Breaking News

M.E.S.ಬಾಲ ಬಿಚ್ಚೋಕೆ ಬಿಡಬಾರದು: ಸಿದ್ದರಾಮಯ್ಯ ಎಚ್ಚರಿಕೆ

ಗಡಿ ವಿವಾದಲ್ಲಿ ಮತ್ತೆ ಉದ್ಧಟತನ ಮೆರೆದ ನಾಡದ್ರೋಹಿ ಎಂಇಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಂಇಎಸ್‍ನವರ ಪುಂಡಾಟಿಕೆಯನ್ನ ಸರ್ಕಾರ ಹತ್ತಿಕ್ಕಬೇಕು. ಎಂಇಎಸ್ ಬಾಲ ಬಿಚ್ಚೋಕೆ ಬಿಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಾಡದ್ರೋಹಿ ಎಂಇಎಸ್ ಮುಖಂಡನೊರ್ವ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಬಾಲ್ಕಿ ಸಹಿತ ನೂತನ ನಕ್ಷೆ ತಯಾರಿಸಿ ಅಖಂಡ ಮಹಾರಾಷ್ಟ್ರ ನಕ್ಷೆ ಇರುವ ಪೋಸ್ಟ ಫೇಸಬುಕ್‍ನಲ್ಲಿ ಹಾಕಿರುವ ಬಗ್ಗೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್‍ಎಚ್ ಗ್ರಾಮದಲ್ಲಿ …

Read More »

ಶ್ರೀ ದೊಡ್ಡಣ್ಣ ದಿ.5 ರಂದು ಬೆಳಗಾವಿಗೆ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ದೊಡ್ಡಣ್ಣ ಅವರು ಇದೇ ಗುರುವಾರ ದಿ.5 ರಂದು ಬೆಳಗಾವಿಗೆ ಆಗಮಿಸಲಿದ್ದು ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕನ್ನಡ ಸಂಘ ಸಂಸ್ಥೆಗಳ ಸನ್ಮಾನವನ್ನು ಸ್ವೀಕರಿಸಲಿದ್ದಾರೆ. ಮುಂಜಾನೆ 10.30 ಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸರಳ ಕಾರ್ಯಕ್ರಮದಲ್ಲಿ ದೊಡ್ಡಣ್ಣ ಅವರು ಕನ್ನಡ ನಾಡು, ನುಡಿ ಮತ್ತು ಗಡಿಯ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳ …

Read More »

ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣ

ಅತಿಯಾದ ಮಾನವನ ಚಟುವಟಿಕೆ ಹಾಗೂ ಸುಸ್ಥಿರವಲ್ಲದ ಅಸಮತೋಲಿತ ಅಭಿವೃದ್ಧಿಯ ಪರಿಣಾಮ ನೈಸರ್ಗಿಕ ಸಂಪನ್ಮೂಲಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ. ಗಾಳಿಯ ಗುಣಮಟ್ಟ ಕುಸಿದಿದೆ, ಹಲವೆಡೆ ನೀರಿಗೆ ಬರ ಎದುರಾಗಿದೆ. ಮಣ್ಣು ಲವತ್ತತೆ ಕಳೆದುಕೊಳ್ಳುತ್ತಿದೆ. ಈಗ ವಿಶ್ವದಾದ್ಯಂತ ಮರಳಿನ ಅಭಾವ ಆತಂಕಕ್ಕೆ ಕಾರಣವಾಗಿದೆ. ಜಾಗತಿಕವಾಗಿ ಅತಿ ಹೆಚ್ಚು ಗಣಿಗಾರಿಕೆ ಆಗುತ್ತಿರುವ ನೈಸರ್ಗಿಕ ಸಂಪನ್ಮೂಲಗಳಲ್ಲಿ ಮರಳು ಪ್ರಮುಖವಾದದ್ದು. ಅನಿಯಂತ್ರಿತ ಮರಳು ಎತ್ತುವಳಿ ಮತ್ತು ಅದರಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ …

Read More »

ಚಿಕನ್​ ಶೋರ್ಮಾ ತಿಂದ ಮರುದಿನವೇ ವಿದ್ಯಾರ್ಥಿನಿ ಸಾವು

ಕಾಸರಗೋಡು: ಚಿಕನ್​ ಶೋರ್ಮಾ ತಿಂದ ಬಳಿಕ ಫುಡ್​ ಪಾಯಿಸನ್ ಆಗಿ 16 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದ ಚೆರ್ವತ್ತೂರಿನಲ್ಲಿ ನಡೆದಿದೆ. ಇದಲ್ಲದೆ, 14 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.   ಮೃತ ವಿದ್ಯಾರ್ಥಿನಿಯನ್ನು ಕರಿವೆಳ್ಳೂರು ಪೆರಳಂ ನಿವಾಸಿ ದೇವಾನಂದಾ (16) ಎಂದು ಗುರುತಿಸಲಾಗಿದೆ. ಚೆರ್ವತ್ತೂರಿನ ಐಡಿಯಲ್ ಫುಡ್​ ಪಾಯಿಂಟ್​ನಲ್ಲಿ ವಿದ್ಯಾರ್ಥಿಗಳು ಶನಿವಾರ ಶೋರ್ಮಾ ಸೇವಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರ ಕಾಣಿಸಿಕೊಂಡಿದೆ. …

Read More »

ಬಸ್​ ಚಾಲಕನನ್ನು ಪ್ರೀತಿಸಿ ಮದುವೆಯಾದ ಇಂಜಿನಿಯರಿಂಗ್​ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​!

ವೇಮುರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಿಸಿರುವ ಘಟನೆ ಆಂಧ್ರ ಪ್ರದೇಶದ ಅನಂತವರಂನಲ್ಲಿ ಸೋಮವಾರ ನಡೆದಿದೆ. ಆಂಧ್ರ ಪೊಲೀಸರ ಪ್ರಕಾರ ಗುಂಟೂರು ಜಿಲ್ಲೆಯ ಕೊಲ್ಲಿಪರ ಮಂಡಲದ ಲಕ್ಷ್ಮೀ ಪೂಜಿತ ಎಂಬಾಕೆ ಅನಂತಪುರ ಜಿಲ್ಲೆಯ ಕೊಲ್ಲೂರು ವಲಯದ ವಿಶ್ವನಾಥ್​ ಎಂಬಾತನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ. ಲಕ್ಷ್ಮೀ ಪೂಜಿತಾ ತೆನಾಲಿ ಬಳಿಯ ಇಂಜಿನಿಯರ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಶ್ವನಾಥ್​ ಅದೇ ಕಾಲೇಜಿನಲ್ಲಿ ಬಸ್​ ಚಾಲಕನಾಗಿದ್ದ. ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರು ಕಳೆದ ಏಪ್ರಿಲ್​ …

Read More »

ಶಾಲೆಗಳಿಗೆ ಬೇಸಿಗೆ ರಜೆ ವಿಸ್ತರಣೆ ಸಾಧ್ಯತೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ರಜೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೇ 16 ರಿಂದ 2022 -23 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಕೊರೋನಾ ಕಾರಣದಿಂದ ಎರಡು ವರ್ಷ ಶೈಕ್ಷಣಿಕ ಅವಧಿ ವಿಳಂಬವಾಗಿದೆ. ಈ ಬಾರಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಅವಧಿ ವಿಸ್ತರಿಸಬೇಕೆಂದು ವಿಧಾನಪರಿಷತ್ …

Read More »

P.S.I. ಆಗಬೇಕು ಅಂತ ಮನಿ ಪ್ಲಾಟ್ ಮಾರಿ ರೊಕ್ಕಾ ಕೊಟ್ಟವನ ಮನಿಗೆ ಪೋಲಿಸ್ ಬಂದ ಅರೆಸ್ಟ್ ಮಾಡಿಕೊಂಡ ಹೋಗೋ ಹಾಗ್ ಆಗೆತಿ..

ಕಲಬುರಗಿ: ಮಗ ಪಿಎಸ್‌ಐ ಆಗುತ್ತಾನೆಂದು ತಂದೆ ಮನೆ, ಸೈಟು ಮಾರಿ 50 ಲಕ್ಷ ರೂಪಾಯಿ ಲಂಚ ಕೊಟ್ಟು, ದುಡ್ಡೂ ಇಲ್ಲದೇ, ಕೆಲಸವೂ ಇಲ್ಲದೇ ಗೋಳಾಡುವ ಸ್ಥಿತಿ ಶರಣಪ್ಪ ಎನ್ನುವವರಿಗೆ ಬಂದಿದೆ. ಮಗ ಪ್ರಭು ಪಿಎಸ್​ಐ ಆಗಲಿ ಎನ್ನುವ ಕಾರಣಕ್ಕೆ ಎಲ್ಲವನ್ನೂ ಮಾರಿ ಇದೀಗ ಬೀದಿಗೆ ಬಂದದ್ದೂ ಅಲ್ಲದೇ, ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಂದೆ-ಮಗನನ್ನು ವಶಕ್ಕೆ ಪಡೆಯಲಾಗಿದೆ. ಆಡಿಟರ್ ಚಂದ್ರಕಾಂತ್ ಕುಲಕರ್ಣಿ ಮುಖಾಂತರ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಆರ್​.ಡಿ. ಪಾಟೀಲ್ ಅವರಿಗೆ …

Read More »

ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು. ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ …

Read More »

ಎಂಟಿಬಿಗೆ ಇದೀಗ ಅವರ ತಪ್ಪು ಗೊತ್ತಾಗಿದೆ: ಪರಮೇಶ್ವರ್

ಮಡಿಕೇರಿ: ಎಂಟಿಬಿ ಅವರಿಗೆ ಅವರು ಮಾಡಿದ ತಪ್ಪು ಇದೀಗ ಗೊತ್ತಾಗಿದೆ. ಈಗ ಅವರಿಗೆ ಪಶ್ಚಾತ್ತಾಪ ಆಗಿದೆ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೇಳಿದರು. ಮಡಿಕೇರಿಯ ನಗರ ಸಮೀಪದ ಕರ್ಣಗೇರಿ ಗ್ರಾಮದಲ್ಲಿ ಇರುವ ರಾಜರಾಜೇಶ್ವರಿ ದೇಗುಲಕ್ಕೆ ಪರಮೇಶ್ವರ್ ದಂಪತಿ ಭೇಟಿ ನೀಡಿ ವಾರ್ಷಿಕ ಜಾತ್ರೋತ್ಸವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ  ಬಿಜೆಪಿಗೆ ಸೇರಿ ತಪ್ಪು ಮಾಡಿದೆವು ಎಂದು ಸಚಿವ ಎಂಟಿಬಿ ನಾಗರಾಜ್ ಬಹಿರಂಗ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, …

Read More »

ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ..

ಬೆಂಗಳೂರು: ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾಗಲಿದೆ. ಈಗ ಲಭ್ಯವಾಗಿರುವ ಮಾಹಿತಿ‌ ಪ್ರಕಾರ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ/ ಪಂಗಡದ‌ ಪ್ರಭಾವಿ ನಾಯಕರಿಗೆ ಉಪ‌ಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕ ಸಾಧ್ಯತೆ‌ ಇದೆ. ಅಲ್ಲಿಯೂ ಕೂಡಾ …

Read More »