಳಗಾವಿಗೆ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ದೊಡ್ಡಣ್ಣ ಅವರು ಇದೇ ಗುರುವಾರ ದಿ.5 ರಂದು ಬೆಳಗಾವಿಗೆ ಆಗಮಿಸಲಿದ್ದು ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕನ್ನಡ ಸಂಘ ಸಂಸ್ಥೆಗಳ ಸನ್ಮಾನವನ್ನು ಸ್ವೀಕರಿಸಲಿದ್ದಾರೆ. ಮುಂಜಾನೆ 10.30 ಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸರಳ ಕಾರ್ಯಕ್ರಮದಲ್ಲಿ ದೊಡ್ಡಣ್ಣ ಅವರು ಕನ್ನಡ ನಾಡು, ನುಡಿ ಮತ್ತು ಗಡಿಯ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳ …

Read More »

ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣ

ಅತಿಯಾದ ಮಾನವನ ಚಟುವಟಿಕೆ ಹಾಗೂ ಸುಸ್ಥಿರವಲ್ಲದ ಅಸಮತೋಲಿತ ಅಭಿವೃದ್ಧಿಯ ಪರಿಣಾಮ ನೈಸರ್ಗಿಕ ಸಂಪನ್ಮೂಲಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ. ಗಾಳಿಯ ಗುಣಮಟ್ಟ ಕುಸಿದಿದೆ, ಹಲವೆಡೆ ನೀರಿಗೆ ಬರ ಎದುರಾಗಿದೆ. ಮಣ್ಣು ಲವತ್ತತೆ ಕಳೆದುಕೊಳ್ಳುತ್ತಿದೆ. ಈಗ ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣವಾಗಿದೆ. ಜಾಗತಿಕವಾಗಿ ಅತಿ ಹೆಚ್ಚು ಗಣಿಗಾರಿಕೆ ಆಗುತ್ತಿರುವ ನೈಸರ್ಗಿಕ ಸಂಪನ್ಮೂಲಗಳಲ್ಲಿ ಮರಳು ಪ್ರಮುಖವಾದದ್ದು. ಅನಿಯಂತ್ರಿತ ಮರಳು ಎತ್ತುವಳಿ ಮತ್ತು ಅದರಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ …

Read More »